<p><strong>ನವದೆಹಲಿ:</strong> ರಾಜಧಾನಿಯಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸುವುದರೊಂದಿಗೆ ‘ಆಮ್ ಆದ್ಮಿ ಪಕ್ಷ’ವು (ಎಎಪಿ) ಕಳೆದೆರಡು ವಾರದಿಂದ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಅಂತ್ಯ ಹಾಡಲು ಮುಂದಾಗಿದೆ. ಕಾಂಗ್ರೆಸ್ ಬೆಂಬಲದೊಂದಿಗೆ ಎಎಪಿ ಅಧಿಕಾರ ಹಿಡಿಯಲಿದೆ.<br /> <br /> ಎಎಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಅರವಿಂದ ಕೇಜ್ರಿವಾಲ್ ಇದೇ 26ರಂದು ರಾಮಲೀಲಾ ಮೈದಾನದಲ್ಲಿ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲು ಬಯಸಿದ್ದಾರೆ.<br /> <br /> ಎರಡು ವರ್ಷದ ಹಿಂದೆ ಇದೇ ಮೈದಾನದಲ್ಲಿ ‘ಜನ ಲೋಕಪಾಲ ಮಸೂದೆ’ ಜಾರಿಗೆ ಹೋರಾಟ ನಡೆದಿತ್ತು. ಮಾಜಿ ಐಆರ್ಎಸ್ ಅಧಿಕಾರಿಯಾದ ಕೇಜ್ರಿವಾಲ್ ಸೋಮವಾರ ದೆಹಲಿ ಲೆ. ಗವರ್ನರ್ ನಜೀಬ್ ಜಂಗ್ ಅವರನ್ನು ಭೇಟಿಯಾಗಿ ಸರ್ಕಾರ ರಚಿಸುವ ಹಕ್ಕು ಮಂಡಿಸಿದರು.<br /> <br /> ‘ಸರ್ಕಾರ ರಚಿಸುವ ಪ್ರಸ್ತಾವವನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ತೀರ್ಮಾನಕ್ಕಾಗಿ ಕಳುಹಿಸಲಾಗುವುದು. ಅವರಿಂದ ಉತ್ತರ ಬಂದ ಬಳಿಕ ಪ್ರಮಾಣ ವಚನ ದಿನಾಂಕ, ಸಮಯ ನಿಗದಿಪಡಿಸಲಾ-ಗುವುದು’ ಎಂದು ಲೆಫ್ಟಿನೆಂಟ್ ಗವರ್ನರ್ ಅವರು ತಿಳಿಸಿದ್ದಾರೆ. ‘ಸರ್ಕಾರ ರಚಿಸಿದ ಬಳಿಕ ವಿಧಾನಸಭೆಯಲ್ಲಿ ವಿಶ್ವಾಸಮತ ಕೇಳುವ ನಿರ್ಣಯ ಮಂಡಿಸುತ್ತೇವೆ’ ಎಂದು ಕೇಜ್ರಿವಾಲ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಜಧಾನಿಯಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸುವುದರೊಂದಿಗೆ ‘ಆಮ್ ಆದ್ಮಿ ಪಕ್ಷ’ವು (ಎಎಪಿ) ಕಳೆದೆರಡು ವಾರದಿಂದ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಅಂತ್ಯ ಹಾಡಲು ಮುಂದಾಗಿದೆ. ಕಾಂಗ್ರೆಸ್ ಬೆಂಬಲದೊಂದಿಗೆ ಎಎಪಿ ಅಧಿಕಾರ ಹಿಡಿಯಲಿದೆ.<br /> <br /> ಎಎಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಅರವಿಂದ ಕೇಜ್ರಿವಾಲ್ ಇದೇ 26ರಂದು ರಾಮಲೀಲಾ ಮೈದಾನದಲ್ಲಿ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲು ಬಯಸಿದ್ದಾರೆ.<br /> <br /> ಎರಡು ವರ್ಷದ ಹಿಂದೆ ಇದೇ ಮೈದಾನದಲ್ಲಿ ‘ಜನ ಲೋಕಪಾಲ ಮಸೂದೆ’ ಜಾರಿಗೆ ಹೋರಾಟ ನಡೆದಿತ್ತು. ಮಾಜಿ ಐಆರ್ಎಸ್ ಅಧಿಕಾರಿಯಾದ ಕೇಜ್ರಿವಾಲ್ ಸೋಮವಾರ ದೆಹಲಿ ಲೆ. ಗವರ್ನರ್ ನಜೀಬ್ ಜಂಗ್ ಅವರನ್ನು ಭೇಟಿಯಾಗಿ ಸರ್ಕಾರ ರಚಿಸುವ ಹಕ್ಕು ಮಂಡಿಸಿದರು.<br /> <br /> ‘ಸರ್ಕಾರ ರಚಿಸುವ ಪ್ರಸ್ತಾವವನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ತೀರ್ಮಾನಕ್ಕಾಗಿ ಕಳುಹಿಸಲಾಗುವುದು. ಅವರಿಂದ ಉತ್ತರ ಬಂದ ಬಳಿಕ ಪ್ರಮಾಣ ವಚನ ದಿನಾಂಕ, ಸಮಯ ನಿಗದಿಪಡಿಸಲಾ-ಗುವುದು’ ಎಂದು ಲೆಫ್ಟಿನೆಂಟ್ ಗವರ್ನರ್ ಅವರು ತಿಳಿಸಿದ್ದಾರೆ. ‘ಸರ್ಕಾರ ರಚಿಸಿದ ಬಳಿಕ ವಿಧಾನಸಭೆಯಲ್ಲಿ ವಿಶ್ವಾಸಮತ ಕೇಳುವ ನಿರ್ಣಯ ಮಂಡಿಸುತ್ತೇವೆ’ ಎಂದು ಕೇಜ್ರಿವಾಲ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>