ಸೆಪ್ಟೆಂಬರ್ ಮಧ್ಯದಿಂದ ರಾಜ್ಯದಲ್ಲಿ ಅಧಿಕ ಮಳೆ ಮತ್ತು ಹಿಮ ಸುರಿಯುತ್ತಿದ್ದು, ಬಹುತೇಕ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಭಾರತೀಯ ವಾಯುಪಡೆ ಮತ್ತು ಬಿಆರ್ಒ ಸಿಬ್ಬಂದಿ ನಿರಂತರ ಶ್ರಮದಿಂದ ಹಿಮಾವೃತ ಪ್ರದೇಶಗಳಲ್ಲಿ ಸಿಲುಕಿದ್ದ ಅನೇಕರನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ಇನ್ನೂ ಕೆಲ ಭಾಗಗಳಲ್ಲಿ ವಾಯುಪಡೆ ಹೆಲಿಕಾಪ್ಟರ್ಗಳ ಮೂಲಕ ಆಹಾರ ಮತ್ತು ಅಗತ್ಯ ಪದಾರ್ಥಗಳನ್ನು ತಲುಪಿಸಿದೆ. ಇದೀಗ ಚಂಡೀಗಢ–ಮನಾಲಿ ಸೇರಿದಂತೆ ಹಿಮಾಚಲದ 600 ರಸ್ತೆಗಳು ಸಂಚಾರಕ್ಕೆ ಮುಕ್ತಗೊಳಿಸಿರುವುದಾಗಿ ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿ ತಿಳಿಸಿದರು.