ವಿಜಯವಾಡ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರ ಮಾಡಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ‘ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿರುವ ಅವರು ಪ್ರಚಾರಪ್ರಿಯ ಪ್ರಧಾನಿ’ ಎಂದಿದ್ದಾರೆ. ಅಲ್ಲದೆ, ‘2019ರಲ್ಲಿ ಬಿಜೆಪಿ ಖಂಡಿತ ಅಧಿಕಾರಕ್ಕೆ ಬರುವುದಿಲ್ಲ’ ಎಂದು ಭವಿಷ್ಯ ನುಡಿದಿದ್ದಾರೆ.