<p><strong>ಗುಜರಾತ್:</strong> ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಸ್ಥಳೀಯರಿಗೆ ಹಣ ಮತ್ತು ಇತರ ಪ್ರಯೋಜನಗಳ ಆಮಿಷವೊಡ್ಡುತ್ತಿದ್ದ ಆರೋಪದ ಮೇಲೆ ಗುಜರಾತ್ನ ಸುರೇಂದ್ರನಗರ ಜಿಲ್ಲೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಆರೋಪಿಗಳು, ಧಾರ್ಮಿಕ ಮತಾಂತರಗೊಳ್ಳುವಂತೆ ಕೆಲವು ವ್ಯಕ್ತಿಗಳಿಗೆ (ದೂರುದಾರರೂ ಸೇರಿದಂತೆ) ₹20,000 ಮತ್ತು ಇತರ ಪ್ರಯೋಜನಗಳ ಆಮಿಷ ನೀಡುತ್ತಿದ್ದರು. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರೆ ಅನಾರೋಗ್ಯ ಮತ್ತು ಆರ್ಥಿಕ ತೊಂದರೆಗಳಿಂದ ಹೊರಬರಲು ಸಹಾಯವಾಗುತ್ತದೆ ಎಂದು ಮನವೊಲಿಸಲು ಯತ್ನಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಅವರು ಹೇಳಿದ್ದಾರೆ.</p><p>ಸುರೇಂದ್ರನಗರದ ರತಿಲಾಲ್ ಪರ್ಮಾರ್ ಮತ್ತು ರಾಜಸ್ಥಾನದ ಉದಯಪುರದ ಮೂಲದ ಭನ್ವರ್ಲಾಲ್ ಪಾರ್ಧಿ ಎಂಬವರನ್ನು ಬಂಧಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವಡಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್ಪೆಕ್ಟರ್ ಡಿ.ಆರ್ ಪಧೇರಿಯಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಜರಾತ್:</strong> ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಸ್ಥಳೀಯರಿಗೆ ಹಣ ಮತ್ತು ಇತರ ಪ್ರಯೋಜನಗಳ ಆಮಿಷವೊಡ್ಡುತ್ತಿದ್ದ ಆರೋಪದ ಮೇಲೆ ಗುಜರಾತ್ನ ಸುರೇಂದ್ರನಗರ ಜಿಲ್ಲೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಆರೋಪಿಗಳು, ಧಾರ್ಮಿಕ ಮತಾಂತರಗೊಳ್ಳುವಂತೆ ಕೆಲವು ವ್ಯಕ್ತಿಗಳಿಗೆ (ದೂರುದಾರರೂ ಸೇರಿದಂತೆ) ₹20,000 ಮತ್ತು ಇತರ ಪ್ರಯೋಜನಗಳ ಆಮಿಷ ನೀಡುತ್ತಿದ್ದರು. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರೆ ಅನಾರೋಗ್ಯ ಮತ್ತು ಆರ್ಥಿಕ ತೊಂದರೆಗಳಿಂದ ಹೊರಬರಲು ಸಹಾಯವಾಗುತ್ತದೆ ಎಂದು ಮನವೊಲಿಸಲು ಯತ್ನಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಅವರು ಹೇಳಿದ್ದಾರೆ.</p><p>ಸುರೇಂದ್ರನಗರದ ರತಿಲಾಲ್ ಪರ್ಮಾರ್ ಮತ್ತು ರಾಜಸ್ಥಾನದ ಉದಯಪುರದ ಮೂಲದ ಭನ್ವರ್ಲಾಲ್ ಪಾರ್ಧಿ ಎಂಬವರನ್ನು ಬಂಧಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವಡಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್ಪೆಕ್ಟರ್ ಡಿ.ಆರ್ ಪಧೇರಿಯಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>