<p><strong>ನವದೆಹಲಿ, (ಪಿಟಿಐ): </strong>ಎ.ರಾಜಾ ಅವರು ದೂರಸಂಪರ್ಕ ಸಚಿವರಾಗಿದ್ದ ಸಂದರ್ಭದಲ್ಲಿ ನಡೆದ 2ಜಿ ತರಂಗಾಂತರ ಹಂಚಿಕೆ ವ್ಯವಹಾರದಿಂದ ಯಾವುದೇ ನಷ್ಟವಾಗಿರಲಿಲ್ಲ ಎಂಬ ದೂರವಾಣಿ ನಿಯಂತ್ರಣ ಪ್ರಾಧಿಕಾರದ (ಟ್ರಾಯ್) ವರದಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಅದರ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡಿದೆ.<br /> <br /> `ಸ್ವಾಯತ್ತ ನಿಯಂತ್ರಣ ಮಂಡಳಿಯೊಂದು ಇಂತಹ ವರದಿ ನೀಡಿರುವ ಬಗ್ಗೆ ನಮಗೆ ನಿಜಕ್ಕೂ ಆಶ್ಚರ್ಯವಾಗುತ್ತಿದೆ, ಈ ಬಗ್ಗೆ ಚರ್ಚೆಯಾಗಬೇಕು~ ಎಂದು ನ್ಯಾಯಮೂರ್ತಿಗಳಾದ ಜಿ.ಎಸ್.ಸಿಂಘ್ವಿ ಮತ್ತು ಎ.ಕೆ.ಗಂಗೂಲಿ ಹೇಳಿದರು.<br /> <br /> ಸಿಬಿಐ ಸಹ ಟ್ರಾಯ್ ವರದಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಈ ವರದಿಯನ್ನು ತಾನು ಒಪ್ಪಿಕೊಂಡಿಲ್ಲ ಎಂದು ತಿಳಿಸಿದೆ. <br /> <br /> 2ಜಿ ಹಗರಣದ ಆಪಾದನೆಗೆ ಒಳಗಾದವರು ವರದಿಯ ಲಾಭ ಪಡೆಯುವ ಸಾಧ್ಯತೆ ಇದೆ. ಆದ್ದರಿಂದ ಸಿಬಿಐ ಇದನ್ನು ಒಪ್ಪಿಕೊಂಡಿಲ್ಲ ಎಂದು ವಕೀಲ ಕೆ.ಕೆ.ವೇಣುಗೋಪಾಲ್ ನ್ಯಾಯಪೀಠಕ್ಕೆ ತಿಳಿಸಿದರು.<br /> <br /> ತರಂಗಾಂತರ ಹಂಚಿಕೆಯಿಂದ ಸರ್ಕಾರಕ್ಕೆ ಆಗಿರುವ ನಷ್ಟದ ಬಗ್ಗೆ ಸಿಬಿಐ ಮತ್ತು ಸಿಎಜಿ ವಿಭಿನ್ನ ಅಂಕಿಸಂಖ್ಯೆ ನೀಡಿರುವ ಬಗ್ಗೆಯೂ ನ್ಯಾಯಪೀಠ ಅಚ್ಚರಿ ವ್ಯಕ್ತಪಡಿಸಿದೆ.<br /> <br /> <strong>ಸಿವಿಸಿಗೆ ಹೊಸ ದೂರು </strong><br /> 2ಜಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಜಾಗೃತ ಆಯೋಗಕ್ಕೆ ಹೊಸದಾಗಿ ಮತ್ತೆ ಹಲವು ದೂರುಗಳು ಬಂದಿವೆ. <br /> <br /> ಮಾಜಿ ಸಚಿವ ಎ.ರಾಜಾ, ದೂರಸಂಪರ್ಕ ಇಲಾಖೆಯ ಅಧಿಕಾರಿಗಳು ಹಾಗೂ ನಿವೃತ್ತ ಸಿಬ್ಬಂದಿಯ ಅಕ್ರಮಗಳ ಬಗೆಗಿನ ಈ ದೂರುಗಳನ್ನು ಆಯೋಗ ಹೆಚ್ಚಿನ ಪರಿಶಿಲನೆಗಾಗಿ ಸಿಬಿಐಗೆ ಕಳುಹಿಸಿದೆ. <br /> <br /> ಹೆಚ್ಚಿನ ದೂರುಗಳು ತರಂಗಾಂತರ ಹಂಚಿಕೆ ವೇಳೆ ಸರ್ಕಾರಿ ನಿಯಮಾವಳಿ ಉಲ್ಲಂಘಿಸಿದ ಕುರಿತಾಗಿವೆ. ಈ ದೂರುಗಳ ವಿಶ್ವಾಸಾರ್ಹತೆ ಮತ್ತು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಪರಿಶೀಲಿಸುವಂತೆ ಸಿಬಿಐಗೆ ತಿಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ, (ಪಿಟಿಐ): </strong>ಎ.ರಾಜಾ ಅವರು ದೂರಸಂಪರ್ಕ ಸಚಿವರಾಗಿದ್ದ ಸಂದರ್ಭದಲ್ಲಿ ನಡೆದ 2ಜಿ ತರಂಗಾಂತರ ಹಂಚಿಕೆ ವ್ಯವಹಾರದಿಂದ ಯಾವುದೇ ನಷ್ಟವಾಗಿರಲಿಲ್ಲ ಎಂಬ ದೂರವಾಣಿ ನಿಯಂತ್ರಣ ಪ್ರಾಧಿಕಾರದ (ಟ್ರಾಯ್) ವರದಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಅದರ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡಿದೆ.<br /> <br /> `ಸ್ವಾಯತ್ತ ನಿಯಂತ್ರಣ ಮಂಡಳಿಯೊಂದು ಇಂತಹ ವರದಿ ನೀಡಿರುವ ಬಗ್ಗೆ ನಮಗೆ ನಿಜಕ್ಕೂ ಆಶ್ಚರ್ಯವಾಗುತ್ತಿದೆ, ಈ ಬಗ್ಗೆ ಚರ್ಚೆಯಾಗಬೇಕು~ ಎಂದು ನ್ಯಾಯಮೂರ್ತಿಗಳಾದ ಜಿ.ಎಸ್.ಸಿಂಘ್ವಿ ಮತ್ತು ಎ.ಕೆ.ಗಂಗೂಲಿ ಹೇಳಿದರು.<br /> <br /> ಸಿಬಿಐ ಸಹ ಟ್ರಾಯ್ ವರದಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಈ ವರದಿಯನ್ನು ತಾನು ಒಪ್ಪಿಕೊಂಡಿಲ್ಲ ಎಂದು ತಿಳಿಸಿದೆ. <br /> <br /> 2ಜಿ ಹಗರಣದ ಆಪಾದನೆಗೆ ಒಳಗಾದವರು ವರದಿಯ ಲಾಭ ಪಡೆಯುವ ಸಾಧ್ಯತೆ ಇದೆ. ಆದ್ದರಿಂದ ಸಿಬಿಐ ಇದನ್ನು ಒಪ್ಪಿಕೊಂಡಿಲ್ಲ ಎಂದು ವಕೀಲ ಕೆ.ಕೆ.ವೇಣುಗೋಪಾಲ್ ನ್ಯಾಯಪೀಠಕ್ಕೆ ತಿಳಿಸಿದರು.<br /> <br /> ತರಂಗಾಂತರ ಹಂಚಿಕೆಯಿಂದ ಸರ್ಕಾರಕ್ಕೆ ಆಗಿರುವ ನಷ್ಟದ ಬಗ್ಗೆ ಸಿಬಿಐ ಮತ್ತು ಸಿಎಜಿ ವಿಭಿನ್ನ ಅಂಕಿಸಂಖ್ಯೆ ನೀಡಿರುವ ಬಗ್ಗೆಯೂ ನ್ಯಾಯಪೀಠ ಅಚ್ಚರಿ ವ್ಯಕ್ತಪಡಿಸಿದೆ.<br /> <br /> <strong>ಸಿವಿಸಿಗೆ ಹೊಸ ದೂರು </strong><br /> 2ಜಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಜಾಗೃತ ಆಯೋಗಕ್ಕೆ ಹೊಸದಾಗಿ ಮತ್ತೆ ಹಲವು ದೂರುಗಳು ಬಂದಿವೆ. <br /> <br /> ಮಾಜಿ ಸಚಿವ ಎ.ರಾಜಾ, ದೂರಸಂಪರ್ಕ ಇಲಾಖೆಯ ಅಧಿಕಾರಿಗಳು ಹಾಗೂ ನಿವೃತ್ತ ಸಿಬ್ಬಂದಿಯ ಅಕ್ರಮಗಳ ಬಗೆಗಿನ ಈ ದೂರುಗಳನ್ನು ಆಯೋಗ ಹೆಚ್ಚಿನ ಪರಿಶಿಲನೆಗಾಗಿ ಸಿಬಿಐಗೆ ಕಳುಹಿಸಿದೆ. <br /> <br /> ಹೆಚ್ಚಿನ ದೂರುಗಳು ತರಂಗಾಂತರ ಹಂಚಿಕೆ ವೇಳೆ ಸರ್ಕಾರಿ ನಿಯಮಾವಳಿ ಉಲ್ಲಂಘಿಸಿದ ಕುರಿತಾಗಿವೆ. ಈ ದೂರುಗಳ ವಿಶ್ವಾಸಾರ್ಹತೆ ಮತ್ತು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಪರಿಶೀಲಿಸುವಂತೆ ಸಿಬಿಐಗೆ ತಿಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>