ಕಪ್ಪು ಹಣವನ್ನು ಮರಳಿ ತರಲು, ಹಣದುಬ್ಬರ ನಿಯಂತ್ರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಫಲರಾಗಿದ್ದಾರೆ ಎಂದು ಅವರು ನುಡಿದರು.
‘ಕಳೆದ 10 ವರ್ಷಗಳಲ್ಲಿ ದುರಂತ ಆಡಳಿತಕ್ಕೆ ನಾವು ಸಾಕ್ಷಿಯಾದೆವು. ಮೋದಿಯವರು ಗರಿಷ್ಠ ಆಡಳಿತ, ಕನಿಷ್ಠ ಸರ್ಕಾರ ಎಂದು ಪ್ರತಿಪಾದಿಸಿದರು, ಆದರೆ ಆಡಳಿತವು ಕನಿಷ್ಠವಾಗಿದೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಂಸತ್ತು ನಿರುಪಯೋಗವಾಗುತ್ತಿದೆ’ ಎಂದರು.