<p class="title"><strong>ನಾಗಪುರ, ಮಹಾರಾಷ್ಟ್ರ: </strong>ಹತ್ಯೆಗಳು, ಬೆಂಕಿ ಹಚ್ಚುವಿಕೆ ಹಾಗೂ ಅನೇಕ ಎನ್ಕೌಂಟರ್ಗಳಲ್ಲಿ ಭಾಗಿಯಾಗಿದ್ದ ಇಬ್ಬರು ನಕ್ಸಲರು ಮಹಾರಾಷ್ಟ್ರದ ಗಡ್ಚಿರೋಲಿ ಪೊಲೀಸರಿಗೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ರಾಮ್ಸಿಂಗ್ ಸಿಂಗ್ ಅಲಿಯಾಸ್ ಸೀತಾರಾಮ್ ಬಕ್ಕಾ ಅತ್ರಮ್ (63) ಹಾಗೂ ಮಾಧುರಿ ಅಲಿಯಾಸ್ ಭುರಿ ಅಲಿಯಾಸ್ ಸುಮನ್ ರಾಜು ಮತ್ತಾಮಿ (34) ಎಂಬುವವರು ಶರಣಾದ ನಕ್ಸಲರು. ಇವರಿಬ್ಬರನ್ನು ಹಿಡಿದುಕೊಟ್ಟವರಿಗೆ ₹12 ಲಕ್ಷ ಬಹುಮಾನ ನೀಡಲಾಗುವುದು ಎಂದು ಅಲ್ಲಿನ ಸರ್ಕಾರ ಘೋಷಿಸಿತ್ತು.</p>.<p class="title">ನಕ್ಸಲರ ಶರಣಾಗತಿಯ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಗೋಯಲ್, ‘ಬಂಡುಕೋರ ನಕ್ಸಲರು ಹಿಂಸಾಚಾರದಿಂದ ಬೇಸತ್ತಿದ್ದಾರೆ. ಅನೇಕ ನಕ್ಸಲರು ರಾಜ್ಯ ಸರ್ಕಾರದ ಶರಣಾಗತಿ ನೀತಿಯೆಡೆಗೆ ಆಕರ್ಷಿತರಾಗಿದ್ದಾರೆ’ ಎಂದು ತಿಳಿಸಿದರು.</p>.<p class="title">2019ರಿಂದ ಇಲ್ಲಿಯವರೆಗೆ ಗೋಯಲ್ ಅವರ ಮುಂದೆ 49 ನಕ್ಸಲರು ಶರಣಾಗಿದ್ದಾರೆ. ಗೋಯಲ್ ಅವರು ನಕ್ಸಲರಿಗೆ ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಮತ್ತು ಸಮಾಜದ ಮುಖ್ಯವಾಹಿನಿಗೆ ಬರಲು ಸಿದ್ಧವಿರುವವರಿಗೆ ಅಗತ್ಯವಾದ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನಾಗಪುರ, ಮಹಾರಾಷ್ಟ್ರ: </strong>ಹತ್ಯೆಗಳು, ಬೆಂಕಿ ಹಚ್ಚುವಿಕೆ ಹಾಗೂ ಅನೇಕ ಎನ್ಕೌಂಟರ್ಗಳಲ್ಲಿ ಭಾಗಿಯಾಗಿದ್ದ ಇಬ್ಬರು ನಕ್ಸಲರು ಮಹಾರಾಷ್ಟ್ರದ ಗಡ್ಚಿರೋಲಿ ಪೊಲೀಸರಿಗೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ರಾಮ್ಸಿಂಗ್ ಸಿಂಗ್ ಅಲಿಯಾಸ್ ಸೀತಾರಾಮ್ ಬಕ್ಕಾ ಅತ್ರಮ್ (63) ಹಾಗೂ ಮಾಧುರಿ ಅಲಿಯಾಸ್ ಭುರಿ ಅಲಿಯಾಸ್ ಸುಮನ್ ರಾಜು ಮತ್ತಾಮಿ (34) ಎಂಬುವವರು ಶರಣಾದ ನಕ್ಸಲರು. ಇವರಿಬ್ಬರನ್ನು ಹಿಡಿದುಕೊಟ್ಟವರಿಗೆ ₹12 ಲಕ್ಷ ಬಹುಮಾನ ನೀಡಲಾಗುವುದು ಎಂದು ಅಲ್ಲಿನ ಸರ್ಕಾರ ಘೋಷಿಸಿತ್ತು.</p>.<p class="title">ನಕ್ಸಲರ ಶರಣಾಗತಿಯ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಗೋಯಲ್, ‘ಬಂಡುಕೋರ ನಕ್ಸಲರು ಹಿಂಸಾಚಾರದಿಂದ ಬೇಸತ್ತಿದ್ದಾರೆ. ಅನೇಕ ನಕ್ಸಲರು ರಾಜ್ಯ ಸರ್ಕಾರದ ಶರಣಾಗತಿ ನೀತಿಯೆಡೆಗೆ ಆಕರ್ಷಿತರಾಗಿದ್ದಾರೆ’ ಎಂದು ತಿಳಿಸಿದರು.</p>.<p class="title">2019ರಿಂದ ಇಲ್ಲಿಯವರೆಗೆ ಗೋಯಲ್ ಅವರ ಮುಂದೆ 49 ನಕ್ಸಲರು ಶರಣಾಗಿದ್ದಾರೆ. ಗೋಯಲ್ ಅವರು ನಕ್ಸಲರಿಗೆ ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಮತ್ತು ಸಮಾಜದ ಮುಖ್ಯವಾಹಿನಿಗೆ ಬರಲು ಸಿದ್ಧವಿರುವವರಿಗೆ ಅಗತ್ಯವಾದ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>