ಭಾರತವು 2023ರಲ್ಲಿ ಹವಾಮಾನಕ್ಕೆ ಸಂಬಂಧಿಸಿದ ವಿಪರೀತ ಏರಿಳಿತಗಳಿಗೆ ಸಾಕ್ಷಿಯಾಗಿದೆ. ಮುಂಗಾರು ಮಳೆಯ ಅಸಮಾನ ಹಂಚಿಕೆಯಿಂದಾಗಿ ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾದರೆ, ಕೆಲವು ಭಾಗಗಳಲ್ಲಿ ಬರದ ಛಾಯೆ ಆವರಿಸಿತು. ಮಳೆಯ ನಿರೀಕ್ಷೆಯಲ್ಲಿ ರೈತ ಆಗಸದತ್ತ ದೃಷ್ಟಿ ನೆಟ್ಟಿರುವ ಚಿತ್ರ ಮಾತ್ರವಲ್ಲದೆ, ಜನರು ಪ್ರವಾಹದ ನೀರಿನಲ್ಲಿ ಸುರಕ್ಷಿತ ಪ್ರದೇಶಗಳತ್ತ ಸಾಗುತ್ತಿರುವ ದೃಶ್ಯವನ್ನೂ ಈ ವರ್ಷವು ನಮ್ಮ ಕಣ್ಮುಂದೆ ಇರಿಸಿದೆ
‘ಮಿಚಾಂಗ್’ ಚಂಡಮಾರುತದ ಪರಿಣಾಮ ಸುರಿದ ಮಳೆಗೆ ಚೆನ್ನೈನ ಕೆಲವು ಪ್ರದೇಶಗಳು ಜಲಾವೃತಗೊಂಡಿದ್ದ ದೃಶ್ಯ
‘ಮಿಚಾಂಗ್’ ಚಂಡಮಾರುತದ ಪರಿಣಾಮ ಸುರಿದ ಮಳೆಗೆ ಜಲಾವೃತಗೊಂಡ ಚೆನ್ನೈನ ರಸ್ತೆಯಲ್ಲಿ ಮಹಿಳೆಯೊಬ್ಬರು ಸಾಗಿದ ದೃಶ್ಯ
ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಿಂದ ಹೊರಬಂದ ಕಾರ್ಮಿಕರೊಬ್ಬರನ್ನು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಆಲಂಗಿಸಿದ ಕ್ಷಣ
ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಹೊರತರಲು ನಡೆದ ರಕ್ಷಣಾ ಕಾರ್ಯಾಚರಣೆಯ ನೋಟ