<p><strong>ಲಖನೌ:</strong> ಇಲ್ಲಿನ ಫತೇಹ್ಪುರ ಜಿಲ್ಲೆಯಲ್ಲಿರುವ 200 ವರ್ಷದ ಹಳೆಯ ‘ಮಕ್ಬಾರ’ (ಸಮಾಧಿ) ಹಾಗೂ ಎರಡು ‘ಮಜಾರ್’ (ದೇಗುಲ)ಗಳನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಸೋಮವಾರ ಹಾನಿಗೊಳಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.</p><p>‘ಸಮಾಧಿಯು ಈ ಹಿಂದೆ ದೇವಾಲಯವಾಗಿತ್ತು. ಮುಸಲ್ಮಾನರ ಆಡಳಿತದಲ್ಲಿ ಅದನ್ನು ಸಮಾಧಿಯನ್ನಾಗಿ ಪರಿವರ್ತಿಸಲಾಗಿತ್ತು’ ಎಂದು ಹಿಂದೂ ಸಂಘಟನೆಯ ಮುಖಂಡರು ತಿಳಿಸಿದ್ದಾರೆ.</p><p>ಪೊಲೀಸ್ ಮೂಲಗಳ ಪ್ರಕಾರ, ‘ಬಿಜೆಪಿ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆಯ ಕಾರ್ಯಕರ್ತರು ಸಮಾಧಿ ಮುಂದೆ ಸೇರಿದ್ದರು. ಈ ವೇಳೆ ಅಲ್ಲಿ ಹಾಕಿದ್ದ ಬ್ಯಾರಿಕೇಡ್ಗಳನ್ನು ಮುರಿದು, ‘ನವಾಬ್ ಅಬ್ದೂಸ್ ಸಮಾಧಿ’ಗೆ ತೆರಳಿ ಆರತಿ ಹಾಗೂ ಪೂಜೆ ಸಲ್ಲಿಸಿದರು.</p><p>ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ಮಕ್ಲಾಲ್ ಪಾಲ್, ಮಾಜಿ ಶಾಸಕ ವಿಕ್ರಮ್ ಸಿಂಗ್ ನೇತೃತ್ವದಲ್ಲಿ ಒಳಗೆ ನುಗ್ಗಿದ ಕಾರ್ಯಕರ್ತರು ಹನುಮಾನ್ ಚಾಲೀಸಾವನ್ನು ಪಠಿಸಿದ್ದಾರೆ.</p><p>ಈ ವೇಳೆ ಕೆಲವರು ಆವರಣದಲ್ಲಿದ್ದ ಎರಡು ಒಳಗಿದ್ದ ಎರಡು ದೇಗುಲಗಳನ್ನು ಕಲ್ಲು ಹಾಗೂ ಬಡಿಗೆಗಳಿಂದ ಹಾನಿಗೊಳಿಸಿದ್ದಾರೆ. ಕೆಲವರು ಸಮಾಧಿ ಮೇಲೆ ದೊಡ್ದದಾದ ಕಲ್ಲು, ಲಾಠಿ ಬಳಸಿ ಹಾನಿಗೊಳಿಸುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳಲ್ಲಿ ದಾಖಲಾಗಿದೆ.</p><p>ಈ ವೇಳೆ ಮತ್ತೊಂದು ಸಮುದಾಯದವರು ಸ್ಥಳಕ್ಕೆ ಭೇಟಿ ನೀಡಿದ್ದು, ಹಿಂದೂ ಸಂಘಟನೆಯ ಕಾರ್ಯಕರ್ತರ ಜೊತೆಗೆ ವಾಗ್ವಾದ ನಡೆಸಿದ್ದಾರೆ.</p><p>‘ತಕ್ಷಣವೇ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿ, ಬ್ಯಾರಿಕೇಡ್ಗಳನ್ನು ಅಳವಡಿಸಿ, ಜನರು ಒಳಪ್ರವೇಶಿದಂತೆ ತಡೆಯಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಇಲ್ಲಿನ ಫತೇಹ್ಪುರ ಜಿಲ್ಲೆಯಲ್ಲಿರುವ 200 ವರ್ಷದ ಹಳೆಯ ‘ಮಕ್ಬಾರ’ (ಸಮಾಧಿ) ಹಾಗೂ ಎರಡು ‘ಮಜಾರ್’ (ದೇಗುಲ)ಗಳನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಸೋಮವಾರ ಹಾನಿಗೊಳಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.</p><p>‘ಸಮಾಧಿಯು ಈ ಹಿಂದೆ ದೇವಾಲಯವಾಗಿತ್ತು. ಮುಸಲ್ಮಾನರ ಆಡಳಿತದಲ್ಲಿ ಅದನ್ನು ಸಮಾಧಿಯನ್ನಾಗಿ ಪರಿವರ್ತಿಸಲಾಗಿತ್ತು’ ಎಂದು ಹಿಂದೂ ಸಂಘಟನೆಯ ಮುಖಂಡರು ತಿಳಿಸಿದ್ದಾರೆ.</p><p>ಪೊಲೀಸ್ ಮೂಲಗಳ ಪ್ರಕಾರ, ‘ಬಿಜೆಪಿ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆಯ ಕಾರ್ಯಕರ್ತರು ಸಮಾಧಿ ಮುಂದೆ ಸೇರಿದ್ದರು. ಈ ವೇಳೆ ಅಲ್ಲಿ ಹಾಕಿದ್ದ ಬ್ಯಾರಿಕೇಡ್ಗಳನ್ನು ಮುರಿದು, ‘ನವಾಬ್ ಅಬ್ದೂಸ್ ಸಮಾಧಿ’ಗೆ ತೆರಳಿ ಆರತಿ ಹಾಗೂ ಪೂಜೆ ಸಲ್ಲಿಸಿದರು.</p><p>ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ಮಕ್ಲಾಲ್ ಪಾಲ್, ಮಾಜಿ ಶಾಸಕ ವಿಕ್ರಮ್ ಸಿಂಗ್ ನೇತೃತ್ವದಲ್ಲಿ ಒಳಗೆ ನುಗ್ಗಿದ ಕಾರ್ಯಕರ್ತರು ಹನುಮಾನ್ ಚಾಲೀಸಾವನ್ನು ಪಠಿಸಿದ್ದಾರೆ.</p><p>ಈ ವೇಳೆ ಕೆಲವರು ಆವರಣದಲ್ಲಿದ್ದ ಎರಡು ಒಳಗಿದ್ದ ಎರಡು ದೇಗುಲಗಳನ್ನು ಕಲ್ಲು ಹಾಗೂ ಬಡಿಗೆಗಳಿಂದ ಹಾನಿಗೊಳಿಸಿದ್ದಾರೆ. ಕೆಲವರು ಸಮಾಧಿ ಮೇಲೆ ದೊಡ್ದದಾದ ಕಲ್ಲು, ಲಾಠಿ ಬಳಸಿ ಹಾನಿಗೊಳಿಸುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳಲ್ಲಿ ದಾಖಲಾಗಿದೆ.</p><p>ಈ ವೇಳೆ ಮತ್ತೊಂದು ಸಮುದಾಯದವರು ಸ್ಥಳಕ್ಕೆ ಭೇಟಿ ನೀಡಿದ್ದು, ಹಿಂದೂ ಸಂಘಟನೆಯ ಕಾರ್ಯಕರ್ತರ ಜೊತೆಗೆ ವಾಗ್ವಾದ ನಡೆಸಿದ್ದಾರೆ.</p><p>‘ತಕ್ಷಣವೇ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿ, ಬ್ಯಾರಿಕೇಡ್ಗಳನ್ನು ಅಳವಡಿಸಿ, ಜನರು ಒಳಪ್ರವೇಶಿದಂತೆ ತಡೆಯಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>