ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್ ಪಂದ್ಯದ ವೇಳೆ ಗಲಾಟೆ: ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

ಉತ್ತರ ಪ್ರದೇಶದ ನೋಯ್ಡಾ ಬಳಿ ಭಾನುವಾರ ಸಂಜೆ ಈ ಘಟನೆ ನಡೆದಿದೆ
Published 5 ಫೆಬ್ರುವರಿ 2024, 3:18 IST
Last Updated 5 ಫೆಬ್ರುವರಿ 2024, 3:18 IST
ಅಕ್ಷರ ಗಾತ್ರ

ನೋಯ್ಡಾ: ಕ್ರಿಕೆಟ್ ಪಂದ್ಯದ ವೇಳೆ ಉಂಟಾದ ಗಲಾಟೆಯಲ್ಲಿ ಮೂವರು ಯುವಕರು ಸೇರಿಕೊಂಡು ಮತ್ತೊಬ್ಬ ಯುವಕನನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾ ಬಳಿ ಭಾನುವಾರ ಸಂಜೆ ನಡೆದಿದೆ.

ಕೊಲೆಯಾದ ಯುವಕನನ್ನು ಮೀರತ್ ಜಿಲ್ಲೆಯ ಸುಮಿತ್ (24) ಎಂದು ಗುರುತಿಸಲಾಗಿದೆ.

ನೋಯ್ಡಾ ಹೊರವಲಯದ ಚಿಪ್ಪಿಯಾನಾ ಎಂಬಲ್ಲಿ ಕ್ರಿಕೆಟ್ ಟೂರ್ನಾಮೆಂಟ್ ನಡೆಯುತ್ತಿತ್ತು. ಈ ವೇಳೆ ಉಂಟಾದ ಗಲಾಟೆಯಲ್ಲಿ ಮೂವರು ಯುವಕರು ಸೇರಿಕೊಂಡು ಯುವಕ ಸುಮಿತ್‌ನನ್ನು ಥಳಿಸಿದ್ದರು. ಆತ ತಪ್ಪಿಸಿಕೊಂಡು ಹೋಗುವಾಗ ಕಾಲುವೆಯಲ್ಲಿ ಜಾರಿ ಬಿದ್ದಿದ್ದ. ಆದರೂ ಬಿಡದ ಹಂತಕರು ಆತನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ ಎಂದು ಡಿಸಿಪಿ ಹೃದೇಶ್ ಕಥಾರಿಯಾ ತಿಳಿಸಿದ್ದಾರೆ.

ಬಿಸ್‌ರಾಕ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದ್ದು ಪರಾರಿಯಾಗಿರುವ ಹಿಮಾಂಶು ಹಾಗೂ ಆತನ ಸಂಗಡಿಗರ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT