<p><strong>ಅಮೃತಸರ</strong>: ದೇಶ ತೊರೆಯಲು ಕೇಂದ್ರ ಸರ್ಕಾರ ನೀಡಿದ್ದ ಗಡುವು ಅಂತ್ಯವಾಗಿದ್ದು, ಸುಮಾರು 21 ಪಾಕಿಸ್ತಾನದ ಪ್ರಜೆಗಳು ಅಟ್ಟಾರಿ– ವಾಘಾ ಗಡಿಯಲ್ಲಿ ಅತಂತ್ರರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಕೇಂದ್ರ ಸರ್ಕಾರ, ಪಾಕಿಸ್ತಾನದ ಪ್ರಜೆಗಳಿಗೆ ನೀಡಿದ್ದ ಎಲ್ಲ ರೀತಿಯ ವೀಸಾಗಳನ್ನು ರದ್ದು ಮಾಡಿತ್ತು. ಏಪ್ರಿಲ್ 30ರ ಒಳಗಾಗಿ ದೇಶ ಬಿಟ್ಟು ಹೋಗುವಂತೆ ಆದೇಶ ನೀಡಿತ್ತು. ಈ ಗಡುವು ಮುಗಿಯುತ್ತಿದ್ದಂತೆಯೇ ಗುರುವಾರ ವಾಘಾ ಗಡಿಯನ್ನು ಮುಚ್ಚಲಾಗಿದೆ.</p>.<p>ಶುಕ್ರವಾರ ಮಧ್ಯಾಹ್ನ 12 ಗಂಟೆವರೆಗೆ 21 ಪಾಕ್ ಪ್ರಜೆಗಳು ಇಂಟಿಗ್ರೇಟೆಡ್ ಚೆಕ್ ಪೋಸ್ಟ್ನ ರಸ್ತೆ ಬದಿಯಲ್ಲಿ ಬೀಡು ಬಿಟ್ಟಿದ್ದರು.</p>.<p>ಸುಮಾರು 50 ಪಾಕ್ ಪ್ರಜೆಗಳು ಇಂಟಿಗ್ರೇಟೆಡ್ ಚೆಕ್ ಪೋಸ್ಟ್ ಹೊರಗೆ ಸರತಿಯಲ್ಲಿ ನಿಂತಿದ್ದರು. ಕಸ್ಟಮ್ಸ್ ಮತ್ತು ವಲಸೆ ಅಧಿಕಾರಿಗಳಿಂದ ಅನುಮತಿ ಪಡೆದ ನಂತರ ಅವರು ಪಾಕ್ ಒಳಗೆ ಪ್ರವೇಶಕ್ಕೆ ಅನುಮತಿ ನೀಡಬಹುದು.</p>.<p>ಈ ಮಧ್ಯೆ, ಭಾರತದಲ್ಲಿ ಅತಂತ್ರರಾಗಿರುವ ಪ್ರಜೆಗಳು ವಾಘಾ ಗಡಿ ಮೂಲಕ ದೇಶಕ್ಕೆ ಬರಲು ಅನುವು ಮಾಡಿಕೊಡುವುದಾಗಿ ಪಾಕಿಸ್ತಾನ ಶುಕ್ರವಾರ ಘೋಷಿಸಿದೆ.</p>.<p>‘ಪಾಕಿಸ್ತಾನದ ಪ್ರಜೆಗಳು ಅಟ್ಟಾರಿ ಗಡಿಯಲ್ಲಿ ಅತಂತ್ರರಾಗಿರುವ ಬಗ್ಗೆ ಮಾಧ್ಯಮ ವರದಿಗಳಿಂದ ತಿಳಿದಿದೆ. ಭಾರತೀಯ ಅಧಿಕಾರಿಗಳು ಗಡಿ ದಾಟಲು ಅವಕಾಶ ನೀಡಿದರೆ, ನಮ್ಮ ಪ್ರಜೆಗಳನ್ನು ಬರಮಾಡಿಕೊಳ್ಳಲು ನಾವು ಸಿದ್ಧರಿದ್ದೇವೆ’ ಎಂದು ಪಾಕಿಸ್ತಾನ ವಿದೇಶಾಂಗ ಇಲಾಖೆಯ ವಕ್ತಾರರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮೃತಸರ</strong>: ದೇಶ ತೊರೆಯಲು ಕೇಂದ್ರ ಸರ್ಕಾರ ನೀಡಿದ್ದ ಗಡುವು ಅಂತ್ಯವಾಗಿದ್ದು, ಸುಮಾರು 21 ಪಾಕಿಸ್ತಾನದ ಪ್ರಜೆಗಳು ಅಟ್ಟಾರಿ– ವಾಘಾ ಗಡಿಯಲ್ಲಿ ಅತಂತ್ರರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಕೇಂದ್ರ ಸರ್ಕಾರ, ಪಾಕಿಸ್ತಾನದ ಪ್ರಜೆಗಳಿಗೆ ನೀಡಿದ್ದ ಎಲ್ಲ ರೀತಿಯ ವೀಸಾಗಳನ್ನು ರದ್ದು ಮಾಡಿತ್ತು. ಏಪ್ರಿಲ್ 30ರ ಒಳಗಾಗಿ ದೇಶ ಬಿಟ್ಟು ಹೋಗುವಂತೆ ಆದೇಶ ನೀಡಿತ್ತು. ಈ ಗಡುವು ಮುಗಿಯುತ್ತಿದ್ದಂತೆಯೇ ಗುರುವಾರ ವಾಘಾ ಗಡಿಯನ್ನು ಮುಚ್ಚಲಾಗಿದೆ.</p>.<p>ಶುಕ್ರವಾರ ಮಧ್ಯಾಹ್ನ 12 ಗಂಟೆವರೆಗೆ 21 ಪಾಕ್ ಪ್ರಜೆಗಳು ಇಂಟಿಗ್ರೇಟೆಡ್ ಚೆಕ್ ಪೋಸ್ಟ್ನ ರಸ್ತೆ ಬದಿಯಲ್ಲಿ ಬೀಡು ಬಿಟ್ಟಿದ್ದರು.</p>.<p>ಸುಮಾರು 50 ಪಾಕ್ ಪ್ರಜೆಗಳು ಇಂಟಿಗ್ರೇಟೆಡ್ ಚೆಕ್ ಪೋಸ್ಟ್ ಹೊರಗೆ ಸರತಿಯಲ್ಲಿ ನಿಂತಿದ್ದರು. ಕಸ್ಟಮ್ಸ್ ಮತ್ತು ವಲಸೆ ಅಧಿಕಾರಿಗಳಿಂದ ಅನುಮತಿ ಪಡೆದ ನಂತರ ಅವರು ಪಾಕ್ ಒಳಗೆ ಪ್ರವೇಶಕ್ಕೆ ಅನುಮತಿ ನೀಡಬಹುದು.</p>.<p>ಈ ಮಧ್ಯೆ, ಭಾರತದಲ್ಲಿ ಅತಂತ್ರರಾಗಿರುವ ಪ್ರಜೆಗಳು ವಾಘಾ ಗಡಿ ಮೂಲಕ ದೇಶಕ್ಕೆ ಬರಲು ಅನುವು ಮಾಡಿಕೊಡುವುದಾಗಿ ಪಾಕಿಸ್ತಾನ ಶುಕ್ರವಾರ ಘೋಷಿಸಿದೆ.</p>.<p>‘ಪಾಕಿಸ್ತಾನದ ಪ್ರಜೆಗಳು ಅಟ್ಟಾರಿ ಗಡಿಯಲ್ಲಿ ಅತಂತ್ರರಾಗಿರುವ ಬಗ್ಗೆ ಮಾಧ್ಯಮ ವರದಿಗಳಿಂದ ತಿಳಿದಿದೆ. ಭಾರತೀಯ ಅಧಿಕಾರಿಗಳು ಗಡಿ ದಾಟಲು ಅವಕಾಶ ನೀಡಿದರೆ, ನಮ್ಮ ಪ್ರಜೆಗಳನ್ನು ಬರಮಾಡಿಕೊಳ್ಳಲು ನಾವು ಸಿದ್ಧರಿದ್ದೇವೆ’ ಎಂದು ಪಾಕಿಸ್ತಾನ ವಿದೇಶಾಂಗ ಇಲಾಖೆಯ ವಕ್ತಾರರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>