ಶ್ರೀನಗರ: ಭಾರತೀಯ ಸೇನೆ ಕುಪ್ವಾರ ಜಿಲ್ಲೆಯ ಹಂದ್ವಾರ ಪ್ರದೇಶದಲ್ಲಿ ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ ಲಷ್ಕರ್–ಎ– ತಯಬಾ (ಎಲ್ಇಟಿ) ಸಂಘಟನೆಯ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.
ಮೃತರನ್ನು ಫುರ್ಕಾನ್ ರಶೀದ್ ಲೋನೆ ಅಲಿಯಾಸ್ ಆದಿಲ್ ಹಾಗೂ ಲಿಯಾಕತ್ ಲೋನೆ ಅಲಿಯಾಸ್ ಸಾಹೀಬ್ ಎಂದು ಗುರುತಿಸಲಾಗಿದ್ದು, ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಯೋಧರು ಮುಂಜಾನೆ ಕಾರ್ಯಾಚರಣೆ ಆರಂಭಿಸಿದ ವೇಳೆ ಉಗ್ರರು ಗುಂಡಿನ ದಾಳಿ ಆರಂಭಿಸಿದರು. ತಕ್ಷಣ ಪ್ರತಿ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಫುರ್ಖಾನ್ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಅವರು ಹೇಳಿದ್ದಾರೆ.