<p><strong>ಮುಂಬೈ</strong>: ಮಹಾರಾಷ್ಟ್ರದ ಐಎಎಸ್ ದಂಪತಿಯ ಪುತ್ರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ.</p><p>ಮಹಾರಾಷ್ಟ್ರ ಕೇಡರ್ ಹಿರಿಯ ಐಎಎಸ್ ಅಧಿಕಾರಿಗಳಾದ ವಿಕಾಸ್ ರಸ್ತೋಗಿ ಹಾಗೂ ರಾಧಿಕಾ ರಸ್ತೋಗಿ ಅವರ 27 ವರ್ಷದ ಪುತ್ರಿ ಲಿಪಿ ಆತ್ಮಹತ್ಯೆ ಮಾಡಿಕೊಂಡವರು.</p><p>ಬೆಳಗಿನ ಜಾವ ದಕ್ಷಿಣ ಮುಂಬೈನ ಸೆಕ್ರೇಟಿರಿಯೇಟ್ ಬಳಿ ಇರುವ ರಸ್ತೋಗಿ ದಂಪತಿ ವಾಸಿಸುತ್ತಿದ್ದ ವಸತಿ ಸಮುಚ್ಚಯದ 10ನೇ ಮಹಡಿಯಿಂದ ಜಿಗಿದು ಲಿಪಿ ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ಜಿ.ಟಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಹರಿಯಾಣದ ಸೋನಿಪತ್ನಲ್ಲಿ ಎಲ್ಎಲ್ಬಿ ಓದುತ್ತಿದ್ದ ಲಿಪಿ ಅವರು ಇತ್ತೀಚೆಗೆ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದ್ದು, ಅವರು ಸಾಯುವ ಮುನ್ನ ಮರಣ ಪತ್ರ ಬರೆದಿಟ್ಟಿದ್ದರು. ಅದರಲ್ಲಿ ‘ನನ್ನ ಸಾವಿಗೆ ನಾನೇ ಹೊಣೆ, ಯಾರು ಕಾರಣರಲ್ಲ’ ಎಂದು ಬರೆದುಕೊಂಡಿದ್ದಾರೆ. ಈ ಕುರಿತು ಪರೇಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ವಿಕಾಸ್ ರಸ್ತೋಗಿ ಅವರು ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದರೆ, ರಾಧಿಕಾ ರಸ್ತೋಗಿ ಅವರು ಗೃಹ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.</p><p>2017ರಲ್ಲೂ ಇಂತಹದೇ ಒಂದು ಘಟನೆ ಮುಂಬೈನಲ್ಲಿ ನಡೆದಿತ್ತು. ಐಎಎಸ್ ದಂಪತಿಯಾದ ಮಿಲಿಂದ್ ಮಹಿಶ್ಕರ್ ಹಾಗೂ ಮನಿಶಾ ದಂಪತಿಯ 18 ವರ್ಷದ ಪುತ್ರ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.</p>.ಚಂದ್ರಶೇಖರನ್ ಆತ್ಮಹತ್ಯೆ | ಶಿವಮೊಗ್ಗದಲ್ಲಿ ಸಿಐಡಿ ತಂಡ ಮೊಕ್ಕಾಂ: ತನಿಖೆ ಚುರುಕು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದ ಐಎಎಸ್ ದಂಪತಿಯ ಪುತ್ರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ.</p><p>ಮಹಾರಾಷ್ಟ್ರ ಕೇಡರ್ ಹಿರಿಯ ಐಎಎಸ್ ಅಧಿಕಾರಿಗಳಾದ ವಿಕಾಸ್ ರಸ್ತೋಗಿ ಹಾಗೂ ರಾಧಿಕಾ ರಸ್ತೋಗಿ ಅವರ 27 ವರ್ಷದ ಪುತ್ರಿ ಲಿಪಿ ಆತ್ಮಹತ್ಯೆ ಮಾಡಿಕೊಂಡವರು.</p><p>ಬೆಳಗಿನ ಜಾವ ದಕ್ಷಿಣ ಮುಂಬೈನ ಸೆಕ್ರೇಟಿರಿಯೇಟ್ ಬಳಿ ಇರುವ ರಸ್ತೋಗಿ ದಂಪತಿ ವಾಸಿಸುತ್ತಿದ್ದ ವಸತಿ ಸಮುಚ್ಚಯದ 10ನೇ ಮಹಡಿಯಿಂದ ಜಿಗಿದು ಲಿಪಿ ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ಜಿ.ಟಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಹರಿಯಾಣದ ಸೋನಿಪತ್ನಲ್ಲಿ ಎಲ್ಎಲ್ಬಿ ಓದುತ್ತಿದ್ದ ಲಿಪಿ ಅವರು ಇತ್ತೀಚೆಗೆ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದ್ದು, ಅವರು ಸಾಯುವ ಮುನ್ನ ಮರಣ ಪತ್ರ ಬರೆದಿಟ್ಟಿದ್ದರು. ಅದರಲ್ಲಿ ‘ನನ್ನ ಸಾವಿಗೆ ನಾನೇ ಹೊಣೆ, ಯಾರು ಕಾರಣರಲ್ಲ’ ಎಂದು ಬರೆದುಕೊಂಡಿದ್ದಾರೆ. ಈ ಕುರಿತು ಪರೇಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ವಿಕಾಸ್ ರಸ್ತೋಗಿ ಅವರು ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದರೆ, ರಾಧಿಕಾ ರಸ್ತೋಗಿ ಅವರು ಗೃಹ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.</p><p>2017ರಲ್ಲೂ ಇಂತಹದೇ ಒಂದು ಘಟನೆ ಮುಂಬೈನಲ್ಲಿ ನಡೆದಿತ್ತು. ಐಎಎಸ್ ದಂಪತಿಯಾದ ಮಿಲಿಂದ್ ಮಹಿಶ್ಕರ್ ಹಾಗೂ ಮನಿಶಾ ದಂಪತಿಯ 18 ವರ್ಷದ ಪುತ್ರ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.</p>.ಚಂದ್ರಶೇಖರನ್ ಆತ್ಮಹತ್ಯೆ | ಶಿವಮೊಗ್ಗದಲ್ಲಿ ಸಿಐಡಿ ತಂಡ ಮೊಕ್ಕಾಂ: ತನಿಖೆ ಚುರುಕು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>