<p><strong>ಕರ್ನೂಲ್</strong>: 2024ಕ್ಕೆ ಜನರು ತೆಲುಗು ದೇಶಂ ಪಕ್ಷವನ್ನು ಅಧಿಕಾರಕ್ಕೆ ತರದೇ ಇದ್ದರೆ ಅದೇ ನನ್ನ ಅಂತಿಮ ಚುನಾವಣೆ ಆಗಲಿದೆ ಎಂದು ಟಿಡಿಪಿ ಅಧ್ಯಕ್ಷ ಎನ್, ಚಂದ್ರಬಾಬು ನಾಯ್ಡು ಹೇಳಿದ್ದಾರೆ.</p>.<p>ಬುಧವಾರ ರಾತ್ರಿ, ಕರ್ನೂಲ್ ಜಿಲ್ಲೆಯ ರೋಡ್ ಶೋನಲ್ಲಿ ಭಾವನಾತ್ಮಕ ಭಾಷಣ ಮಾಡಿದ ಅವರು, ಟಿಡಿಪಿ ಅಧಿಕಾರಕ್ಕೆ ಬರುವವರೆಗೂ ವಿಧಾನಸಭೆಗೆ ಕಾಲಿಡುವುದಿಲ್ಲ ಎಂಬ ತಮ್ಮ ಮಾತನ್ನು ಪುನರುಚ್ಛರಿಸಿದರು.</p>.<p>‘ನಾನು ಮತ್ತೆ ವಿಧಾನಸಭೆಗೆ ಹೋಗಬೇಕು ಎಂದಿದ್ದರೆ, ರಾಜಕೀಯದಲ್ಲಿ ಮುಂದುವರಿಯಬೇಕು ಎಂದಿದ್ದರೆ, ಆಂಧ್ರಪ್ರದೇಶಕ್ಕೆ ನ್ಯಾಯ ಒದಗಿಸಬೇಕಿದ್ದರೆ ಮುಂದಿನ ಚುನಾವಣೆಯಲ್ಲಿ ಟಿಡಿಪಿಯನ್ನು ಗೆಲ್ಲಿಸಬೇಕು. ಇಲ್ಲವಾದರೆ ಅದು ನನ್ನ ಕೊನೆಯ ಚುನಾವಣೆಯಾಗಲಿದೆ’ಎಂದಿದ್ದಾರೆ.</p>.<p>ನೀವು ನನ್ನನ್ನು ನಂಬುತ್ತೀರಾ? ನನ್ನನ್ನು ಆಶೀರ್ವದಿಸುತ್ತೀರಾ? ಎಂದು ಜನಸ್ತೋಮಕ್ಕೆ ಪ್ರಶ್ನಿಸಿದ್ದಾರೆ.</p>.<p>ನವೆಂಬರ್ 19, 2021ರಂದು ಸದನದಲ್ಲಿ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷವು ತಮ್ಮ ಪತ್ನಿಯನ್ನು ಅವಮಾನಿಸಿದೆ ಎಂದು ಆರೋಪಿಸಿದ ವಿರೋಧ ಪಕ್ಷದ ನಾಯಕ ಚಂದ್ರಬಾಬು ನಾಯ್ಡು, ಅಧಿಕಾರಕ್ಕೆ ಮರಳಿದ ಬಳಿಕವಷ್ಟೇ ವಿಧಾನಸಭೆಗೆ ಹೆಜ್ಜೆ ಇಡುವುದಾಗಿ ಘೋಷಿಸಿದ್ದರು.</p>.<p>‘ನನ್ನ ಹೋರಾಟ ಮಕ್ಕಳ ಭವಿಷ್ಯಕ್ಕಾಗಿ, ರಾಜ್ಯದ ಭವಿಷ್ಯಕ್ಕಾಗಿ, ಈ ಹಿಂದೆಯೂ ನಾನು ಅಭಿವೃದ್ಧಿ ಮಾಡಿದ್ದೇನೆ. ಅದನ್ನು ಸಾಬೀತುಪಡಿಸುವ ಮಾದರಿ ಇದೆ’ಎಂದಿದ್ದಾರೆ.</p>.<p>ಈ ಬಗ್ಗೆ ಯೋಚಿಸಿ, ನಾನು ಹೇಳುವುದು ಸರಿ ಎನಿಸಿದರೆ ನನಗೆ ಸಹಕಾರ ನೀಡಿ ಎಂದು ಜನರನ್ನು ಒತ್ತಾಯಿಸಿದ್ದಾರೆ.</p>.<p>‘ನನ್ನ ವಯಸ್ಸಿನ ಬಗ್ಗೆ ಕೆಲವರು ಅಣಕ ಮಾಡುತ್ತಿದ್ದಾರೆ. ನಾನು ಮತ್ತು ಪ್ರಧಾನಿ ಮೋದಿ ಒಂದೇ ವಯಸ್ಸಿನವರು. ಬೈಡನ್ 79ನೇ ವಯಸ್ಸಿನಲ್ಲಿ ಅಮೆರಿಕದ ಅಧ್ಯಕ್ಷರಾಗಿದ್ದಾರೆ’ ಎಂದು 72 ವರ್ಷದ ಟಿಡಿಪಿ ನಾಯಕ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರ್ನೂಲ್</strong>: 2024ಕ್ಕೆ ಜನರು ತೆಲುಗು ದೇಶಂ ಪಕ್ಷವನ್ನು ಅಧಿಕಾರಕ್ಕೆ ತರದೇ ಇದ್ದರೆ ಅದೇ ನನ್ನ ಅಂತಿಮ ಚುನಾವಣೆ ಆಗಲಿದೆ ಎಂದು ಟಿಡಿಪಿ ಅಧ್ಯಕ್ಷ ಎನ್, ಚಂದ್ರಬಾಬು ನಾಯ್ಡು ಹೇಳಿದ್ದಾರೆ.</p>.<p>ಬುಧವಾರ ರಾತ್ರಿ, ಕರ್ನೂಲ್ ಜಿಲ್ಲೆಯ ರೋಡ್ ಶೋನಲ್ಲಿ ಭಾವನಾತ್ಮಕ ಭಾಷಣ ಮಾಡಿದ ಅವರು, ಟಿಡಿಪಿ ಅಧಿಕಾರಕ್ಕೆ ಬರುವವರೆಗೂ ವಿಧಾನಸಭೆಗೆ ಕಾಲಿಡುವುದಿಲ್ಲ ಎಂಬ ತಮ್ಮ ಮಾತನ್ನು ಪುನರುಚ್ಛರಿಸಿದರು.</p>.<p>‘ನಾನು ಮತ್ತೆ ವಿಧಾನಸಭೆಗೆ ಹೋಗಬೇಕು ಎಂದಿದ್ದರೆ, ರಾಜಕೀಯದಲ್ಲಿ ಮುಂದುವರಿಯಬೇಕು ಎಂದಿದ್ದರೆ, ಆಂಧ್ರಪ್ರದೇಶಕ್ಕೆ ನ್ಯಾಯ ಒದಗಿಸಬೇಕಿದ್ದರೆ ಮುಂದಿನ ಚುನಾವಣೆಯಲ್ಲಿ ಟಿಡಿಪಿಯನ್ನು ಗೆಲ್ಲಿಸಬೇಕು. ಇಲ್ಲವಾದರೆ ಅದು ನನ್ನ ಕೊನೆಯ ಚುನಾವಣೆಯಾಗಲಿದೆ’ಎಂದಿದ್ದಾರೆ.</p>.<p>ನೀವು ನನ್ನನ್ನು ನಂಬುತ್ತೀರಾ? ನನ್ನನ್ನು ಆಶೀರ್ವದಿಸುತ್ತೀರಾ? ಎಂದು ಜನಸ್ತೋಮಕ್ಕೆ ಪ್ರಶ್ನಿಸಿದ್ದಾರೆ.</p>.<p>ನವೆಂಬರ್ 19, 2021ರಂದು ಸದನದಲ್ಲಿ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷವು ತಮ್ಮ ಪತ್ನಿಯನ್ನು ಅವಮಾನಿಸಿದೆ ಎಂದು ಆರೋಪಿಸಿದ ವಿರೋಧ ಪಕ್ಷದ ನಾಯಕ ಚಂದ್ರಬಾಬು ನಾಯ್ಡು, ಅಧಿಕಾರಕ್ಕೆ ಮರಳಿದ ಬಳಿಕವಷ್ಟೇ ವಿಧಾನಸಭೆಗೆ ಹೆಜ್ಜೆ ಇಡುವುದಾಗಿ ಘೋಷಿಸಿದ್ದರು.</p>.<p>‘ನನ್ನ ಹೋರಾಟ ಮಕ್ಕಳ ಭವಿಷ್ಯಕ್ಕಾಗಿ, ರಾಜ್ಯದ ಭವಿಷ್ಯಕ್ಕಾಗಿ, ಈ ಹಿಂದೆಯೂ ನಾನು ಅಭಿವೃದ್ಧಿ ಮಾಡಿದ್ದೇನೆ. ಅದನ್ನು ಸಾಬೀತುಪಡಿಸುವ ಮಾದರಿ ಇದೆ’ಎಂದಿದ್ದಾರೆ.</p>.<p>ಈ ಬಗ್ಗೆ ಯೋಚಿಸಿ, ನಾನು ಹೇಳುವುದು ಸರಿ ಎನಿಸಿದರೆ ನನಗೆ ಸಹಕಾರ ನೀಡಿ ಎಂದು ಜನರನ್ನು ಒತ್ತಾಯಿಸಿದ್ದಾರೆ.</p>.<p>‘ನನ್ನ ವಯಸ್ಸಿನ ಬಗ್ಗೆ ಕೆಲವರು ಅಣಕ ಮಾಡುತ್ತಿದ್ದಾರೆ. ನಾನು ಮತ್ತು ಪ್ರಧಾನಿ ಮೋದಿ ಒಂದೇ ವಯಸ್ಸಿನವರು. ಬೈಡನ್ 79ನೇ ವಯಸ್ಸಿನಲ್ಲಿ ಅಮೆರಿಕದ ಅಧ್ಯಕ್ಷರಾಗಿದ್ದಾರೆ’ ಎಂದು 72 ವರ್ಷದ ಟಿಡಿಪಿ ನಾಯಕ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>