<p><strong>ನವದೆಹಲಿ:</strong> 1993ರ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಅಬ್ದುಲ್ ಕರೀಮ್ ತುಂಡಾನನ್ನು ದೋಷಮುಕ್ತಗೊಳಿಸಿರುವ ಅಜ್ಮೇರ್ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.<p>‘ಪ್ರಕರಣದಲ್ಲಿ 12 ಜನ ಆರೋಪಿಗಳಿದ್ದು, ಪ್ರಕರಣದ ಕುರಿತು ಗುರುವಾರ ತೀರ್ಪು ನೀಡಿದ ಟಾಡಾ ನ್ಯಾಯಾಲಯದ ನ್ಯಾಯಾಧೀಶರಾದ ಮಹಾವೀರ್ ಪ್ರಸಾದ್ ಗುಪ್ತಾ ಅವರು ಅದರಲ್ಲಿ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಆದರೆ ಪ್ರಮುಖ ಆರೋಪಿ ತುಂಡಾನನ್ನು ದೋಷಮುಕ್ತಗೊಳಿಸಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>1993 ರಲ್ಲಿ ಲಖನೌ, ಕಾನ್ಪುರ, ಹೈದರಾಬಾದ್, ಸೂರತ್ ಮತ್ತು ಮುಂಬೈ ನಗರಗಳಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿ ಹಲವರು ಗಾಯಗೊಂಡಿದ್ದರು, ಬಾಬ್ರಿ ಮಸೀದಿ ಧ್ವಂಸಗೊಂಡು ಒಂದು ವರ್ಷ ಪೂರ್ಣಗೊಂಡ ದಿನದಂದೇ ಸರಣಿ ಸ್ಫೋಟ ನಡೆದಿತ್ತು.</p>.<p>ಪ್ರಕರಣದ ತನಿಖೆ ನಡೆಸಿದ ಸಿಬಿಐ 21 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಅದರಲ್ಲಿ 15 ಜನ ಆರೋಪಿಗಳಿಗೆ ಟಾಡಾ ನ್ಯಾಯಾಲಯ 2004ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಸುಪ್ರೀಂ ಕೋರ್ಟ್ ಕೂಡಾ ಎತ್ತಿ ಹಿಡಿದಿತ್ತು.</p>.<p>ದಾವೂದ್ ಇಬ್ರಾಹಿಂ ಆಪ್ತನಾಗಿರುವ ತುಂಡಾ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಆತನನ್ನು 2013ರಲ್ಲಿ ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 1993ರ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಅಬ್ದುಲ್ ಕರೀಮ್ ತುಂಡಾನನ್ನು ದೋಷಮುಕ್ತಗೊಳಿಸಿರುವ ಅಜ್ಮೇರ್ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.<p>‘ಪ್ರಕರಣದಲ್ಲಿ 12 ಜನ ಆರೋಪಿಗಳಿದ್ದು, ಪ್ರಕರಣದ ಕುರಿತು ಗುರುವಾರ ತೀರ್ಪು ನೀಡಿದ ಟಾಡಾ ನ್ಯಾಯಾಲಯದ ನ್ಯಾಯಾಧೀಶರಾದ ಮಹಾವೀರ್ ಪ್ರಸಾದ್ ಗುಪ್ತಾ ಅವರು ಅದರಲ್ಲಿ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಆದರೆ ಪ್ರಮುಖ ಆರೋಪಿ ತುಂಡಾನನ್ನು ದೋಷಮುಕ್ತಗೊಳಿಸಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>1993 ರಲ್ಲಿ ಲಖನೌ, ಕಾನ್ಪುರ, ಹೈದರಾಬಾದ್, ಸೂರತ್ ಮತ್ತು ಮುಂಬೈ ನಗರಗಳಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿ ಹಲವರು ಗಾಯಗೊಂಡಿದ್ದರು, ಬಾಬ್ರಿ ಮಸೀದಿ ಧ್ವಂಸಗೊಂಡು ಒಂದು ವರ್ಷ ಪೂರ್ಣಗೊಂಡ ದಿನದಂದೇ ಸರಣಿ ಸ್ಫೋಟ ನಡೆದಿತ್ತು.</p>.<p>ಪ್ರಕರಣದ ತನಿಖೆ ನಡೆಸಿದ ಸಿಬಿಐ 21 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಅದರಲ್ಲಿ 15 ಜನ ಆರೋಪಿಗಳಿಗೆ ಟಾಡಾ ನ್ಯಾಯಾಲಯ 2004ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಸುಪ್ರೀಂ ಕೋರ್ಟ್ ಕೂಡಾ ಎತ್ತಿ ಹಿಡಿದಿತ್ತು.</p>.<p>ದಾವೂದ್ ಇಬ್ರಾಹಿಂ ಆಪ್ತನಾಗಿರುವ ತುಂಡಾ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಆತನನ್ನು 2013ರಲ್ಲಿ ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>