ಈ ವೇಳೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಹುತಾತ್ಮ ಕುಟುಂಬಗಳ ಸದಸ್ಯರನ್ನು ಭೇಟಿ ಮಾಡಿ, ‘ನಿಮ್ಮೊಂದಿಗೆ ಸದಾ ನಾವು ಇದ್ದೇವೆ‘ ಎಂದು ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸಚಿವರಾದ ದೀಪಕ್ ಕೇಸರ್ಕರ್, ಮಂಗಲಪ್ರಭಾತ್ ಲೋಧಾ, ಪೊಲೀಸ್ ಮಹಾನಿರ್ದೇಶಕ ರಜನೀಶ್ ಶೇಠ್ ಮತ್ತು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಉಪಸ್ಥಿತರಿದ್ದರು.
ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕ ಗುಂಪಿನ ಭಯೋತ್ಪಾದಕರು 2008ರ ನವೆಂಬರ್ 26ರಂದು ರಾತ್ರಿ ಮುಂಬೈ ನಗರವನ್ನು ಪ್ರವೇಶಿಸಿದ್ದರು. ಏಕಾಏಕಿ ನಡೆಸಿದ ಗುಂಡಿನಲ್ಲಿ ದಾಳಿಯಲ್ಲಿ ನಾಲ್ಕು ದಿನಗಳ ಅವಧಿಯಲ್ಲಿ 166 ಜನರು ಮೃತಪಟ್ಟು 300 ಜನರು ಗಾಯಗೊಂಡಿದ್ದರು.