<p><strong>ನವದೆಹಲಿ:</strong> ಮಹತ್ವಾಕಾಂಕ್ಷೆಯ ಪ್ರಧಾನಿ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮದಡಿ (ಪಿಎಂಇಜಿಪಿ) ಕಳೆದ ಐದು ವರ್ಷಗಳ ಅವಧಿಯಲ್ಲಿ 20 ಲಕ್ಷ ಹೊಸ ಉದ್ಯೋಗಗಳನ್ನು ಸೃಜಿಸಲಾಗಿದೆ ಎಂದು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ಅಧ್ಯಕ್ಷ ವಿನಯಕುಮಾರ್ ಸಕ್ಸೇನಾ ಹೇಳಿದ್ದಾರೆ.</p>.<p>‘2014–15ಕ್ಕೂ ಮುಂಚೆ ನಿಗದಿಪಡಿಸಿದ ಗುರಿ ಸಾಧನೆ ಸಾಧ್ಯವಾಗುತ್ತಿರಲಿಲ್ಲ. ಆದರೆ, ಪ್ರಧಾನಿ ಮೋದಿ ಅವರು ಕೈಗೊಂಡ ಡಿಜಿಟಲ್ ಇಂಡಿಯಾ ಮತ್ತಿತರ ಉಪಕ್ರಮಗಳಿಂದಾಗಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಆಯೋಗವು ತನಗೆ ನಿಗದಿ ಪಡಿಸಿದ ಗುರಿಗಿಂತ ಹೆಚ್ಚು ಸಾಧನೆ ದಾಖಲಿಸಿದೆ’ ಎಂದು ವಿವರಿಸಿದ್ದಾರೆ.</p>.<p>‘ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ ಎಂಬಂತಹ ಕೂಗು ಎದ್ದಿರುವಾಗ ಆಯೋಗದ ಸಾಧನೆಯನ್ನು ನಂಬಲು ಕಷ್ಟ ಎನಿಸಬಹುದು. ಆಯೋಗವು ಪಿಎಂಇಜಿಪಿ ಅಡಿ 2,67,226 ಹೊಸ ಯೋಜನೆಗಳನ್ನು ಜಾರಿಗೊಳಿಸಿ, 20,63,152 ಹೊಸ ಉದ್ಯೋಗಗಳನ್ನು ಸೃಷ್ಟಿಸಿದೆ’ ಎಂದು ಅವರು ಹೇಳಿದ್ದಾರೆ.</p>.<p>‘ಈ ಮೊದಲು ಪಿಎಂಇಜಿಪಿಯನ್ನು ಆಫ್ಲೈನ್ ವ್ಯವಸ್ಥೆಯಡಿ ಜಾರಿಗೊಳಿಸಲಾಗುತ್ತಿತ್ತು. ಹೀಗಾಗಿ ತಾಂತ್ರಿಕ ನೆರವಿಗಾಗಿ ಹೊರಗುತ್ತಿಗೆ ಸೇವೆ ಒದಗಿಸುವ ಸಂಸ್ಥೆಗಳನ್ನೇ ಅವಲಂಬಿಸಬೇಕಾಗುತ್ತಿತ್ತು.</p>.<p>ಕೆವಿಐಸಿ ಆನ್ಲೈನ್ ಪೋರ್ಟಲ್ ಆರಂಭಿಸಿದ ಮೇಲೆ ಹೆಚ್ಚು ಪಾರದರ್ಶಕತೆ ಬಂದಿದ್ದು, ಮಾರ್ಜಿನ್ ಹಣ ಹಾಗೂ ಸಬ್ಸಿಡಿ ಬಡವಾಡೆ ತ್ವರಿತಗತಿವಾಗಿ ನಡೆಯುತ್ತಿದೆ ಎಂದು ಕೆವಿಐಸಿ ಅಧ್ಯಕ್ಷ ವಿನಯಕುಮಾರ್ ಸಕ್ಸೇನಾ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಹತ್ವಾಕಾಂಕ್ಷೆಯ ಪ್ರಧಾನಿ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮದಡಿ (ಪಿಎಂಇಜಿಪಿ) ಕಳೆದ ಐದು ವರ್ಷಗಳ ಅವಧಿಯಲ್ಲಿ 20 ಲಕ್ಷ ಹೊಸ ಉದ್ಯೋಗಗಳನ್ನು ಸೃಜಿಸಲಾಗಿದೆ ಎಂದು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ಅಧ್ಯಕ್ಷ ವಿನಯಕುಮಾರ್ ಸಕ್ಸೇನಾ ಹೇಳಿದ್ದಾರೆ.</p>.<p>‘2014–15ಕ್ಕೂ ಮುಂಚೆ ನಿಗದಿಪಡಿಸಿದ ಗುರಿ ಸಾಧನೆ ಸಾಧ್ಯವಾಗುತ್ತಿರಲಿಲ್ಲ. ಆದರೆ, ಪ್ರಧಾನಿ ಮೋದಿ ಅವರು ಕೈಗೊಂಡ ಡಿಜಿಟಲ್ ಇಂಡಿಯಾ ಮತ್ತಿತರ ಉಪಕ್ರಮಗಳಿಂದಾಗಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಆಯೋಗವು ತನಗೆ ನಿಗದಿ ಪಡಿಸಿದ ಗುರಿಗಿಂತ ಹೆಚ್ಚು ಸಾಧನೆ ದಾಖಲಿಸಿದೆ’ ಎಂದು ವಿವರಿಸಿದ್ದಾರೆ.</p>.<p>‘ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ ಎಂಬಂತಹ ಕೂಗು ಎದ್ದಿರುವಾಗ ಆಯೋಗದ ಸಾಧನೆಯನ್ನು ನಂಬಲು ಕಷ್ಟ ಎನಿಸಬಹುದು. ಆಯೋಗವು ಪಿಎಂಇಜಿಪಿ ಅಡಿ 2,67,226 ಹೊಸ ಯೋಜನೆಗಳನ್ನು ಜಾರಿಗೊಳಿಸಿ, 20,63,152 ಹೊಸ ಉದ್ಯೋಗಗಳನ್ನು ಸೃಷ್ಟಿಸಿದೆ’ ಎಂದು ಅವರು ಹೇಳಿದ್ದಾರೆ.</p>.<p>‘ಈ ಮೊದಲು ಪಿಎಂಇಜಿಪಿಯನ್ನು ಆಫ್ಲೈನ್ ವ್ಯವಸ್ಥೆಯಡಿ ಜಾರಿಗೊಳಿಸಲಾಗುತ್ತಿತ್ತು. ಹೀಗಾಗಿ ತಾಂತ್ರಿಕ ನೆರವಿಗಾಗಿ ಹೊರಗುತ್ತಿಗೆ ಸೇವೆ ಒದಗಿಸುವ ಸಂಸ್ಥೆಗಳನ್ನೇ ಅವಲಂಬಿಸಬೇಕಾಗುತ್ತಿತ್ತು.</p>.<p>ಕೆವಿಐಸಿ ಆನ್ಲೈನ್ ಪೋರ್ಟಲ್ ಆರಂಭಿಸಿದ ಮೇಲೆ ಹೆಚ್ಚು ಪಾರದರ್ಶಕತೆ ಬಂದಿದ್ದು, ಮಾರ್ಜಿನ್ ಹಣ ಹಾಗೂ ಸಬ್ಸಿಡಿ ಬಡವಾಡೆ ತ್ವರಿತಗತಿವಾಗಿ ನಡೆಯುತ್ತಿದೆ ಎಂದು ಕೆವಿಐಸಿ ಅಧ್ಯಕ್ಷ ವಿನಯಕುಮಾರ್ ಸಕ್ಸೇನಾ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>