<p><strong>ಭಿವಂಡಿ:</strong> ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ ಇಬ್ಬರು ಸಾವಿಗೀಡಾಗಿರುವ ಘಟನೆ ಶನಿವಾರ ಬೆಳಿಗ್ಗೆ ಮಹಾರಾಷ್ಟ್ರದ ಭಿವಂಡಿಯಲ್ಲಿ ನಡೆದಿದೆ.</p>.<p>ಮುಂಚಿತವಾಗಿಯೇ ಸ್ಥಳೀಯರನ್ನು ಸ್ಥಳಾಂತರಿಸಿದ್ದರೂ ಕಟ್ಟಡದ ಅವಶೇಷಗಳ ಅಡಿ ಅನೇಕರು ಸಿಲುಕಿದ್ದಾರೆ. ಈಗಾಗಲೇ ನಾಲ್ಕು ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಐದು ಜನ ಗಾಯಗೊಂಡಿದ್ದಾರೆ. ಈ ಬಗ್ಗೆ ಭಿವಂಡಿ ಮುನ್ಸಿಪಲ್ ಕಾರ್ಪೊರೇಷನ್ ಆಯುಕ್ತ ಅಶೋಕ್ ರಣಖಂಬ್ ಮಾಹಿತಿ ನೀಡಿದ್ದಾರೆ.</p>.<p>’ಶಿಥಿಲಗೊಂಡ ಸ್ಥಿತಿಯಲ್ಲಿದ್ದ ಕಟ್ಟಡವು ಕುಸಿಯಬಹುದೆಂಬ ಮಾಹಿತಿ ದೊರೆಯಿತು. ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಬಂದು ಜನರನ್ನು ಕಟ್ಟಡದಿಂದ ಸ್ಥಳಾಂತರಿಸಿದೆವು. ಜನರು ಕಟ್ಟಡದಿಂದ ಹೊರಬಂದರು, ಆದರೆ ಕೆಲವು ಮಂದಿ ತಮ್ಮ ಲಗೇಜ್ ತೆಗೆದುಕೊಳ್ಳಲು ಒಳಹೊಕ್ಕಿದರು. ಇದೇ ಸಮಯದಲ್ಲಿ ಕಟ್ಟಡ ಕುಸಿದಿದೆ. 8 ವರ್ಷ ಹಳೆಯ ಕಟ್ಟಡವಾಗಿದ್ದು, ಅಕ್ರಮವಾಗಿ ನಿರ್ಮಾಣ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ‘ ಎಂದು ಆಯುಕ್ತರು ಪ್ರತಿಕ್ರಿಯಿಸಿದ್ದಾರೆ.</p>.<p>ಕನಿಷ್ಠ 10 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಎನ್ಡಿಆರ್ಎಫ್ ರಕ್ಷಣಾ ಕಾರ್ಯ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಿವಂಡಿ:</strong> ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ ಇಬ್ಬರು ಸಾವಿಗೀಡಾಗಿರುವ ಘಟನೆ ಶನಿವಾರ ಬೆಳಿಗ್ಗೆ ಮಹಾರಾಷ್ಟ್ರದ ಭಿವಂಡಿಯಲ್ಲಿ ನಡೆದಿದೆ.</p>.<p>ಮುಂಚಿತವಾಗಿಯೇ ಸ್ಥಳೀಯರನ್ನು ಸ್ಥಳಾಂತರಿಸಿದ್ದರೂ ಕಟ್ಟಡದ ಅವಶೇಷಗಳ ಅಡಿ ಅನೇಕರು ಸಿಲುಕಿದ್ದಾರೆ. ಈಗಾಗಲೇ ನಾಲ್ಕು ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಐದು ಜನ ಗಾಯಗೊಂಡಿದ್ದಾರೆ. ಈ ಬಗ್ಗೆ ಭಿವಂಡಿ ಮುನ್ಸಿಪಲ್ ಕಾರ್ಪೊರೇಷನ್ ಆಯುಕ್ತ ಅಶೋಕ್ ರಣಖಂಬ್ ಮಾಹಿತಿ ನೀಡಿದ್ದಾರೆ.</p>.<p>’ಶಿಥಿಲಗೊಂಡ ಸ್ಥಿತಿಯಲ್ಲಿದ್ದ ಕಟ್ಟಡವು ಕುಸಿಯಬಹುದೆಂಬ ಮಾಹಿತಿ ದೊರೆಯಿತು. ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಬಂದು ಜನರನ್ನು ಕಟ್ಟಡದಿಂದ ಸ್ಥಳಾಂತರಿಸಿದೆವು. ಜನರು ಕಟ್ಟಡದಿಂದ ಹೊರಬಂದರು, ಆದರೆ ಕೆಲವು ಮಂದಿ ತಮ್ಮ ಲಗೇಜ್ ತೆಗೆದುಕೊಳ್ಳಲು ಒಳಹೊಕ್ಕಿದರು. ಇದೇ ಸಮಯದಲ್ಲಿ ಕಟ್ಟಡ ಕುಸಿದಿದೆ. 8 ವರ್ಷ ಹಳೆಯ ಕಟ್ಟಡವಾಗಿದ್ದು, ಅಕ್ರಮವಾಗಿ ನಿರ್ಮಾಣ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ‘ ಎಂದು ಆಯುಕ್ತರು ಪ್ರತಿಕ್ರಿಯಿಸಿದ್ದಾರೆ.</p>.<p>ಕನಿಷ್ಠ 10 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಎನ್ಡಿಆರ್ಎಫ್ ರಕ್ಷಣಾ ಕಾರ್ಯ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>