ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ಜೈಲಿನಿಂದ ಬಿಡುಗಡೆಯಾದ 15 ಮೀನುಗಾರರು ಚೆನ್ನೈಗೆ ಆಗಮನ

Published 21 ನವೆಂಬರ್ 2023, 5:44 IST
Last Updated 21 ನವೆಂಬರ್ 2023, 5:44 IST
ಅಕ್ಷರ ಗಾತ್ರ

ಚೆನ್ನೈ: ಶ್ರೀಲಂಕಾದ ಜೈಲಿನಿಂದ ಬಿಡುಗಡೆಗೊಂಡ ತಮಿಳುನಾಡಿನ 15 ಮೀನುಗಾರರು ಮಂಗಳವಾರ ಚೆನ್ನೈಗೆ ಆಗಮಿಸಿದರು.

ಬೆಳಿಗ್ಗೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೀನುಗಾರರನ್ನು, ತಮಿಳುನಾಡು ಬಿಜೆಪಿಯ ರಾಜ್ಯ ನಾಯಕರು ಸ್ವಾಗತಿಸಿದರು. ಬಳಿಕ ಅವರು ರಸ್ತೆ ಮಾರ್ಗದ ಮೂಲಕ ರಾಮೇಶ್ವರಂಗೆ ತೆರಳಿದರು.

ನವೆಂಬರ್‌ 14ರಂದು ಇವರು ಎರಡು ಯಾಂತ್ರಿಕೃತ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಜಲ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆರೋಪದಲ್ಲಿ ಅವರನ್ನು ಶ್ರೀಲಂಕಾ ಬಂಧಿಸಿತ್ತು.

ಅಕ್ಟೋಬರ್ 28ರಂದು ಕೂಡ ಮೀನುಗಾರಿಕೆಗೆ ತೆರಳಿದ್ದ 23 ಮಂದಿಯನ್ನು ಶ್ರಿಲಂಕಾದ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಕೇಂದ್ರ ಹಾಗೂ ರಾಜ್ಯ ಸರ್ಕಾರ, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಬಿಡುಗಡೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT