<p><strong>ದಂತೇವಾಡ:</strong> ಛತ್ತೀಸಗಢದ ದಂತೇವಾಡ ಜಿಲ್ಲೆಯಲ್ಲಿ ಕನಿಷ್ಠ 26 ಮಂದಿ ನಕ್ಸಲರು ಭದ್ರತಾ ಪಡೆಗಳ ಎದುರು ಸೋಮವಾರ ಶರಣಾಗಿದ್ದಾರೆ. ಈ ಪೈಕಿ ಮೂವರ ಸುಳಿವು ನೀಡಿದವರಿಗೆ ನಗದು ಬಹುಮಾನವನ್ನು ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಪೊಳ್ಳು’ ಹಾಗೂ ‘ಅಮಾನವೀಯ’ ನಕ್ಸಲ್ ಸಿದ್ಧಾಂತದಿಂದ ಬೇಸತ್ತು ಹಾಗೂ ಸಂಘಟನೆಯಲ್ಲಿ ಭಿನ್ನಾಭಿಪ್ರಾಯ ಉಲ್ಬಣಗೊಂಡಿದ್ದರಿಂದ ಶರಣಾಗತಿ ನಿರ್ಧಾರ ಕೈಗೊಂಡಿದ್ದಾಗಿ ನಕ್ಸಲರು ತಿಳಿಸಿದ್ದಾರೆ’ ಎಂದು ದಂತೇವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರೈ ಹೇಳಿದ್ದಾರೆ.</p>.<p>ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ‘ಜನ ಮಿಲಿಶಿಯಾ’ ಕಮಾಂಡರ್ ರಾಜೇಶ್ ಕಶ್ಯಪ್, ‘ಜನತಾನಾ ಸರ್ಕಾರ್’ ಮುಖ್ಯಸ್ಥ ಕೋಸ ಮದ್ವಿ ಹಾಗೂ ಸಿಎನ್ಎಂ ಸಂಘಟನೆಯ ಛೋಟು ಕುಂಜಾಂ ಶರಣಾದವರಲ್ಲಿ ಪ್ರಮುಖರು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಂತೇವಾಡ:</strong> ಛತ್ತೀಸಗಢದ ದಂತೇವಾಡ ಜಿಲ್ಲೆಯಲ್ಲಿ ಕನಿಷ್ಠ 26 ಮಂದಿ ನಕ್ಸಲರು ಭದ್ರತಾ ಪಡೆಗಳ ಎದುರು ಸೋಮವಾರ ಶರಣಾಗಿದ್ದಾರೆ. ಈ ಪೈಕಿ ಮೂವರ ಸುಳಿವು ನೀಡಿದವರಿಗೆ ನಗದು ಬಹುಮಾನವನ್ನು ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಪೊಳ್ಳು’ ಹಾಗೂ ‘ಅಮಾನವೀಯ’ ನಕ್ಸಲ್ ಸಿದ್ಧಾಂತದಿಂದ ಬೇಸತ್ತು ಹಾಗೂ ಸಂಘಟನೆಯಲ್ಲಿ ಭಿನ್ನಾಭಿಪ್ರಾಯ ಉಲ್ಬಣಗೊಂಡಿದ್ದರಿಂದ ಶರಣಾಗತಿ ನಿರ್ಧಾರ ಕೈಗೊಂಡಿದ್ದಾಗಿ ನಕ್ಸಲರು ತಿಳಿಸಿದ್ದಾರೆ’ ಎಂದು ದಂತೇವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರೈ ಹೇಳಿದ್ದಾರೆ.</p>.<p>ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ‘ಜನ ಮಿಲಿಶಿಯಾ’ ಕಮಾಂಡರ್ ರಾಜೇಶ್ ಕಶ್ಯಪ್, ‘ಜನತಾನಾ ಸರ್ಕಾರ್’ ಮುಖ್ಯಸ್ಥ ಕೋಸ ಮದ್ವಿ ಹಾಗೂ ಸಿಎನ್ಎಂ ಸಂಘಟನೆಯ ಛೋಟು ಕುಂಜಾಂ ಶರಣಾದವರಲ್ಲಿ ಪ್ರಮುಖರು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>