‘ರಾಜ್ಬಾಗ್ ಪ್ರದೇಶದ ನದಿ ಬಳಿಯಿರುವ ತಾತ್ಕಾಲಿಕ ಆಶ್ರಯ ತಾಣದಲ್ಲಿ ಅಲೆಮಾರಿ ಬುಡಕಟ್ಟು ಜನರು ಸಿಲುಕಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾದರು. ಠಾಣಾಧಿಕಾರಿ ಭೂಪಿಂದರ್ ಸಿಂಗ್ ಅವರ ನೇತೃತ್ವದಲ್ಲಿ ತಕ್ಷಣವೇ ಸ್ಥಳಕ್ಕೆ ತೆರಳಿದ ಪೊಲೀಸರು ಮಹಿಳೆ, ಮಕ್ಕಳು ಸೇರಿದಂತೆ ಮೂರು ಕುಟುಂಬಗಳ ಸದಸ್ಯರನ್ನು ರಕ್ಷಿಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.