<p><strong>ನವದೆಹಲಿ</strong>: ‘ತಮಿಳುನಾಡಿನ 22 ಮೀನುಗಾರರನ್ನು ಬಂಧಿಸಿರುವ ಶ್ರೀಲಂಕಾ, ಆ ಮೀನುಗಾರರ ಮೂರು ಹಡಗುಗಳನ್ನು ಸಹ ಜಪ್ತಿ ಮಾಡಿದೆ’ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸೋಮವಾರ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. </p>.<p>ಮೀನುಗಾರರ ರಕ್ಷಣೆ ಮತ್ತು ಅವರ ಹಡಗುಗಳ ಬಿಡುಗಡೆಗೆ ಕೇಂದ್ರ ಸರ್ಕಾರವು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. </p>.<p>ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ‘ಜೂನ್ 22ರಂದು ರಾಮೇಶ್ವರಂ ಬಂದರು ಪ್ರದೇಶದಲ್ಲಿ 22 ಮೀನುಗಾರರ ಬಂಧನವಾಗಿದೆ. ಇದರಿಂದ ಆ ಕುಟುಂಬಗಳ ಜೀವನೋಪಾಯಕ್ಕೆ ತೊಡಕಾಗಿದೆ. ಅವರ ಬಿಡುಗಡೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಜೊತೆಗೆ ಶ್ರೀಲಂಕಾದ ಜೈಲಿನಲ್ಲಿರುವ ಮೀನುಗಾರರ ಭೇಟಿಗೆ ವಿವಿಧ ಮೀನುಗಾರರ ಸಂಘಟನೆಗಳು ತೆರಳಲು ಮುಂದಾಗಿದ್ದು, ಅದಕ್ಕೆ ಅವಕಾಶ ಕಲ್ಪಿಸಿಕೊಡಬೇಕು’ ಎಂದು ಮನವಿ ಮಾಡಿದ್ದಾರೆ. </p>.<p>ಇಂಥ ಸಮಸ್ಯೆಗಳ ಪರಿಹಾರಕ್ಕೆ ಸ್ಥಾಪಿಸಲಾಗಿರುವ ಜಂಟಿ ಕಾರ್ಯಶೀಲ ಗ್ರೂಪ್ ಅನ್ನು ಪುನಶ್ಚೇತನಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ತಮಿಳುನಾಡಿನ 22 ಮೀನುಗಾರರನ್ನು ಬಂಧಿಸಿರುವ ಶ್ರೀಲಂಕಾ, ಆ ಮೀನುಗಾರರ ಮೂರು ಹಡಗುಗಳನ್ನು ಸಹ ಜಪ್ತಿ ಮಾಡಿದೆ’ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸೋಮವಾರ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. </p>.<p>ಮೀನುಗಾರರ ರಕ್ಷಣೆ ಮತ್ತು ಅವರ ಹಡಗುಗಳ ಬಿಡುಗಡೆಗೆ ಕೇಂದ್ರ ಸರ್ಕಾರವು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. </p>.<p>ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ‘ಜೂನ್ 22ರಂದು ರಾಮೇಶ್ವರಂ ಬಂದರು ಪ್ರದೇಶದಲ್ಲಿ 22 ಮೀನುಗಾರರ ಬಂಧನವಾಗಿದೆ. ಇದರಿಂದ ಆ ಕುಟುಂಬಗಳ ಜೀವನೋಪಾಯಕ್ಕೆ ತೊಡಕಾಗಿದೆ. ಅವರ ಬಿಡುಗಡೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಜೊತೆಗೆ ಶ್ರೀಲಂಕಾದ ಜೈಲಿನಲ್ಲಿರುವ ಮೀನುಗಾರರ ಭೇಟಿಗೆ ವಿವಿಧ ಮೀನುಗಾರರ ಸಂಘಟನೆಗಳು ತೆರಳಲು ಮುಂದಾಗಿದ್ದು, ಅದಕ್ಕೆ ಅವಕಾಶ ಕಲ್ಪಿಸಿಕೊಡಬೇಕು’ ಎಂದು ಮನವಿ ಮಾಡಿದ್ದಾರೆ. </p>.<p>ಇಂಥ ಸಮಸ್ಯೆಗಳ ಪರಿಹಾರಕ್ಕೆ ಸ್ಥಾಪಿಸಲಾಗಿರುವ ಜಂಟಿ ಕಾರ್ಯಶೀಲ ಗ್ರೂಪ್ ಅನ್ನು ಪುನಶ್ಚೇತನಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>