<p><strong>ತಿರುವನಂತಪುರ:</strong> ಕೇರಳ ರಾಜ್ಯ ಸಾಕ್ಷರತಾ ಮಿಷನ್ ಪ್ರಾಧಿಕಾರ (ಕೆಎಸ್ಎಲ್ಎಂಎ) ನಡೆಸುವ ಹೈಯರ್ ಸೆಕೆಂಡರಿ ಪರೀಕ್ಷೆ(12ನೇ ತರಗತಿ)ಯಲ್ಲಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ 18 ಮಂದಿ ಉತ್ತೀರ್ಣರಾಗಿದ್ದಾರೆ.</p>.<p>ಇದು ಪ್ರಾಧಿಕಾರ ನಡೆಸುತ್ತಿರುವ ಹೈಯರ್ ಸೆಕಂಡರಿ ಪರೀಕ್ಷೆಯನ್ನು ಪಾಸು ಮಾಡಿದ ಮೊದಲ ತಂಡವಾಗಿದೆ.</p>.<p>'ಲೈಂಗಿಕ ಅಲ್ಪಸಂಖ್ಯಾತ ನೀತಿ' ಜಾರಿಗೆ ತಂದ ಮೊದಲ ರಾಜ್ಯ ಕೇರಳ. ಈ ನೀತಿಯಡಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯವನ್ನು ಮುಖ್ಯವಾಹಿನಿಗೆ ತರುವುದಕ್ಕಾಗಿ 2018 ರಲ್ಲಿ ಕೆಎಸ್ಎಲ್ಎಂಎ ಮತ್ತು ಸಾಮಾಜಿಕ ನ್ಯಾಯ ಇಲಾಖೆ ಜಂಟಿಯಾಗಿ 'ಸಮನ್ವಯ' ಎಂಬ ಕಾರ್ಯಕ್ರಮವನ್ನು ಪರಿಚಯಿಸಿತ್ತು.</p>.<p>ಪರೀಕ್ಷೆಗೆ ಒಟ್ಟು 22 ಜನರು ಹಾಜರಾಗಿದ್ದು, ಪತ್ತನಂತಿಟ್ಟ, ತಿರುವನಂತಪುರ ಮತ್ತು ಕೊಲ್ಲಂ ಸೇರಿದಂತೆ ವಿವಿಧ ಜಿಲ್ಲೆಗಳ 18 ಮಂದಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕೆಎಸ್ಎಲ್ಎಂಎ ಪ್ರಕಟಣೆ ತಿಳಿಸಿದೆ.</p>.<p>ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಆಟೊ ಚಾಲಕ ಕಾರ್ತಿಕ್ ಕೇರಳ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿಗೆ ಪ್ರವೇಶ ಪಡೆದಿದ್ದಾರೆ ಎಂದು ಕೆಎಸ್ಎಲ್ಎಂಎ ಮೂಲಗಳು ತಿಳಿಸಿವೆ.</p>.<p>ಕೆಎಸ್ಎಲ್ಎಂಎ ನಡೆಸುವ ಹತ್ತನೇ ತರಗತಿ ಪರೀಕ್ಷೆಯ ತತ್ಸಮಾನ ಪರೀಕ್ಷೆಯಲ್ಲಿ ಒಟ್ಟು 39 ಲೈಂಗಿಕ ಅಲ್ಪಸಂಖ್ಯಾತರು ಪಾಸಾಗಿದ್ದಾರೆ. ಸದ್ಯ ಮೂವತ್ತು ಮಂದಿ ಪರೀಕ್ಷೆ ಬರೆಯಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳ ರಾಜ್ಯ ಸಾಕ್ಷರತಾ ಮಿಷನ್ ಪ್ರಾಧಿಕಾರ (ಕೆಎಸ್ಎಲ್ಎಂಎ) ನಡೆಸುವ ಹೈಯರ್ ಸೆಕೆಂಡರಿ ಪರೀಕ್ಷೆ(12ನೇ ತರಗತಿ)ಯಲ್ಲಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ 18 ಮಂದಿ ಉತ್ತೀರ್ಣರಾಗಿದ್ದಾರೆ.</p>.<p>ಇದು ಪ್ರಾಧಿಕಾರ ನಡೆಸುತ್ತಿರುವ ಹೈಯರ್ ಸೆಕಂಡರಿ ಪರೀಕ್ಷೆಯನ್ನು ಪಾಸು ಮಾಡಿದ ಮೊದಲ ತಂಡವಾಗಿದೆ.</p>.<p>'ಲೈಂಗಿಕ ಅಲ್ಪಸಂಖ್ಯಾತ ನೀತಿ' ಜಾರಿಗೆ ತಂದ ಮೊದಲ ರಾಜ್ಯ ಕೇರಳ. ಈ ನೀತಿಯಡಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯವನ್ನು ಮುಖ್ಯವಾಹಿನಿಗೆ ತರುವುದಕ್ಕಾಗಿ 2018 ರಲ್ಲಿ ಕೆಎಸ್ಎಲ್ಎಂಎ ಮತ್ತು ಸಾಮಾಜಿಕ ನ್ಯಾಯ ಇಲಾಖೆ ಜಂಟಿಯಾಗಿ 'ಸಮನ್ವಯ' ಎಂಬ ಕಾರ್ಯಕ್ರಮವನ್ನು ಪರಿಚಯಿಸಿತ್ತು.</p>.<p>ಪರೀಕ್ಷೆಗೆ ಒಟ್ಟು 22 ಜನರು ಹಾಜರಾಗಿದ್ದು, ಪತ್ತನಂತಿಟ್ಟ, ತಿರುವನಂತಪುರ ಮತ್ತು ಕೊಲ್ಲಂ ಸೇರಿದಂತೆ ವಿವಿಧ ಜಿಲ್ಲೆಗಳ 18 ಮಂದಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕೆಎಸ್ಎಲ್ಎಂಎ ಪ್ರಕಟಣೆ ತಿಳಿಸಿದೆ.</p>.<p>ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಆಟೊ ಚಾಲಕ ಕಾರ್ತಿಕ್ ಕೇರಳ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿಗೆ ಪ್ರವೇಶ ಪಡೆದಿದ್ದಾರೆ ಎಂದು ಕೆಎಸ್ಎಲ್ಎಂಎ ಮೂಲಗಳು ತಿಳಿಸಿವೆ.</p>.<p>ಕೆಎಸ್ಎಲ್ಎಂಎ ನಡೆಸುವ ಹತ್ತನೇ ತರಗತಿ ಪರೀಕ್ಷೆಯ ತತ್ಸಮಾನ ಪರೀಕ್ಷೆಯಲ್ಲಿ ಒಟ್ಟು 39 ಲೈಂಗಿಕ ಅಲ್ಪಸಂಖ್ಯಾತರು ಪಾಸಾಗಿದ್ದಾರೆ. ಸದ್ಯ ಮೂವತ್ತು ಮಂದಿ ಪರೀಕ್ಷೆ ಬರೆಯಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>