<p><strong>ನವದೆಹಲಿ</strong>: ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿರುವ ವಿಶಾಲ್ ಮೆಗಾ ಮಾರ್ಟ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. </p><p>ಪದಮ್ ಸಿಂಗ್ ರಸ್ತೆಯಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದ ಎರಡನೇ ಮಹಡಿಯಲ್ಲಿ ಶುಕ್ರವಾರ ಸಂಜೆ 6 ಗಂಟೆ ನಂತರ ಬೆಂಕಿ ಹೊತ್ತಿಕೊಂಡಿದೆ. 13 ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿದವು.</p>.<p>ಕುಮಾರ್ ಧೀರೇಂದರ್ ಪ್ರತಾಪ್ (25) ಎಂದು ಗುರುತಿಸಲಾಗಿರುವ ವ್ಯಕ್ತಿಯ ಶವವು ಲಿಫ್ಟ್ನಲ್ಲಿ ಪತ್ತೆಯಾಗಿದ್ದು, ಇವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. </p>.<p>ಕಟ್ಟಡದಲ್ಲಿ ಇನ್ನೊಬ್ಬ ವ್ಯಕ್ತಿಯ ಶವ ಪತ್ತೆಯಾಗಿದ್ದು, ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು. </p>.<p>ಬೆಂಕಿಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.</p>.<p> <strong>ಲಿಫ್ಟ್ನಲ್ಲಿ ಸಿಲುಕಿದ್ದೀನಿ ಸಹಾಯ ಮಾಡಿ... </strong></p><p>‘ಅಣ್ಣಾ ನಾನು ಲಿಫ್ಟ್ನಲ್ಲಿ ಸಿಲುಕಿದ್ದೇನೆ. ನನಗೆ ಉಸಿರಾಡಲು ಆಗುತ್ತಿಲ್ಲ. ಏನಾದರೂ ಸಹಾಯ ಮಾಡು...’ ಇದು ಲಿಫ್ಟ್ನಲ್ಲಿ ಸಿಲುಕಿ ಸಾವಿಗೀಡಾದ ಕುಮಾರ್ ಧೀರೇಂದರ್ ಪ್ರತಾಪ್ ಅವರು ತನ್ನ ಅಣ್ಣನಿಗೆ ಕಳುಹಿಸಿದ ಕೊನೆಯ ಸಂದೇಶ. </p><p>ಬೆಂಕಿಯಿಂದಾಗಿ ಹೊಗೆ ಆವರಿಸಿದ್ದ ಲಿಫ್ಟ್ನಲ್ಲಿ ಸಿಲುಕಿ ಸಹಾಯಕ್ಕೆ ಹತಾಶೆಯಿಂದ ಎದುರು ನೋಡಿ ಕೊನೆಗೆ ಸಾವಿಗೀಡಾದ ಕುಮಾರ್ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಬನಾರಸ್ನ ಕುಮಾರ್ ಅವರು ಪರೀಕ್ಷೆಗೆ ತಯಾರಿ ನಡೆಸಲು ದೆಹಲಿಯಲ್ಲಿ ನೆಲಸಿದ್ದರು. </p><p>ಸಂಜೆ 6.51ಕ್ಕೆ ತಮ್ಮನ ಸಂದೇಶ ನೋಡಿದ ಕೂಡಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದೆ. ಆದರೆ ಅಷ್ಟರಲ್ಲಿ ಅವನು ಕೊನೆಯುಸಿರೆಳೆದಿದ್ದ ಎಂದು ಸಹೋದರ ವೀರೇಂದ್ರ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿರುವ ವಿಶಾಲ್ ಮೆಗಾ ಮಾರ್ಟ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. </p><p>ಪದಮ್ ಸಿಂಗ್ ರಸ್ತೆಯಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದ ಎರಡನೇ ಮಹಡಿಯಲ್ಲಿ ಶುಕ್ರವಾರ ಸಂಜೆ 6 ಗಂಟೆ ನಂತರ ಬೆಂಕಿ ಹೊತ್ತಿಕೊಂಡಿದೆ. 13 ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿದವು.</p>.<p>ಕುಮಾರ್ ಧೀರೇಂದರ್ ಪ್ರತಾಪ್ (25) ಎಂದು ಗುರುತಿಸಲಾಗಿರುವ ವ್ಯಕ್ತಿಯ ಶವವು ಲಿಫ್ಟ್ನಲ್ಲಿ ಪತ್ತೆಯಾಗಿದ್ದು, ಇವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. </p>.<p>ಕಟ್ಟಡದಲ್ಲಿ ಇನ್ನೊಬ್ಬ ವ್ಯಕ್ತಿಯ ಶವ ಪತ್ತೆಯಾಗಿದ್ದು, ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು. </p>.<p>ಬೆಂಕಿಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.</p>.<p> <strong>ಲಿಫ್ಟ್ನಲ್ಲಿ ಸಿಲುಕಿದ್ದೀನಿ ಸಹಾಯ ಮಾಡಿ... </strong></p><p>‘ಅಣ್ಣಾ ನಾನು ಲಿಫ್ಟ್ನಲ್ಲಿ ಸಿಲುಕಿದ್ದೇನೆ. ನನಗೆ ಉಸಿರಾಡಲು ಆಗುತ್ತಿಲ್ಲ. ಏನಾದರೂ ಸಹಾಯ ಮಾಡು...’ ಇದು ಲಿಫ್ಟ್ನಲ್ಲಿ ಸಿಲುಕಿ ಸಾವಿಗೀಡಾದ ಕುಮಾರ್ ಧೀರೇಂದರ್ ಪ್ರತಾಪ್ ಅವರು ತನ್ನ ಅಣ್ಣನಿಗೆ ಕಳುಹಿಸಿದ ಕೊನೆಯ ಸಂದೇಶ. </p><p>ಬೆಂಕಿಯಿಂದಾಗಿ ಹೊಗೆ ಆವರಿಸಿದ್ದ ಲಿಫ್ಟ್ನಲ್ಲಿ ಸಿಲುಕಿ ಸಹಾಯಕ್ಕೆ ಹತಾಶೆಯಿಂದ ಎದುರು ನೋಡಿ ಕೊನೆಗೆ ಸಾವಿಗೀಡಾದ ಕುಮಾರ್ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಬನಾರಸ್ನ ಕುಮಾರ್ ಅವರು ಪರೀಕ್ಷೆಗೆ ತಯಾರಿ ನಡೆಸಲು ದೆಹಲಿಯಲ್ಲಿ ನೆಲಸಿದ್ದರು. </p><p>ಸಂಜೆ 6.51ಕ್ಕೆ ತಮ್ಮನ ಸಂದೇಶ ನೋಡಿದ ಕೂಡಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದೆ. ಆದರೆ ಅಷ್ಟರಲ್ಲಿ ಅವನು ಕೊನೆಯುಸಿರೆಳೆದಿದ್ದ ಎಂದು ಸಹೋದರ ವೀರೇಂದ್ರ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>