<p class="title"><strong>ಪ್ರತಾಪಗಢ (ಉತ್ತರ ಪ್ರದೇಶ): </strong>ಜಿಲ್ಲೆಯ ಸ್ಥಳೀಯ ಪತ್ರಕರ್ತರೊಬ್ಬರ 20 ವರ್ಷದ ಮಗನನ್ನು ಅಪರಿಚಿತ ವ್ಯಕ್ತಿಗಳು ಕಬ್ಬಿಣದ ಸರಳಿನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p>.<p class="title">ವಿಶಾಲ್ ಪಾಂಡೆ ಮೃತ ಯುವಕ. ಬಘರೈ ಪೊಲೀಸ್ ಠಾಣಾ ವ್ಯಾಪ್ತಿಯ ರೋರ್ ಗ್ರಾಮದ ನಿವಾಸಿಯಾಗಿರುವ ಈತನಿಗೆ ಕಾರನ್ನು ಡಿಕ್ಕಿ ಹೊಡೆಸಿ, ಕಬ್ಬಿಣದ ರಾಡ್ನಿಂದ ಹೊಡೆದು ಬುಧವಾರ ರಾತ್ರಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸದರ್ ಅಮರ್ ನಾಥ್ ಗುಪ್ತಾ ಹೇಳಿದ್ದಾರೆ.</p>.<p class="title">ಮೃತ ಯುವಕನ ಕುಟುಂಬದ ದೂರಿನ ಮೇರೆಗೆ ರಂಗ್ ಬಹದ್ದೂರ್ ಗ್ರಾಮದ ಮುಖ್ಯಸ್ಥ ಸೇರಿ ಏಳು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<p class="title">ಕುಟುಂಬದ ಮೇಲಿನ ಹಳೆಯ ದ್ವೇಷವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಪ್ರತಾಪಗಢ (ಉತ್ತರ ಪ್ರದೇಶ): </strong>ಜಿಲ್ಲೆಯ ಸ್ಥಳೀಯ ಪತ್ರಕರ್ತರೊಬ್ಬರ 20 ವರ್ಷದ ಮಗನನ್ನು ಅಪರಿಚಿತ ವ್ಯಕ್ತಿಗಳು ಕಬ್ಬಿಣದ ಸರಳಿನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p>.<p class="title">ವಿಶಾಲ್ ಪಾಂಡೆ ಮೃತ ಯುವಕ. ಬಘರೈ ಪೊಲೀಸ್ ಠಾಣಾ ವ್ಯಾಪ್ತಿಯ ರೋರ್ ಗ್ರಾಮದ ನಿವಾಸಿಯಾಗಿರುವ ಈತನಿಗೆ ಕಾರನ್ನು ಡಿಕ್ಕಿ ಹೊಡೆಸಿ, ಕಬ್ಬಿಣದ ರಾಡ್ನಿಂದ ಹೊಡೆದು ಬುಧವಾರ ರಾತ್ರಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸದರ್ ಅಮರ್ ನಾಥ್ ಗುಪ್ತಾ ಹೇಳಿದ್ದಾರೆ.</p>.<p class="title">ಮೃತ ಯುವಕನ ಕುಟುಂಬದ ದೂರಿನ ಮೇರೆಗೆ ರಂಗ್ ಬಹದ್ದೂರ್ ಗ್ರಾಮದ ಮುಖ್ಯಸ್ಥ ಸೇರಿ ಏಳು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<p class="title">ಕುಟುಂಬದ ಮೇಲಿನ ಹಳೆಯ ದ್ವೇಷವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>