ಸದನದಲ್ಲಿ ಭಿತ್ತಿಪತ್ರಗಳನ್ನು ಪ್ರದರ್ಶಿಸದಂತೆ ಹಾಗೂ ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಸ್ಪೀಕರ್ ಸುಮಿತ್ರಾ ಮಹಾಜನ್ ಕಾಂಗ್ರೆಸ್ ಸದಸ್ಯರಿಗೆ ಮನವಿ ಮಾಡಿದರು. ಆದರೂ ಸದಸ್ಯರು ಗದ್ದಲ ಮುಂದುವರಿಸಿದರು. ಇದೇ ರೀತಿ ಗದ್ದಲ ಮುಂದುವರಿಸಿದರೆ ‘ಸೂಕ್ತ ಕ್ರಮ’ ಕೈಗೊಳ್ಳಬೇಕಾಗುತ್ತದೆ ಎಂದು ಸ್ಪೀಕರ್ ಎಚ್ಚರಿಕೆಯನ್ನೂ ನೀಡಿದರು.