<p><strong>ರಾಯಪುರ:</strong> ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಸಶಸ್ತ್ರ ಪಡೆಗಳು ಹಾಗೂ ಮಾವೋವಾದಿಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಸಿಆರ್ಪಿಎಫ್ ಯೋಧರು ಮೃತಪಟ್ಟಿದ್ದಾರೆ. 10 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಪ್ರಕಟಣೆಯೊಂದು ತಿಳಿಸಿದೆ.</p>.Chhattisgarh Election | 8 ನಕ್ಸಲ್ ಎನ್ಕೌಂಟರ್ಗಳು, 1 ಕಚ್ಚಾ ಬಾಂಬ್ ಸ್ಫೋಟ.<p>ಭದ್ರತಾ ಪಡೆಗಳ ಜಂಟಿ ತಂಡವು ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ತೆಕಲ್ಗುಡೆಮ್ ಎಂಬಲ್ಲಿ ಈ ಘಟನೆ ಜರುಗಿದೆ ಎಂದು ಬಸ್ತಾರ್ ವಲಯದ ಪೊಲೀಸ್ ಇನ್ಸ್ಪೆಕ್ಟರ್ ಸುಂದರ್ರಾಜ್ ತಿಳಿಸಿದ್ದಾರೆ.</p><p>ಸುಖ್ಮಾ ಹಾಗೂ ಬಿಜಾಪುರ ಜಿಲ್ಲೆಯ ಗಡಿಯಲ್ಲಿ ಈ ಗ್ರಾಮ ಇದೆ.</p>.ನಕ್ಸಲ್ ಉಪಟಳ ನಿಯಂತ್ರಿಸುವಲ್ಲಿ ಕೇಂದ್ರದ ಪಾತ್ರ ಶೂನ್ಯ: ಭೂಪೇಶ್ ಬಘೆಲ್.<p>ಕೋಬ್ರಾ ಪಡೆಯ 201 ಬೆಟಾಲಿಯನ್ ಹಾಗೂ ಸಿಆರ್ಪಿಎಫ್ನ 150 ಬೆಟಾಲಿಯನ್ ತಂಡಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಮಧ್ಯಾಹ್ನ ಸುಮಾರು 1 ಗಂಟೆ ಹೊತ್ತಿಗೆ ಈ ಘಟನೆ ನಡೆದಿದೆ.</p><p>ಗಾಯಾಳುಗಳನ್ನು ಹೆಲಿಕಾಪ್ಟರ್ ಮೂಲಕ ಸ್ಥಳಾಂತರಿಸಲಾಗಿದೆ. ಭದ್ರತಾ ಪಡೆಗಳು ಪ್ರತ್ಯುತ್ತರ ನೀಡುತ್ತಿವೆ ಎಂದು ಮೂಲಗಳು ತಿಳಿಸಿವೆ.</p> .ನಕ್ಸಲ್ ಹಿಂಸಾಚಾರ ಶೇ 77 ರಷ್ಟು ಕಡಿಮೆಯಾಗಿದೆ: ಕೇಂದ್ರ ಸರ್ಕಾರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ:</strong> ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಸಶಸ್ತ್ರ ಪಡೆಗಳು ಹಾಗೂ ಮಾವೋವಾದಿಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಸಿಆರ್ಪಿಎಫ್ ಯೋಧರು ಮೃತಪಟ್ಟಿದ್ದಾರೆ. 10 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಪ್ರಕಟಣೆಯೊಂದು ತಿಳಿಸಿದೆ.</p>.Chhattisgarh Election | 8 ನಕ್ಸಲ್ ಎನ್ಕೌಂಟರ್ಗಳು, 1 ಕಚ್ಚಾ ಬಾಂಬ್ ಸ್ಫೋಟ.<p>ಭದ್ರತಾ ಪಡೆಗಳ ಜಂಟಿ ತಂಡವು ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ತೆಕಲ್ಗುಡೆಮ್ ಎಂಬಲ್ಲಿ ಈ ಘಟನೆ ಜರುಗಿದೆ ಎಂದು ಬಸ್ತಾರ್ ವಲಯದ ಪೊಲೀಸ್ ಇನ್ಸ್ಪೆಕ್ಟರ್ ಸುಂದರ್ರಾಜ್ ತಿಳಿಸಿದ್ದಾರೆ.</p><p>ಸುಖ್ಮಾ ಹಾಗೂ ಬಿಜಾಪುರ ಜಿಲ್ಲೆಯ ಗಡಿಯಲ್ಲಿ ಈ ಗ್ರಾಮ ಇದೆ.</p>.ನಕ್ಸಲ್ ಉಪಟಳ ನಿಯಂತ್ರಿಸುವಲ್ಲಿ ಕೇಂದ್ರದ ಪಾತ್ರ ಶೂನ್ಯ: ಭೂಪೇಶ್ ಬಘೆಲ್.<p>ಕೋಬ್ರಾ ಪಡೆಯ 201 ಬೆಟಾಲಿಯನ್ ಹಾಗೂ ಸಿಆರ್ಪಿಎಫ್ನ 150 ಬೆಟಾಲಿಯನ್ ತಂಡಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಮಧ್ಯಾಹ್ನ ಸುಮಾರು 1 ಗಂಟೆ ಹೊತ್ತಿಗೆ ಈ ಘಟನೆ ನಡೆದಿದೆ.</p><p>ಗಾಯಾಳುಗಳನ್ನು ಹೆಲಿಕಾಪ್ಟರ್ ಮೂಲಕ ಸ್ಥಳಾಂತರಿಸಲಾಗಿದೆ. ಭದ್ರತಾ ಪಡೆಗಳು ಪ್ರತ್ಯುತ್ತರ ನೀಡುತ್ತಿವೆ ಎಂದು ಮೂಲಗಳು ತಿಳಿಸಿವೆ.</p> .ನಕ್ಸಲ್ ಹಿಂಸಾಚಾರ ಶೇ 77 ರಷ್ಟು ಕಡಿಮೆಯಾಗಿದೆ: ಕೇಂದ್ರ ಸರ್ಕಾರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>