ನೂತನ ಸಚಿವರ ಅಪರಾಧ ಹಿನ್ನೆಲೆ, ಹಣಕಾಸು, ಶಿಕ್ಷಣ, ಲಿಂಗ ಹಾಗೂ ಇತರ ವಿಷಯಗಳ ಬಗ್ಗೆ ವಿಶ್ಲೇಷಣೆ ನಡೆಸಿ ಎಡಿಆರ್ ಮಂಗಳವಾರ ವರದಿ ಪ್ರಕಟಿಸಿದೆ. ಬಂದರು, ಒಳನಾಡು ಹಾಗೂ ಜಲಸಾರಿಗೆ ರಾಜ್ಯ ಸಚಿವ ಶಂತನು ಠಾಕೂರ್, ಶಿಕ್ಷಣ ಹಾಗೂ ಈಶಾನ್ಯ ಪ್ರದೇಶ ಅಭಿವೃದ್ಧಿ ರಾಜ್ಯ ಸಚಿವ ಸುಕಂತ ಮಜುಂದಾರ್ ವಿರುದ್ಧ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳಿವೆ.