‘ಕೇಂದ್ರ ಸರ್ಕಾರವು ‘ಕನಿಷ್ಟ ಆಡಳಿತ, ಗರಿಷ್ಠ ಮೌನ’ ಎಂಬ ತತ್ವ ಪಾಲಿಸುತ್ತಿದೆ. ಪ್ರತಿಪಕ್ಷಗಳು ಎತ್ತುವ ಪ್ರಶ್ನೆಗಳಿಗೆ ಉತ್ತರಿಸುವುದು ಸರ್ಕಾರದ ಜವಾಬ್ದಾರಿ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯದ ಬಗ್ಗೆ ಕಾಂಗ್ರೆಸ್ ಪ್ರಶ್ನೆ ಕೇಳುತ್ತಲೇ ಇರುತ್ತದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.