<p><strong>ಚೆನ್ನೈ:</strong>ದಿನಕರನ್ ಬಣದಲ್ಲಿ ಗುರುತಿಸಿಕೊಂಡಿದ್ದ ಎಎಐಡಿಎಂಕೆ ಪಕ್ಷದ 18 ಶಾಸಕರನ್ನುಒಂದು ವರ್ಷದ ಹಿಂದೆ ಅನರ್ಹಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ತೀರ್ಪು ಹೊರಬೀಳಲಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿಂತೆನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಎಂ. ಸುಂದರ್ ಅವರು ಭಿನ್ನ ನಿಲುವು ತಳೆದ ಕಾರಣ ಎಂ. ಸತ್ಯನಾರಾಯಣನ್ ಅವರನ್ನು ಮೂರನೇ ನ್ಯಾಯಮೂರ್ತಿಯನ್ನಾಗಿ ಸುಪ್ರೀಂ ಕೋರ್ಟ್ ನೇಮಕ ಮಾಡಿತ್ತು.</p>.<p>ತಮಿಳುನಾಡು ಮಾಜಿ ಮುಖ್ಯಮಂತ್ರಿ ಪನ್ನೀರಸೆಲ್ವಂ ಹಾಗೂಮುಖ್ಯಮಂತ್ರಿ ವಿರುದ್ಧ ಪಳನಿಸ್ವಾಮಿ ಬಣ ವಿಲೀನದ ಬಳಿಕ,ದಿನಕರನ್ ಜೊತೆ ಗುರುತಿಸಿಕೊಂಡಿದ್ದ 18 ಶಾಸಕರ ಭವಿಷ್ಯವು ಮೂರನೇ ನ್ಯಾಯಮೂರ್ತಿಗಳ ತೀರ್ಪನ್ನು ಅವಲಂಬಿಸಿದೆ.</p>.<p><span style="white-space:pre;">1986ರ ಪಕ್ಷಾಂತರ ವಿರೋಧಿ ಮತ್ತು ಅನರ್ಹತೆ ನಿಯಮಗಳ ಅಡಿಯಲ್ಲಿ 18 ಶಾಸಕರನ್ನು ಅನರ್ಹಗೊಳಿಸಲಾಗಿತ್ತು.</span></p>.<p>‘ಸಂವಿಧಾನದ 10ನೇ ಅನುಚ್ಛೇದದ ಅಡಿಯಲ್ಲೇ ಈ ನಿಯಮ ರೂಪಿಸಲಾಗಿದೆ. ಸಭಾಧ್ಯಕ್ಷರು 2017,ಸೆಪ್ಟೆಂಬರ್ 18ರಿಂದಲೇ ಅನ್ವಯವಾಗುವಂತೆ ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿರುವುದರಿಂದ ತಕ್ಷಣದಿಂದಲೇ ಅವರು ಸದಸ್ಯತ್ವ ಕಳೆದುಕೊಂಡಿದ್ದಾರೆ’ ಎಂದು ತಮಿಳುನಾಡು ವಿಧಾನಸಭಾ ಕಾರ್ಯದರ್ಶಿ ಕೆ. ಭೂಪತಿ ಅವರು ಆ ವೇಳೆ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong>ದಿನಕರನ್ ಬಣದಲ್ಲಿ ಗುರುತಿಸಿಕೊಂಡಿದ್ದ ಎಎಐಡಿಎಂಕೆ ಪಕ್ಷದ 18 ಶಾಸಕರನ್ನುಒಂದು ವರ್ಷದ ಹಿಂದೆ ಅನರ್ಹಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ತೀರ್ಪು ಹೊರಬೀಳಲಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿಂತೆನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಎಂ. ಸುಂದರ್ ಅವರು ಭಿನ್ನ ನಿಲುವು ತಳೆದ ಕಾರಣ ಎಂ. ಸತ್ಯನಾರಾಯಣನ್ ಅವರನ್ನು ಮೂರನೇ ನ್ಯಾಯಮೂರ್ತಿಯನ್ನಾಗಿ ಸುಪ್ರೀಂ ಕೋರ್ಟ್ ನೇಮಕ ಮಾಡಿತ್ತು.</p>.<p>ತಮಿಳುನಾಡು ಮಾಜಿ ಮುಖ್ಯಮಂತ್ರಿ ಪನ್ನೀರಸೆಲ್ವಂ ಹಾಗೂಮುಖ್ಯಮಂತ್ರಿ ವಿರುದ್ಧ ಪಳನಿಸ್ವಾಮಿ ಬಣ ವಿಲೀನದ ಬಳಿಕ,ದಿನಕರನ್ ಜೊತೆ ಗುರುತಿಸಿಕೊಂಡಿದ್ದ 18 ಶಾಸಕರ ಭವಿಷ್ಯವು ಮೂರನೇ ನ್ಯಾಯಮೂರ್ತಿಗಳ ತೀರ್ಪನ್ನು ಅವಲಂಬಿಸಿದೆ.</p>.<p><span style="white-space:pre;">1986ರ ಪಕ್ಷಾಂತರ ವಿರೋಧಿ ಮತ್ತು ಅನರ್ಹತೆ ನಿಯಮಗಳ ಅಡಿಯಲ್ಲಿ 18 ಶಾಸಕರನ್ನು ಅನರ್ಹಗೊಳಿಸಲಾಗಿತ್ತು.</span></p>.<p>‘ಸಂವಿಧಾನದ 10ನೇ ಅನುಚ್ಛೇದದ ಅಡಿಯಲ್ಲೇ ಈ ನಿಯಮ ರೂಪಿಸಲಾಗಿದೆ. ಸಭಾಧ್ಯಕ್ಷರು 2017,ಸೆಪ್ಟೆಂಬರ್ 18ರಿಂದಲೇ ಅನ್ವಯವಾಗುವಂತೆ ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿರುವುದರಿಂದ ತಕ್ಷಣದಿಂದಲೇ ಅವರು ಸದಸ್ಯತ್ವ ಕಳೆದುಕೊಂಡಿದ್ದಾರೆ’ ಎಂದು ತಮಿಳುನಾಡು ವಿಧಾನಸಭಾ ಕಾರ್ಯದರ್ಶಿ ಕೆ. ಭೂಪತಿ ಅವರು ಆ ವೇಳೆ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>