<p><strong>ಬದೌನ್</strong>: ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಗುಡಿಸಲೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಅವಘಡದಲ್ಲಿ ಒಂದು ಕರು ಮೃತಪಟ್ಟಿದೆ ಎಂದು ಅವರು ಹೇಳಿದ್ದಾರೆ.</p><p>ಬದೌನ್ ಜಿಲ್ಲೆಯ ಜಿನ್ಸಿನಾಂಗ್ಲಾ ಗ್ರಾಮದ ಹೊರಗಿರುವ ಜೈಪಾಲ್ ಸಿಂಗ್ ಎಂಬುವವರಿಗೆ ಸೇರಿದ ಗುಡಿಸಲಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದ್ದು, ಸುತ್ತಮುತ್ತಲಿನ ಪ್ರದೇಶವನ್ನು ಆವರಿಸಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಘಟನೆ ಕುರಿತು ಗ್ರಾಮಸ್ಥರು ಮಾಹಿತಿ ನೀಡಿದ್ದು, ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಿಯಂತ್ರಿಸಿದ್ದಾರೆ. ಆದರೆ, ಮನೆಯ ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿವೆ ಎಂದು ಅವರು ಹೇಳಿದ್ದಾರೆ.</p><p>ಘಟನೆಯಲ್ಲಿ ಗುಡಿಸಲಿನ ಹೊರಗೆ ಆಟವಾಡುತ್ತಿದ್ದ ಸುಮಿತ್ (5) ಮತ್ತು ಆತನ ಸೋದರ ಸಂಬಂಧಿ ದೀಪಕ್ (6) ಎಂಬ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಒಂದು ಕರು ಸಾವಿಗೀಡಾಗಿದೆ.</p><p>ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬದೌನ್</strong>: ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಗುಡಿಸಲೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಅವಘಡದಲ್ಲಿ ಒಂದು ಕರು ಮೃತಪಟ್ಟಿದೆ ಎಂದು ಅವರು ಹೇಳಿದ್ದಾರೆ.</p><p>ಬದೌನ್ ಜಿಲ್ಲೆಯ ಜಿನ್ಸಿನಾಂಗ್ಲಾ ಗ್ರಾಮದ ಹೊರಗಿರುವ ಜೈಪಾಲ್ ಸಿಂಗ್ ಎಂಬುವವರಿಗೆ ಸೇರಿದ ಗುಡಿಸಲಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದ್ದು, ಸುತ್ತಮುತ್ತಲಿನ ಪ್ರದೇಶವನ್ನು ಆವರಿಸಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಘಟನೆ ಕುರಿತು ಗ್ರಾಮಸ್ಥರು ಮಾಹಿತಿ ನೀಡಿದ್ದು, ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಿಯಂತ್ರಿಸಿದ್ದಾರೆ. ಆದರೆ, ಮನೆಯ ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿವೆ ಎಂದು ಅವರು ಹೇಳಿದ್ದಾರೆ.</p><p>ಘಟನೆಯಲ್ಲಿ ಗುಡಿಸಲಿನ ಹೊರಗೆ ಆಟವಾಡುತ್ತಿದ್ದ ಸುಮಿತ್ (5) ಮತ್ತು ಆತನ ಸೋದರ ಸಂಬಂಧಿ ದೀಪಕ್ (6) ಎಂಬ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಒಂದು ಕರು ಸಾವಿಗೀಡಾಗಿದೆ.</p><p>ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>