ನವದೆಹಲಿ (ಪಿಟಿಐ): 2 ಜಿ ತರಂಗಾಂತರ ಪ್ರಕರಣದಲ್ಲಿ ಗೃಹ ಸಚಿವ ಪಿ. ಚಿದಂಬರಂ ಅವರು ಯಾವುದೇ ಕ್ರಿಮಿನಲ್ ಒಳಸಂಚಿನಲ್ಲಿ ಭಾಗಿಯಾಗಿಲ್ಲ ಎಂದು ಹೇಳಿ ಅವರನ್ನು ಆರೋಪಿಯನ್ನಾಗಿ ಮಾಡಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜನತಾ ಪಕ್ಷದ ಮುಖ್ಯಸ್ಥ ಸುಬ್ರಮಣಿಯನ್ ಸ್ವಾಮಿ ಅವರು ಗುರುವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಚಿದಂಬರಂ ಅವರು ಮಾಜಿ ದೂರಸಂಪರ್ಕ ಸಚಿವ ಎ. ರಾಜಾ ಅವರಷ್ಟೇ ತಪ್ಪಿತಸ್ಥರು ಎಂದು ಆಪಾದಿಸಿರುವ ಸುಬ್ರಮಣಿಯನ್ ಸ್ವಾಮಿ ಅವರು ತರಂಗಾಂತರ ದರ ನಿಗದಿಗೊಳಿಸುವಲ್ಲಿ ಮತ್ತು ಟೆಲಿಕಾಂ ಕಂಪೆನಿಗಳಿಗೆ ವಿದೇಶೀ ಸಂಸ್ಥೆಗಳ ಷೇರು ಬಿಡುಗಡೆ ಮಾಡಲು ಅವಕಾಶ ನೀಡುವಲ್ಲಿ ಪಾತ್ರ ವಹಿಸಿದ್ದರು ಎಂದು ಹೇಳಿದ್ದಾರೆ.
ಚಿದಂಬರಂ ಅವರು ಹಣಕಾಸು ಸಚಿವರಾಗಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಮತ್ತು ಇತರ ಕ್ರಿಮಿನಲ್ ಕಾನೂನುಗಳ ಅಪರಾಧ ಎಸಗಿದ್ದಾರೆ ಎಂಬುದನ್ನು ಮೇಲ್ನೋಟಕ್ಕೇ ಸಾಬೀತುಪಡಿಸಲು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿರುವ ಸಾಕ್ಷ್ಯಾಧಾರ ಎಂದು ಸ್ವಾಮಿ ತಿಳಿಸಿದ್ದರು.