ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಖ್‌ ವಿರೋಧಿ ದಂಗೆ: ಸೆ. 6ರಂದು ಟೈಟ್ಲರ್‌ ವಿರುದ್ಧದ ಪ್ರಕರಣದ ವಿಚಾರಣೆ

Published 29 ಆಗಸ್ಟ್ 2023, 15:59 IST
Last Updated 29 ಆಗಸ್ಟ್ 2023, 15:59 IST
ಅಕ್ಷರ ಗಾತ್ರ

ನವದೆಹಲಿ: 1984ರ ಸಿಖ್‌ ವಿರೋಧಿ ದಂಗೆಯ ವೇಳೆ ದೆಹಲಿಯ ಪುಲ್‌ ಬಂಗಾಶ್‌ ಪ್ರದೇಶದಲ್ಲಿ ಮೂವರನ್ನು ಹತ್ಯೆ ಮಾಡಿ, ಗುರುದ್ವಾರಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣದ ವಿಚಾರಣೆಯನ್ನು ಇಲ್ಲಿನ ನ್ಯಾಯಾಲಯ ಸೆಪ್ಟೆಂಬರ್‌ 6 ರಂದು ನಡೆಸಲಿದೆ.

ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ವಿಧಿ ಗುಪ್ತಾ ಆನಂದ್ ಅವರು, ಈ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್‌ ಮುಖಂಡ ಜಗದೀಶ್ ಟೈಟ್ಲರ್‌ ಅವರಿಗೆ ವಾದಿಸಲು ಸಮಯಾವಕಾಶ ನೀಡಿದ್ದಾರೆ. ಸಿಬಿಐ ಸಲ್ಲಿಸಿದ್ದ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅವರು ಸಮಯಾವಕಾಶ ನೀಡಿದ್ದಾರೆ.

ಈ ಪ್ರಕಣದಲ್ಲಿ ಸೆಷನ್ಸ್‌ ನ್ಯಾಯಾಲಯವು ಟೈಟ್ಲರ್‌ ಅವರಿಗೆ ಈ ಹಿಂದೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT