<p><strong>ಗುವಾಹಟಿ</strong>: 2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ಹೆಣೆಯಲು ಬಿಜೆಪಿ ಸಜ್ಜಾಗಿದ್ದು, ಪೂರ್ವ ಮತ್ತು ಈಶಾನ್ಯ ಭಾರತದ 12 ರಾಜ್ಯಗಳ ಹಿರಿಯ ನಾಯಕರು ಇಂದು ಅಸ್ಸಾಂ ಗುವಾಹಟಿಯಲ್ಲಿ ಸಭೆ ನಡೆಸಲಿದ್ದಾರೆ.</p><p>ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್, ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಸೇರಿದಂತೆ ಪಕ್ಷದ ಸಂಸದರು, ಶಾಸಕರು, ರಾಜ್ಯ ಘಟಕದ ಅಧ್ಯಕ್ಷರು ಭಾಗವಹಿಸಲಿದ್ದಾರೆ.</p><p>‘ಪಕ್ಷದ ಕೋರ್ ಕಮಿಟಿಯ ಸಭೆ ಬುಧವಾರ ರಾತ್ರಿ ನಡೆದಿದ್ದು, ಈ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ‘ಮಹಾ ಜನ ಸಂಪರ್ಕ ಅಭಿಯಾನ‘ ದ ಪರಿಣಾಮಗಳ ಕುರಿತು ಚರ್ಚಿಸಲಾಯಿತು. ರಾತ್ರಿ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಇಂದು ವಿವರವಾಗಿ ಚರ್ಚಿಸಲಾಗುವುದು‘ ಎಂದು ಅಸ್ಸಾಂ ಬಿಜೆಪಿ ಅಧ್ಯಕ್ಷ ಭಬೇಶ್ ಕಲಿತಾ ತಿಳಿಸಿದ್ದಾರೆ.</p><p>ಈ ವರ್ಷದ ಕೊನೆಯಲ್ಲಿ ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.</p><p>ಎಂಟು ಈಶಾನ್ಯ ರಾಜ್ಯಗಳು ಒಟ್ಟು 25 ಲೋಕಸಭಾ ಸ್ಥಾನಗಳನ್ನು ಹೊಂದಿದ್ದು, ಅಸ್ಸಾಂ14 ಲೋಕಸಭಾ ಸ್ಥಾನಗಳನ್ನು ಹೊಂದಿದೆ. ಅರುಣಾಚಲ ಪ್ರದೇಶ, ಮೇಘಾಲಯ, ಮಣಿಪುರ ಮತ್ತು ತ್ರಿಪುರಾ ತಲಾ 2 ಸ್ಥಾನಗಳನ್ನು ಹೊಂದಿದ್ದರೆ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ ತಲಾ 1 ಸ್ಥಾನವನ್ನು ಹೊಂದಿವೆ.</p><p>ಪೂರ್ವ ರಾಜ್ಯಗಳ ಪೈಕಿ ಪಶ್ಚಿಮ ಬಂಗಾಳ ಅತಿ ಹೆಚ್ಚು ಸ್ಥಾನಗಳನ್ನು ಹೊಂದಿದೆ. ಪಶ್ಚಿಮ ಬಂಗಾಳ 42, ಬಿಹಾರ 40, ಒಡಿಶಾ 21 ಮತ್ತು ಜಾರ್ಖಂಡ್ 14 ಸ್ಥಾನಗಳನ್ನು ಹೊಂದಿವೆ.</p><p>ಉತ್ತರ , ಮಧ್ಯ ಮತ್ತು ಪಶ್ಚಿಮ ರಾಜ್ಯಗಳ ಬಿಜೆಪಿ ನಾಯಕರು ಜುಲೈ 7 ರಂದು ನವದೆಹಲಿಯಲ್ಲಿ ಸಭೆ ನಡೆಸಲಿದ್ದಾರೆ. ಜುಲೈ 8 ರಂದು ದಕ್ಷಿಣ ರಾಜ್ಯಗಳ ಬಿಜೆಪಿ ನಾಯಕರು ಹೈದರಾಬಾದ್ನಲ್ಲಿ ಸಭೆ ನಡೆಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: 2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ಹೆಣೆಯಲು ಬಿಜೆಪಿ ಸಜ್ಜಾಗಿದ್ದು, ಪೂರ್ವ ಮತ್ತು ಈಶಾನ್ಯ ಭಾರತದ 12 ರಾಜ್ಯಗಳ ಹಿರಿಯ ನಾಯಕರು ಇಂದು ಅಸ್ಸಾಂ ಗುವಾಹಟಿಯಲ್ಲಿ ಸಭೆ ನಡೆಸಲಿದ್ದಾರೆ.</p><p>ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್, ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಸೇರಿದಂತೆ ಪಕ್ಷದ ಸಂಸದರು, ಶಾಸಕರು, ರಾಜ್ಯ ಘಟಕದ ಅಧ್ಯಕ್ಷರು ಭಾಗವಹಿಸಲಿದ್ದಾರೆ.</p><p>‘ಪಕ್ಷದ ಕೋರ್ ಕಮಿಟಿಯ ಸಭೆ ಬುಧವಾರ ರಾತ್ರಿ ನಡೆದಿದ್ದು, ಈ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ‘ಮಹಾ ಜನ ಸಂಪರ್ಕ ಅಭಿಯಾನ‘ ದ ಪರಿಣಾಮಗಳ ಕುರಿತು ಚರ್ಚಿಸಲಾಯಿತು. ರಾತ್ರಿ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಇಂದು ವಿವರವಾಗಿ ಚರ್ಚಿಸಲಾಗುವುದು‘ ಎಂದು ಅಸ್ಸಾಂ ಬಿಜೆಪಿ ಅಧ್ಯಕ್ಷ ಭಬೇಶ್ ಕಲಿತಾ ತಿಳಿಸಿದ್ದಾರೆ.</p><p>ಈ ವರ್ಷದ ಕೊನೆಯಲ್ಲಿ ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.</p><p>ಎಂಟು ಈಶಾನ್ಯ ರಾಜ್ಯಗಳು ಒಟ್ಟು 25 ಲೋಕಸಭಾ ಸ್ಥಾನಗಳನ್ನು ಹೊಂದಿದ್ದು, ಅಸ್ಸಾಂ14 ಲೋಕಸಭಾ ಸ್ಥಾನಗಳನ್ನು ಹೊಂದಿದೆ. ಅರುಣಾಚಲ ಪ್ರದೇಶ, ಮೇಘಾಲಯ, ಮಣಿಪುರ ಮತ್ತು ತ್ರಿಪುರಾ ತಲಾ 2 ಸ್ಥಾನಗಳನ್ನು ಹೊಂದಿದ್ದರೆ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ ತಲಾ 1 ಸ್ಥಾನವನ್ನು ಹೊಂದಿವೆ.</p><p>ಪೂರ್ವ ರಾಜ್ಯಗಳ ಪೈಕಿ ಪಶ್ಚಿಮ ಬಂಗಾಳ ಅತಿ ಹೆಚ್ಚು ಸ್ಥಾನಗಳನ್ನು ಹೊಂದಿದೆ. ಪಶ್ಚಿಮ ಬಂಗಾಳ 42, ಬಿಹಾರ 40, ಒಡಿಶಾ 21 ಮತ್ತು ಜಾರ್ಖಂಡ್ 14 ಸ್ಥಾನಗಳನ್ನು ಹೊಂದಿವೆ.</p><p>ಉತ್ತರ , ಮಧ್ಯ ಮತ್ತು ಪಶ್ಚಿಮ ರಾಜ್ಯಗಳ ಬಿಜೆಪಿ ನಾಯಕರು ಜುಲೈ 7 ರಂದು ನವದೆಹಲಿಯಲ್ಲಿ ಸಭೆ ನಡೆಸಲಿದ್ದಾರೆ. ಜುಲೈ 8 ರಂದು ದಕ್ಷಿಣ ರಾಜ್ಯಗಳ ಬಿಜೆಪಿ ನಾಯಕರು ಹೈದರಾಬಾದ್ನಲ್ಲಿ ಸಭೆ ನಡೆಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>