ಕರಾಚಿ: ಪ್ರವಾಹ ಪೀಡಿತ ಸಿಂಧ್ ಪ್ರಾಂತ್ಯದಲ್ಲಿ ವ್ಯಾನ್ವೊಂದು ನೀರು ತುಂಬಿದ್ದ ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 12 ಮಕ್ಕಳು ಸೇರಿದಂತೆ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ.
ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಭಕ್ತರನ್ನು ಖೈರ್ಪುರದ ಸೆಹ್ವಾನ್ ಶರೀಫ್ ದರ್ಗಾಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.