<p><strong>ಚಂಡೀಗಢ:</strong> ‘2008ರಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ನಿವಾಸದ ಬಾಗಿಲಿನಲ್ಲಿ ನಗದು ಸಿಕ್ಕಿದ್ದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧದ ಆಪಾದನೆಗಳನ್ನು ಸಾಬೀತುಪಡಿಸುವಲ್ಲಿ ಸಿಬಿಐ ಸಂಪೂರ್ಣ ವಿಫಲವಾಗಿದೆ’ ಎಂದು ಸಿಬಿಐನ ವಿಶೇಷ ನ್ಯಾಯಾಲಯವೊಂದು ಹೇಳಿದೆ.</p>.<p>‘ಸಿಬಿಐ ಈ ಮೊದಲು ಪ್ರಕರಣ ಮುಕ್ತಾಯಗೊಳಿಸಲು ನಿರ್ಧರಿಸಿತ್ತು. ಈ ನಿಲುವಿಗೇ ಅದು ಅಂಟಿಕೊಂಡಿರಬೇಕಿತ್ತು’ ಎಂದು ವಿಶೇಷ ಸಿಬಿಐ ನ್ಯಾಯಾಧೀಶೆ ಅಲ್ಕಾ ಮಲಿಕ್ ಹೇಳಿದ್ದಾರೆ.</p>.<p>ಪ್ರಕರಣದಲ್ಲಿ ಆರೋಪಿಗಳಾಗಿದ್ದ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನಿರ್ಮಲ್ ಯಾದವ್ ಹಾಗೂ ಇತರ ನಾಲ್ವರನ್ನು ದೋಷಮುಕ್ತಗೊಳಿಸಿ ಮಾರ್ಚ್ 29ರಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಮಾರ್ಚ್ 3ರಂದು ಈ ತೀರ್ಪನ್ನು ಬಿಡುಗಡೆ ಮಾಡಲಾಗಿದೆ.</p>.<p>₹15 ಲಕ್ಷ ನಗದು ಇರುವ ಪೊಟ್ಟಣವನ್ನು 2008ರ ಆಗಸ್ಟ್ 13ರಂದು ನ್ಯಾಯಮೂರ್ತಿ ನಿರ್ಮಲ್ಜಿತ್ ಕೌರ್ ನಿವಾಸಕ್ಕೆ ತಪ್ಪಾಗಿ ತಲುಪಿಸಲಾಗಿತ್ತು. ಆಸ್ತಿ ವಿವಾದವೊಂದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಭಾವ ಬೀರಲು ನ್ಯಾಯಮೂರ್ತಿ ಯಾದವ್ ಅವರಿಗೆ ತಲುಪಿಸಬೇಕಿದ್ದ ಹಣ ಇದಾಗಿತ್ತು ಎಂದು ಆರೋಪಿಸಲಾಗಿತ್ತು.</p>.<p>'ಆರೋಪಿಗಳ ವಿರುದ್ಧದ ಆಪಾದನೆ ಸಾಬೀತು ಮಾಡುವಲ್ಲಿ ಪ್ರಾಸಿಕ್ಯೂಷನ್ ಸಂಪೂರ್ಣ ವಿಫಲವಾಗಿದೆ. ಇದರ ಪರಿಣಾಮವಾಗಿ ಆರೋಪಿಗಳಾದ ರವೀಂದ್ರ ಭಾಸಿನ್, ರಾಜೀವ್ ಗುಪ್ತಾ, ನಿರ್ಮಲ್ ಸಿಂಗ್ ಹಾಗೂ ನಿವೃತ್ತ ನ್ಯಾಯಮೂರ್ತಿ ನಿರ್ಮಲ್ ಯಾದವ್ ಅವರನ್ನು ಖುಲಾಸೆಗೊಳಿಸಲಾಗಿದೆ’ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.</p>.<p>ಪ್ರಕರಣ ಮುಕ್ತಾಯಗೊಳಿಸಿ 2009ರ ಡಿಸೆಂಬರ್ನಲ್ಲಿ ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಸಿತ್ತು. ಇದನ್ನು ತಿರಸ್ಕರಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯ, ಪ್ರಕರಣ ಕುರಿತು ಮರುತನಿಖೆ ನಡೆಸುವಂತೆ 2010ರ ಮಾರ್ಚ್ನಲ್ಲಿ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ‘2008ರಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ನಿವಾಸದ ಬಾಗಿಲಿನಲ್ಲಿ ನಗದು ಸಿಕ್ಕಿದ್ದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧದ ಆಪಾದನೆಗಳನ್ನು ಸಾಬೀತುಪಡಿಸುವಲ್ಲಿ ಸಿಬಿಐ ಸಂಪೂರ್ಣ ವಿಫಲವಾಗಿದೆ’ ಎಂದು ಸಿಬಿಐನ ವಿಶೇಷ ನ್ಯಾಯಾಲಯವೊಂದು ಹೇಳಿದೆ.</p>.<p>‘ಸಿಬಿಐ ಈ ಮೊದಲು ಪ್ರಕರಣ ಮುಕ್ತಾಯಗೊಳಿಸಲು ನಿರ್ಧರಿಸಿತ್ತು. ಈ ನಿಲುವಿಗೇ ಅದು ಅಂಟಿಕೊಂಡಿರಬೇಕಿತ್ತು’ ಎಂದು ವಿಶೇಷ ಸಿಬಿಐ ನ್ಯಾಯಾಧೀಶೆ ಅಲ್ಕಾ ಮಲಿಕ್ ಹೇಳಿದ್ದಾರೆ.</p>.<p>ಪ್ರಕರಣದಲ್ಲಿ ಆರೋಪಿಗಳಾಗಿದ್ದ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನಿರ್ಮಲ್ ಯಾದವ್ ಹಾಗೂ ಇತರ ನಾಲ್ವರನ್ನು ದೋಷಮುಕ್ತಗೊಳಿಸಿ ಮಾರ್ಚ್ 29ರಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಮಾರ್ಚ್ 3ರಂದು ಈ ತೀರ್ಪನ್ನು ಬಿಡುಗಡೆ ಮಾಡಲಾಗಿದೆ.</p>.<p>₹15 ಲಕ್ಷ ನಗದು ಇರುವ ಪೊಟ್ಟಣವನ್ನು 2008ರ ಆಗಸ್ಟ್ 13ರಂದು ನ್ಯಾಯಮೂರ್ತಿ ನಿರ್ಮಲ್ಜಿತ್ ಕೌರ್ ನಿವಾಸಕ್ಕೆ ತಪ್ಪಾಗಿ ತಲುಪಿಸಲಾಗಿತ್ತು. ಆಸ್ತಿ ವಿವಾದವೊಂದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಭಾವ ಬೀರಲು ನ್ಯಾಯಮೂರ್ತಿ ಯಾದವ್ ಅವರಿಗೆ ತಲುಪಿಸಬೇಕಿದ್ದ ಹಣ ಇದಾಗಿತ್ತು ಎಂದು ಆರೋಪಿಸಲಾಗಿತ್ತು.</p>.<p>'ಆರೋಪಿಗಳ ವಿರುದ್ಧದ ಆಪಾದನೆ ಸಾಬೀತು ಮಾಡುವಲ್ಲಿ ಪ್ರಾಸಿಕ್ಯೂಷನ್ ಸಂಪೂರ್ಣ ವಿಫಲವಾಗಿದೆ. ಇದರ ಪರಿಣಾಮವಾಗಿ ಆರೋಪಿಗಳಾದ ರವೀಂದ್ರ ಭಾಸಿನ್, ರಾಜೀವ್ ಗುಪ್ತಾ, ನಿರ್ಮಲ್ ಸಿಂಗ್ ಹಾಗೂ ನಿವೃತ್ತ ನ್ಯಾಯಮೂರ್ತಿ ನಿರ್ಮಲ್ ಯಾದವ್ ಅವರನ್ನು ಖುಲಾಸೆಗೊಳಿಸಲಾಗಿದೆ’ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.</p>.<p>ಪ್ರಕರಣ ಮುಕ್ತಾಯಗೊಳಿಸಿ 2009ರ ಡಿಸೆಂಬರ್ನಲ್ಲಿ ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಸಿತ್ತು. ಇದನ್ನು ತಿರಸ್ಕರಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯ, ಪ್ರಕರಣ ಕುರಿತು ಮರುತನಿಖೆ ನಡೆಸುವಂತೆ 2010ರ ಮಾರ್ಚ್ನಲ್ಲಿ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>