<p><strong>ಗಾಜಿಯಾಬಾದ್:</strong> ರಾಷ್ಟ್ರ ರಾಜಧಾನಿಯ ಪಕ್ಕದಲ್ಲಿರುವ ಗಾಜಿಯಾಬಾದ್ ಜಿಲ್ಲೆಯ ಮುರಾದ್ನಗರದಲ್ಲಿ ಅಂತ್ಯಸಂಸ್ಕಾರಕ್ಕೆಂದು ಶವಾಗಾರಕ್ಕೆ ತೆರಳಿದ್ದವರ ಮೇಲೆ ಭಾನುವಾರ ಚಾವಣಿ ಕುಸಿದ ಪರಿಣಾಮ 24 ಮಂದಿ ಮೃತಪಟ್ಟಿದ್ದು, 17 ಜನರಿಗೆ ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಳೆ ಬರುತ್ತಿದ್ದ ಕಾರಣದಿಂದಾಗಿ ಇತ್ತೀಚೆಗೆ ನಿರ್ಮಿಸಿದ್ದ ಶವಾಗಾರದಲ್ಲಿದ್ದ ಚಾವಣಿಯೊಂದರ ಅಡಿಯಲ್ಲಿ ಆಶ್ರಯ ಪಡೆದಿದ್ದರು. ಇದೇವೇಳೆ ಚಾವಣಿ ಕುಸಿದೆದೆ. ಮೃತರಲ್ಲಿ ಬಹುತೇಕರು ಜೈರಾಮ್ ಎನ್ನುವವರ ಶವಸಂಸ್ಕಾರಕ್ಕೆ ಬಂದಿದ್ದ ಸಂಬಂಧಿಕರು ಮತ್ತು ನೆರೆಹೊರೆಯವರಾಗಿದ್ದರು.</p>.<p>ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಲಾಗಿದೆ.<br />ಘಟನೆ ಬಳಿಕ ಉಖ್ಲರ್ಸಿ ಗ್ರಾಮದಲ್ಲಿರುವ ಶವಾಗಾರಕ್ಕೆ ಸ್ಥಳೀಯ ಜನರು ಮೊದಲು ಬಂದಿದ್ದಾರೆ. ಬಳಿಕ ಮಾಹಿತಿ ತಿಳಿದ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಘಟಕವೂ ಸ್ಥಳಕ್ಕಾಗಮಿಸಿ, ಸತ್ತವರನ್ನು ಮತ್ತು ಗಾಯಾಳುಗಳನ್ನು ಅವಶೇಷಗಳಿಂದ ಹೊರಗೆಳೆದಿದೆ.</p>.<p>ಘಟನೆಯಲ್ಲಿ 24 ಜನರು ಮೃತಪಟ್ಟಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ. ಸಂಜೆಯ ವೇಳೆಗೆ ಅವರಲ್ಲಿ ಕನಿಷ್ಠ 18 ಮಂದಿಯನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಜಯ್ ಶಂಕರ್ ಪಾಂಡೆ ಹೇಳಿದ್ದಾರೆ.</p>.<p>ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.</p>.<p>ಗಾಜಿಯಾಬಾದ್ ಸಂಸದರಾಗಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್ ಸೇರಿ ಹಲವಾರು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸ್ಥಳೀಯಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಜಿಯಾಬಾದ್:</strong> ರಾಷ್ಟ್ರ ರಾಜಧಾನಿಯ ಪಕ್ಕದಲ್ಲಿರುವ ಗಾಜಿಯಾಬಾದ್ ಜಿಲ್ಲೆಯ ಮುರಾದ್ನಗರದಲ್ಲಿ ಅಂತ್ಯಸಂಸ್ಕಾರಕ್ಕೆಂದು ಶವಾಗಾರಕ್ಕೆ ತೆರಳಿದ್ದವರ ಮೇಲೆ ಭಾನುವಾರ ಚಾವಣಿ ಕುಸಿದ ಪರಿಣಾಮ 24 ಮಂದಿ ಮೃತಪಟ್ಟಿದ್ದು, 17 ಜನರಿಗೆ ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಳೆ ಬರುತ್ತಿದ್ದ ಕಾರಣದಿಂದಾಗಿ ಇತ್ತೀಚೆಗೆ ನಿರ್ಮಿಸಿದ್ದ ಶವಾಗಾರದಲ್ಲಿದ್ದ ಚಾವಣಿಯೊಂದರ ಅಡಿಯಲ್ಲಿ ಆಶ್ರಯ ಪಡೆದಿದ್ದರು. ಇದೇವೇಳೆ ಚಾವಣಿ ಕುಸಿದೆದೆ. ಮೃತರಲ್ಲಿ ಬಹುತೇಕರು ಜೈರಾಮ್ ಎನ್ನುವವರ ಶವಸಂಸ್ಕಾರಕ್ಕೆ ಬಂದಿದ್ದ ಸಂಬಂಧಿಕರು ಮತ್ತು ನೆರೆಹೊರೆಯವರಾಗಿದ್ದರು.</p>.<p>ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಲಾಗಿದೆ.<br />ಘಟನೆ ಬಳಿಕ ಉಖ್ಲರ್ಸಿ ಗ್ರಾಮದಲ್ಲಿರುವ ಶವಾಗಾರಕ್ಕೆ ಸ್ಥಳೀಯ ಜನರು ಮೊದಲು ಬಂದಿದ್ದಾರೆ. ಬಳಿಕ ಮಾಹಿತಿ ತಿಳಿದ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಘಟಕವೂ ಸ್ಥಳಕ್ಕಾಗಮಿಸಿ, ಸತ್ತವರನ್ನು ಮತ್ತು ಗಾಯಾಳುಗಳನ್ನು ಅವಶೇಷಗಳಿಂದ ಹೊರಗೆಳೆದಿದೆ.</p>.<p>ಘಟನೆಯಲ್ಲಿ 24 ಜನರು ಮೃತಪಟ್ಟಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ. ಸಂಜೆಯ ವೇಳೆಗೆ ಅವರಲ್ಲಿ ಕನಿಷ್ಠ 18 ಮಂದಿಯನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಜಯ್ ಶಂಕರ್ ಪಾಂಡೆ ಹೇಳಿದ್ದಾರೆ.</p>.<p>ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.</p>.<p>ಗಾಜಿಯಾಬಾದ್ ಸಂಸದರಾಗಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್ ಸೇರಿ ಹಲವಾರು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸ್ಥಳೀಯಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>