<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ನ 21 ಶಾಸಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ನಾಯಕ, ನಟ ಮಿಥುನ್ ಚಕ್ರವರ್ತಿ ಶನಿವಾರ ಪುನರುಚ್ಚರಿಸಿದ್ದಾರೆ.</p>.<p>ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಾಲಿವುಡ್ ತಾರೆ, ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿಯ 38 ಶಾಸಕರು ವಿರೋಧ ಪಕ್ಷದ ಸಂಪರ್ಕದಲ್ಲಿದ್ದಾರೆ. ಈ ಪೈಕಿ 21 ಶಾಸಕರು ನೇರವಾಗಿ ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.</p>.<p>ಜುಲೈನಲ್ಲಿ ನಾನು ಹೇಳಿದ ಮಾತಿಗೆ ಬದ್ಧವಾಗಿದ್ದೇನೆ. ಸ್ವಲ್ಪ ಕಾಯಿರಿ, ನಿಮಗೆ ಎಲ್ಲವೂ ತಿಳಿಯುತ್ತದೆ ಎಂದು ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/punjab-governor-acting-at-behest-of-bjp-said-aap-974820.html" itemprop="url">ಬಿಜೆಪಿ ಅಣತಿ ಪಾಲಿಸುತ್ತಿರುವ ಪಂಜಾಬ್ ರಾಜ್ಯಪಾಲ: ಎಎಪಿ ಆರೋಪ </a></p>.<p>ಟಿಎಂಸಿ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರ್ಪಡೆಗೊಳಿಸುವುದಕ್ಕೆ ಸಂಬಂಧಿಸಿದಂತೆ ಪಕ್ಷದೊಳಗಿನ ವಿರೋಧದ ಬಗ್ಗೆ ಅರಿವಿದೆ. ನಾನು ಮೂರ್ಖನಲ್ಲ. ಮತ್ತದೇ ತಪ್ಪು ಪುನರಾವರ್ತನೆಯಾಗುವುದಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ನ 21 ಶಾಸಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ನಾಯಕ, ನಟ ಮಿಥುನ್ ಚಕ್ರವರ್ತಿ ಶನಿವಾರ ಪುನರುಚ್ಚರಿಸಿದ್ದಾರೆ.</p>.<p>ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಾಲಿವುಡ್ ತಾರೆ, ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿಯ 38 ಶಾಸಕರು ವಿರೋಧ ಪಕ್ಷದ ಸಂಪರ್ಕದಲ್ಲಿದ್ದಾರೆ. ಈ ಪೈಕಿ 21 ಶಾಸಕರು ನೇರವಾಗಿ ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.</p>.<p>ಜುಲೈನಲ್ಲಿ ನಾನು ಹೇಳಿದ ಮಾತಿಗೆ ಬದ್ಧವಾಗಿದ್ದೇನೆ. ಸ್ವಲ್ಪ ಕಾಯಿರಿ, ನಿಮಗೆ ಎಲ್ಲವೂ ತಿಳಿಯುತ್ತದೆ ಎಂದು ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/punjab-governor-acting-at-behest-of-bjp-said-aap-974820.html" itemprop="url">ಬಿಜೆಪಿ ಅಣತಿ ಪಾಲಿಸುತ್ತಿರುವ ಪಂಜಾಬ್ ರಾಜ್ಯಪಾಲ: ಎಎಪಿ ಆರೋಪ </a></p>.<p>ಟಿಎಂಸಿ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರ್ಪಡೆಗೊಳಿಸುವುದಕ್ಕೆ ಸಂಬಂಧಿಸಿದಂತೆ ಪಕ್ಷದೊಳಗಿನ ವಿರೋಧದ ಬಗ್ಗೆ ಅರಿವಿದೆ. ನಾನು ಮೂರ್ಖನಲ್ಲ. ಮತ್ತದೇ ತಪ್ಪು ಪುನರಾವರ್ತನೆಯಾಗುವುದಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>