"ಕಳೆದ ಆರು ತಿಂಗಳಲ್ಲಿ, ಅವನ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು. ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದು, ಹಾಸಿಗೆ ಹಿಡಿದಿದ್ದನು, ಆತನಿಗೆ ತುರ್ತಾಗಿ ಹೃದಯ ಕಸಿ ಶಸ್ತ್ರಚಿಕಿತ್ಸೆ ನಡೆಸಬೇಕಾದ ಅಗತ್ಯವಿತ್ತು. ಈ ಸಂದರ್ಭ, ಗುಜರಾತ್ನಿಂದ ದಾನಿಯ ಹೃದಯದ ಲಭ್ಯತೆ ಬಗ್ಗೆ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆಯಿಂದ ನಮಗೆ ಮಾಹಿತಿ ಬಂದಿತ್ತು" ಎಂದು ಕಾರ್ಡಿಯೋಥೊರಾಸಿಕ್ ಮತ್ತು ವಾಸ್ಕುಲರ್ ಶಸ್ತ್ರಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಡಾ.ಮಿಲಿಂದ್ ಹೊಟೆ ಹೇಳಿದ್ದಾರೆ.