<p class="title"><strong>ಜೈಪುರ: </strong>ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸಲು ಭಾರತೀಯ ಟ್ರೈಬಲ್ ಪಾರ್ಟಿಯ (ಬಿಟಿಬಿ) ಇಬ್ಬರು ಶಾಸಕರು ತಲಾ ₹10 ಕೋಟಿ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಮಹೇಂದ್ರಜೀತ್ ಸಿಂಗ್ ಮಾಳವೀಯ ದೂರಿರುವ ವಿಡಿಯೊ ಅನ್ನು ಬಿಜೆಪಿ ರಾಜಸ್ಥಾನ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಬಿಡುಗಡೆ ಮಾಡಿದ್ದಾರೆ.</p>.<p class="title">ಮಾಳವೀಯ ಅವರು ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡುತ್ತಾ, ಈ ಇಬ್ಬರು ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಬೆಂಬಲಿಸಲು ತಲಾ ₹ 5 ಕೋಟಿ ಮತ್ತು ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರವನ್ನು ಬೆಂಬಲಿಸಲು ತಲಾ ₹ 5 ಕೋಟಿ ಪಡೆದಿದ್ದಾರೆ ಎಂದು ಆರೋಪಿಸಿರುವುದು ವಿಡಿಯೊದಲ್ಲಿದೆ.</p>.<p class="title">ವಿಡಿಯೊ ಬಿಡುಗಡೆ ಮಾಡಿರುವ ಪೂನಿಯಾ ಅವರು, ‘ಶಾಸಕರ ಖರೀದಿ’ಯ ಈ ಪ್ರಕರಣ ಕುರಿತು ಹೆಚ್ಚಿನ ವಿವರಣೆ ನೀಡಬೇಕು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ.</p>.<p>ಈ ಕುರಿತು ತಾನು ಎತ್ತಿರುವ ಪ್ರಶ್ನೆಗಳನ್ನು ಕಾಂಗ್ರೆಸ್ ಮುಖಂಡರು ದೃಢಪಡಿಸಿದ್ದಾರೆ ಎಂದು ಪೂನಿಯಾ ತಿಳಿಸಿದ್ದಾರೆ. ಕಳೆದ ಜೂನ್ ತಿಂಗಳಲ್ಲಿ ರಾಜ್ಯಸಭೆ ಚುನಾವಣೆ ಸಂದರ್ಭ ಹಾಗೂ ಸಚಿನ್ ಪೈಲಟ್ ನೇತೃತ್ವದಲ್ಲಿ ಶಾಸಕರು ಬಂಡಾಯ ಎದ್ದಿದ್ದಾಗ ಮೂಡಿದ್ದ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ಶಾಸಕರನ್ನು ಹೋಟೆಲ್ನಲ್ಲಿ ಇರಿಸಲಾಗಿತ್ತು.</p>.<p>ಈ ಎರಡೂ ಸಂದರ್ಭದಲ್ಲಿ ಬಿಟಿಬಿ ಶಾಸಕರು ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸಿದ್ದರು. ಮಾಳವೀಯ ಅವರು ಬಡಿದೊರ (ಬನ್ಸ್ವಾರಾ) ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ. ಬಿಟಿಬಿ ಶಾಸಕರಾದ ರಾಮಪ್ರಸಾದ್ ದಿಂಡೋರ (ಸಾಗ್ವಾರಾ) ಮತ್ತು ರಾಜಕುಮಾರ್ ರೋಟ್ (ಚೊರಸಿ) ಅವರು ಈ ಕುರಿತ ಪ್ರತಿಕ್ರಿಯೆಗೆ ಲಭ್ಯರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಜೈಪುರ: </strong>ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸಲು ಭಾರತೀಯ ಟ್ರೈಬಲ್ ಪಾರ್ಟಿಯ (ಬಿಟಿಬಿ) ಇಬ್ಬರು ಶಾಸಕರು ತಲಾ ₹10 ಕೋಟಿ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಮಹೇಂದ್ರಜೀತ್ ಸಿಂಗ್ ಮಾಳವೀಯ ದೂರಿರುವ ವಿಡಿಯೊ ಅನ್ನು ಬಿಜೆಪಿ ರಾಜಸ್ಥಾನ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಬಿಡುಗಡೆ ಮಾಡಿದ್ದಾರೆ.</p>.<p class="title">ಮಾಳವೀಯ ಅವರು ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡುತ್ತಾ, ಈ ಇಬ್ಬರು ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಬೆಂಬಲಿಸಲು ತಲಾ ₹ 5 ಕೋಟಿ ಮತ್ತು ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರವನ್ನು ಬೆಂಬಲಿಸಲು ತಲಾ ₹ 5 ಕೋಟಿ ಪಡೆದಿದ್ದಾರೆ ಎಂದು ಆರೋಪಿಸಿರುವುದು ವಿಡಿಯೊದಲ್ಲಿದೆ.</p>.<p class="title">ವಿಡಿಯೊ ಬಿಡುಗಡೆ ಮಾಡಿರುವ ಪೂನಿಯಾ ಅವರು, ‘ಶಾಸಕರ ಖರೀದಿ’ಯ ಈ ಪ್ರಕರಣ ಕುರಿತು ಹೆಚ್ಚಿನ ವಿವರಣೆ ನೀಡಬೇಕು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ.</p>.<p>ಈ ಕುರಿತು ತಾನು ಎತ್ತಿರುವ ಪ್ರಶ್ನೆಗಳನ್ನು ಕಾಂಗ್ರೆಸ್ ಮುಖಂಡರು ದೃಢಪಡಿಸಿದ್ದಾರೆ ಎಂದು ಪೂನಿಯಾ ತಿಳಿಸಿದ್ದಾರೆ. ಕಳೆದ ಜೂನ್ ತಿಂಗಳಲ್ಲಿ ರಾಜ್ಯಸಭೆ ಚುನಾವಣೆ ಸಂದರ್ಭ ಹಾಗೂ ಸಚಿನ್ ಪೈಲಟ್ ನೇತೃತ್ವದಲ್ಲಿ ಶಾಸಕರು ಬಂಡಾಯ ಎದ್ದಿದ್ದಾಗ ಮೂಡಿದ್ದ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ಶಾಸಕರನ್ನು ಹೋಟೆಲ್ನಲ್ಲಿ ಇರಿಸಲಾಗಿತ್ತು.</p>.<p>ಈ ಎರಡೂ ಸಂದರ್ಭದಲ್ಲಿ ಬಿಟಿಬಿ ಶಾಸಕರು ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸಿದ್ದರು. ಮಾಳವೀಯ ಅವರು ಬಡಿದೊರ (ಬನ್ಸ್ವಾರಾ) ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ. ಬಿಟಿಬಿ ಶಾಸಕರಾದ ರಾಮಪ್ರಸಾದ್ ದಿಂಡೋರ (ಸಾಗ್ವಾರಾ) ಮತ್ತು ರಾಜಕುಮಾರ್ ರೋಟ್ (ಚೊರಸಿ) ಅವರು ಈ ಕುರಿತ ಪ್ರತಿಕ್ರಿಯೆಗೆ ಲಭ್ಯರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>