<p><strong>ಮುಂಬೈ</strong>: ಸ್ಫೋಟ ಪರಿಕರಗಳನ್ನು ನಗರಕ್ಕೆ ತರಲು ಅನುವು ಮಾಡಿಕೊಟ್ಟಿದ್ದರು ಎಂಬ ಆರೋಪ ಎದುರಿಸುತ್ತಿದ್ದ ಕೇಂದ್ರ ಸುಂಕ ಇಲಾಖೆಯ ಇಬ್ಬರು ನಿವೃತ್ತ ಅಧಿಕಾರಿಗಳಿಗೆ, 20 ವರ್ಷಗಳ ತರುವಾಯ ಬಾಂಬೆ ಹೈಕೋರ್ಟ್ ಶಿಸ್ತುಕ್ರಮದಿಂದ ವಿನಾಯಿತಿ ನೀಡಿದೆ.</p>.<p>ಉಲ್ಲೇಖಿತ ಸ್ಫೋಟಕ ಪರಿಕರಗಳನ್ನೇ 1993ರಲ್ಲಿ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟ ಕೃತ್ಯ ನಡೆಸಲು ಬಳಸಲಾಗಿತ್ತು ಎಂಬ ಹಿನ್ನೆಲೆಯಲ್ಲಿ ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲು ಇಲಾಖೆಯಿಂದ ಆದೇಶಿಸಲಾಗಿತ್ತು. </p>.<p>ಅಧಿಕಾರಿಗಳ ವಿರುದ್ಧದ ಆರೋಪ ದೃಢಪಡಿಸಲು ಇಲಾಖಾ ತನಿಖೆಯ ವೇಳೆ ಯಾವುದೇ ಸಾಕ್ಷ್ಯ ಒದಗಿಸಿಲ್ಲ ಎಂಬ ಅಂಶವನ್ನು ಉಲ್ಲೇಖಿಸಿದ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ, ನ್ಯಾಯಮೂರ್ತಿ ಆರೀಫ್ ಡಾಕ್ಟರ್ ಅವರಿದ್ದ ಪೀಠ, ಆದೇಶ ವಜಾಗೊಳಿಸಿತು. </p>.<p>ಕೇಂದ್ರ ಸುಂಕ ಇಲಾಖೆಯ ನಿವೃತ್ತ ಸೂಪರಿಂಟೆಂಡೆಂಟ್ಗಳಾದ ಎಸ್.ಎಂ.ಪಡ್ವಾಲ್, ಯಶವಂತ ಲೋಟಲೆ ಅವರು ಬಾಕಿ ವೇತನ, ಪಿಂಚಣಿ ಒಳಗೊಂಡಂತೆ ನಿವೃತ್ತಿ ನಂತರದ ಸೌಲಭ್ಯಗಳಿಗೆ ಅರ್ಹರಿದ್ದಾರೆ. ಎರಡು ತಿಂಗಳಲ್ಲಿ ಇದನ್ನು ಪಾವತಿಸಬೇಕು ಎಂದು ಆದೇಶಿಸಿದೆ.</p>.<p>ಮುಂಬೈನಲ್ಲಿ ಮಾರ್ಚ್ 12, 1993ರಂದು ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟ ಕೃತ್ಯದಲ್ಲಿ 257 ಜನರು ಸತ್ತಿದ್ದು, 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ವಿಚಾರಣೆ ನಡೆಸಿದ್ದ ವಿಶೇಷ ಕೋರ್ಟ್ ಈ ಪ್ರಕರಣದ ಸಂಬಂಧ 100 ಜನರನ್ನು ಶಿಕ್ಷೆಗೆ ಗುರಿಪಡಿಸಿತ್ತು.</p>.<p>ಸರಣಿ ಬಾಂಬ್ ಸ್ಫೋಟ ಪ್ರಕರಣದ ಸಂಬಂಧ ಕೇಂದ್ರ ಸುಂಕ ಇಲಾಖೆಯ ಇಬ್ಬರು ಅಧಿಕಾರಿಗಳು ಯಾವುದೇ ಕ್ರಿಮಿನಲ್ ವಿಚಾರಣೆಯನ್ನು ಎದುರಿಸಿಲ್ಲ ಎಂಬ ಅಂಶವನ್ನೂ ಶಿಸ್ತುಕ್ರಮದಿಂದ ವಿನಾಯಿತಿ ನೀಡಿ ಆದೇಶಿಸಿದ ಕೋರ್ಟ್ ಉಲ್ಲೇಖಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಸ್ಫೋಟ ಪರಿಕರಗಳನ್ನು ನಗರಕ್ಕೆ ತರಲು ಅನುವು ಮಾಡಿಕೊಟ್ಟಿದ್ದರು ಎಂಬ ಆರೋಪ ಎದುರಿಸುತ್ತಿದ್ದ ಕೇಂದ್ರ ಸುಂಕ ಇಲಾಖೆಯ ಇಬ್ಬರು ನಿವೃತ್ತ ಅಧಿಕಾರಿಗಳಿಗೆ, 20 ವರ್ಷಗಳ ತರುವಾಯ ಬಾಂಬೆ ಹೈಕೋರ್ಟ್ ಶಿಸ್ತುಕ್ರಮದಿಂದ ವಿನಾಯಿತಿ ನೀಡಿದೆ.</p>.<p>ಉಲ್ಲೇಖಿತ ಸ್ಫೋಟಕ ಪರಿಕರಗಳನ್ನೇ 1993ರಲ್ಲಿ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟ ಕೃತ್ಯ ನಡೆಸಲು ಬಳಸಲಾಗಿತ್ತು ಎಂಬ ಹಿನ್ನೆಲೆಯಲ್ಲಿ ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲು ಇಲಾಖೆಯಿಂದ ಆದೇಶಿಸಲಾಗಿತ್ತು. </p>.<p>ಅಧಿಕಾರಿಗಳ ವಿರುದ್ಧದ ಆರೋಪ ದೃಢಪಡಿಸಲು ಇಲಾಖಾ ತನಿಖೆಯ ವೇಳೆ ಯಾವುದೇ ಸಾಕ್ಷ್ಯ ಒದಗಿಸಿಲ್ಲ ಎಂಬ ಅಂಶವನ್ನು ಉಲ್ಲೇಖಿಸಿದ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ, ನ್ಯಾಯಮೂರ್ತಿ ಆರೀಫ್ ಡಾಕ್ಟರ್ ಅವರಿದ್ದ ಪೀಠ, ಆದೇಶ ವಜಾಗೊಳಿಸಿತು. </p>.<p>ಕೇಂದ್ರ ಸುಂಕ ಇಲಾಖೆಯ ನಿವೃತ್ತ ಸೂಪರಿಂಟೆಂಡೆಂಟ್ಗಳಾದ ಎಸ್.ಎಂ.ಪಡ್ವಾಲ್, ಯಶವಂತ ಲೋಟಲೆ ಅವರು ಬಾಕಿ ವೇತನ, ಪಿಂಚಣಿ ಒಳಗೊಂಡಂತೆ ನಿವೃತ್ತಿ ನಂತರದ ಸೌಲಭ್ಯಗಳಿಗೆ ಅರ್ಹರಿದ್ದಾರೆ. ಎರಡು ತಿಂಗಳಲ್ಲಿ ಇದನ್ನು ಪಾವತಿಸಬೇಕು ಎಂದು ಆದೇಶಿಸಿದೆ.</p>.<p>ಮುಂಬೈನಲ್ಲಿ ಮಾರ್ಚ್ 12, 1993ರಂದು ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟ ಕೃತ್ಯದಲ್ಲಿ 257 ಜನರು ಸತ್ತಿದ್ದು, 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ವಿಚಾರಣೆ ನಡೆಸಿದ್ದ ವಿಶೇಷ ಕೋರ್ಟ್ ಈ ಪ್ರಕರಣದ ಸಂಬಂಧ 100 ಜನರನ್ನು ಶಿಕ್ಷೆಗೆ ಗುರಿಪಡಿಸಿತ್ತು.</p>.<p>ಸರಣಿ ಬಾಂಬ್ ಸ್ಫೋಟ ಪ್ರಕರಣದ ಸಂಬಂಧ ಕೇಂದ್ರ ಸುಂಕ ಇಲಾಖೆಯ ಇಬ್ಬರು ಅಧಿಕಾರಿಗಳು ಯಾವುದೇ ಕ್ರಿಮಿನಲ್ ವಿಚಾರಣೆಯನ್ನು ಎದುರಿಸಿಲ್ಲ ಎಂಬ ಅಂಶವನ್ನೂ ಶಿಸ್ತುಕ್ರಮದಿಂದ ವಿನಾಯಿತಿ ನೀಡಿ ಆದೇಶಿಸಿದ ಕೋರ್ಟ್ ಉಲ್ಲೇಖಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>