<p><strong>ನವದೆಹಲಿ</strong>: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಪುತ್ರ ವಿವೇಕ್ ಡೊಭಾಲ್ ಅವರು ‘ಕ್ಯಾರವಾನ್’ ನಿಯತಕಾಲಿಕೆ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆ ಸಂಬಂಧ ಇಬ್ಬರು ಸಾಕ್ಷಿಗಳು ದೆಹಲಿ ಕೋರ್ಟ್ನಲ್ಲಿ ತಮ್ಮ ಹೇಳಿಕೆ ದಾಖಲಿಸಿದರು.</p>.<p>ವಿವೇಕ್ ಅವರ ಸ್ನೇಹಿತ ನಿಖಿಲ್ ಕಪೂರ್ ಮತ್ತು ಉದ್ಯಮ ಪಾಲುದಾರ ಅಮಿತ್ ಶರ್ಮಾ ಅವರು ಮೊಕದ್ದಮೆಯನ್ನು ಬೆಂಬಲಿಸಿ ಸೋಮವಾರ ಹೇಳಿಕೆ ನೀಡಿದರು.</p>.<p>ವರದಿ ಪ್ರಕಟವಾದ ಬಳಿಕ ಬಂಡವಾಳ ಹೂಡಿಕೆದಾರರಲ್ಲಿ ಗೊಂದಲ ಮೂಡಿದೆ ಎಂದು ಶರ್ಮಾ ಹೇಳಿದ್ದಾರೆ. ಸಹೋದರ ಶೌರ್ಯ ಅವರ ಉದ್ಯಮದ ಜೊತೆ ವಿವೇಕ್ ನಂಟು ಹೊಂದಿದ್ದಾರೆ ಎಂಬ ಆರೋಪವನ್ನೂ ಅವರು ಅಲ್ಲಗಳೆದಿದ್ದಾರೆ.</p>.<p>ವಿವೇಕ್ ಸಹಪಾಠಿಯೂ ಆಗಿರುವ ಪುಣೆ ಮೂಲದ ಉದ್ಯಮಿ ಕಪೂರ್, ‘ವರದಿಯಲ್ಲಿ ಪ್ರಕಟವಾದ ಅಂಶಗಳಿಗೆ ಯಾವುದೇ ಅರ್ಥವಿಲ್ಲ, ಅದು ಕಾಪಿ ಪೇಸ್ಟ್ ಲೇಖನ’ ಎಂದು ಆರೋಪಿಸಿದ್ದಾರೆ.</p>.<p>ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ನ್ಯಾಯಾಧೀಶ ಸಮರ್ ವಿಶಾಲ್ ಅವರು ವಿಚಾರಣೆಯನ್ನು ಫೆ.22ಕ್ಕೆ ಮುಂದೂಡಿದರು.</p>.<p>ಜನವರಿ 30ರಂದು ತಮ್ಮ ಹೇಳಿಕೆ ದಾಖಲಿಸಿದ್ದ ವಿವೇಕ್ ಡೊಭಾಲ್ ಅವರು, ಕ್ಯಾರವಾನ್ ತಮ್ಮ ವಿರುದ್ಧ ಮಾಡಿದ್ದ ಎಲ್ಲ ಆರೋಪಗಳನ್ನು ಅಲ್ಲಗಳೆದಿದ್ದರು. ವರದಿಯನ್ನು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಅವರು ಉಲ್ಲೇಖಿಸಿದ್ದರಿಂದ ತಮ್ಮ ಘನತೆಗೆ ಚ್ಯುತಿಯಾಗಿದೆ ಎಂದು ವಿವೇಕ್ ಹೇಳಿದ್ದರು.</p>.<p>ತೆರಿಗೆ ಸ್ವರ್ಗವೆಂದು ಪರಿಗಣಿಸಲಾಗಿರುವ ಕೇಮನ್ ದ್ವೀಪದಲ್ಲಿ ವಿವೇಕ್ ಡೊಭಾಲ್ ಹೆಡ್ಜ್ ಫಂಡ್ ನಿರ್ವಹಿಸುತ್ತಿರುವ ಬಗ್ಗೆ ಜನವರಿ 16ರಂದು ‘ದಿ ಡಿ ಕಂಪನೀಸ್’ ಲೇಖನದಲ್ಲಿ ಕ್ಯಾರವಾನ್ ಉಲ್ಲೇಖಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಪುತ್ರ ವಿವೇಕ್ ಡೊಭಾಲ್ ಅವರು ‘ಕ್ಯಾರವಾನ್’ ನಿಯತಕಾಲಿಕೆ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆ ಸಂಬಂಧ ಇಬ್ಬರು ಸಾಕ್ಷಿಗಳು ದೆಹಲಿ ಕೋರ್ಟ್ನಲ್ಲಿ ತಮ್ಮ ಹೇಳಿಕೆ ದಾಖಲಿಸಿದರು.</p>.<p>ವಿವೇಕ್ ಅವರ ಸ್ನೇಹಿತ ನಿಖಿಲ್ ಕಪೂರ್ ಮತ್ತು ಉದ್ಯಮ ಪಾಲುದಾರ ಅಮಿತ್ ಶರ್ಮಾ ಅವರು ಮೊಕದ್ದಮೆಯನ್ನು ಬೆಂಬಲಿಸಿ ಸೋಮವಾರ ಹೇಳಿಕೆ ನೀಡಿದರು.</p>.<p>ವರದಿ ಪ್ರಕಟವಾದ ಬಳಿಕ ಬಂಡವಾಳ ಹೂಡಿಕೆದಾರರಲ್ಲಿ ಗೊಂದಲ ಮೂಡಿದೆ ಎಂದು ಶರ್ಮಾ ಹೇಳಿದ್ದಾರೆ. ಸಹೋದರ ಶೌರ್ಯ ಅವರ ಉದ್ಯಮದ ಜೊತೆ ವಿವೇಕ್ ನಂಟು ಹೊಂದಿದ್ದಾರೆ ಎಂಬ ಆರೋಪವನ್ನೂ ಅವರು ಅಲ್ಲಗಳೆದಿದ್ದಾರೆ.</p>.<p>ವಿವೇಕ್ ಸಹಪಾಠಿಯೂ ಆಗಿರುವ ಪುಣೆ ಮೂಲದ ಉದ್ಯಮಿ ಕಪೂರ್, ‘ವರದಿಯಲ್ಲಿ ಪ್ರಕಟವಾದ ಅಂಶಗಳಿಗೆ ಯಾವುದೇ ಅರ್ಥವಿಲ್ಲ, ಅದು ಕಾಪಿ ಪೇಸ್ಟ್ ಲೇಖನ’ ಎಂದು ಆರೋಪಿಸಿದ್ದಾರೆ.</p>.<p>ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ನ್ಯಾಯಾಧೀಶ ಸಮರ್ ವಿಶಾಲ್ ಅವರು ವಿಚಾರಣೆಯನ್ನು ಫೆ.22ಕ್ಕೆ ಮುಂದೂಡಿದರು.</p>.<p>ಜನವರಿ 30ರಂದು ತಮ್ಮ ಹೇಳಿಕೆ ದಾಖಲಿಸಿದ್ದ ವಿವೇಕ್ ಡೊಭಾಲ್ ಅವರು, ಕ್ಯಾರವಾನ್ ತಮ್ಮ ವಿರುದ್ಧ ಮಾಡಿದ್ದ ಎಲ್ಲ ಆರೋಪಗಳನ್ನು ಅಲ್ಲಗಳೆದಿದ್ದರು. ವರದಿಯನ್ನು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಅವರು ಉಲ್ಲೇಖಿಸಿದ್ದರಿಂದ ತಮ್ಮ ಘನತೆಗೆ ಚ್ಯುತಿಯಾಗಿದೆ ಎಂದು ವಿವೇಕ್ ಹೇಳಿದ್ದರು.</p>.<p>ತೆರಿಗೆ ಸ್ವರ್ಗವೆಂದು ಪರಿಗಣಿಸಲಾಗಿರುವ ಕೇಮನ್ ದ್ವೀಪದಲ್ಲಿ ವಿವೇಕ್ ಡೊಭಾಲ್ ಹೆಡ್ಜ್ ಫಂಡ್ ನಿರ್ವಹಿಸುತ್ತಿರುವ ಬಗ್ಗೆ ಜನವರಿ 16ರಂದು ‘ದಿ ಡಿ ಕಂಪನೀಸ್’ ಲೇಖನದಲ್ಲಿ ಕ್ಯಾರವಾನ್ ಉಲ್ಲೇಖಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>