<p><strong>ಗ್ಯಾಂಗ್ಟಕ್:</strong> ಭಾರಿ ಮಳೆಯಿಂದ ಉಂಟಾದ ಹಲವು ಭೂಕುಸಿತಗಳಿಂದಾಗಿ, ರಸ್ತೆ ಸಂಪರ್ಕ ಕಡಿತಗೊಂಡಿರುವ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿದ್ದ 28 ಜನರು ಮತ್ತು 20 ಸೈನಿಕರನ್ನು ಭಾನುವಾರ ಸ್ಥಳಾಂತರಿಸಲಾಗಿದೆ.</p>.<p>ಸ್ಥಳೀಯರು ಸೇರಿದಂತೆ ಟ್ಯಾಕ್ಸಿ ಚಾಲಕರು ಮತ್ತು ಚಾಟೆನ್ನಲ್ಲಿ ನೆಲಸಿದ್ದ ಸರ್ಕಾರಿ ಅಧಿಕಾರಿಗಳನ್ನು ಸ್ಥಳಾಂತರಿಸಲು ಹೆಲಿಕಾಪ್ಟರ್ ನಿಯೋಜಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಮೂವರು ಅಪ್ರಾಪ್ತರು ಸೇರಿದಂತೆ 28 ಜನರನ್ನು ಯಶಸ್ವಿಯಾಗಿ ಸ್ಥಳಾಂತರಿಸಲಾಗಿದೆ. ಇವರೆಲ್ಲರೂ ಸುರಕ್ಷಿತವಾಗಿದ್ದಾರೆ. ಹೆಲಿಕಾಪ್ಟರ್ ಬಳಸಿ ಎರಡು ಸುತ್ತಿನ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಮೊದಲ ಸುತ್ತಿನಲ್ಲಿ ನಾಗರಿಕರು ಮತ್ತು ಎರಡನೇ ಸುತ್ತಿನಲ್ಲಿ ಸೈನಿಕರನ್ನು ಸ್ಥಳಾಂತರ ಮಾಡಲಾಯಿತು ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ನೈಸರ್ಗಿಕ ವಿಕೋಪದಲ್ಲಿ ಸಿಲುಕಿರುವ ಎಲ್ಲರನ್ನೂ ರಕ್ಷಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.ಸಿಕ್ಕಿಂ ಭೂಕುಸಿತ | ಸುಧಾರಿಸಿದ ಹವಾಮಾನ; 59 ಪ್ರವಾಸಿಗರ ಏರ್ಲಿಫ್ಟ್.ಸೇನಾ ಶಿಬಿರದ ಮೇಲೆ ಭೂಕುಸಿತ: 3 ಸೇನಾ ಸಿಬ್ಬಂದಿ ಮೃತ, 6 ಸೈನಿಕರು ನಾಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗ್ಯಾಂಗ್ಟಕ್:</strong> ಭಾರಿ ಮಳೆಯಿಂದ ಉಂಟಾದ ಹಲವು ಭೂಕುಸಿತಗಳಿಂದಾಗಿ, ರಸ್ತೆ ಸಂಪರ್ಕ ಕಡಿತಗೊಂಡಿರುವ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿದ್ದ 28 ಜನರು ಮತ್ತು 20 ಸೈನಿಕರನ್ನು ಭಾನುವಾರ ಸ್ಥಳಾಂತರಿಸಲಾಗಿದೆ.</p>.<p>ಸ್ಥಳೀಯರು ಸೇರಿದಂತೆ ಟ್ಯಾಕ್ಸಿ ಚಾಲಕರು ಮತ್ತು ಚಾಟೆನ್ನಲ್ಲಿ ನೆಲಸಿದ್ದ ಸರ್ಕಾರಿ ಅಧಿಕಾರಿಗಳನ್ನು ಸ್ಥಳಾಂತರಿಸಲು ಹೆಲಿಕಾಪ್ಟರ್ ನಿಯೋಜಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಮೂವರು ಅಪ್ರಾಪ್ತರು ಸೇರಿದಂತೆ 28 ಜನರನ್ನು ಯಶಸ್ವಿಯಾಗಿ ಸ್ಥಳಾಂತರಿಸಲಾಗಿದೆ. ಇವರೆಲ್ಲರೂ ಸುರಕ್ಷಿತವಾಗಿದ್ದಾರೆ. ಹೆಲಿಕಾಪ್ಟರ್ ಬಳಸಿ ಎರಡು ಸುತ್ತಿನ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಮೊದಲ ಸುತ್ತಿನಲ್ಲಿ ನಾಗರಿಕರು ಮತ್ತು ಎರಡನೇ ಸುತ್ತಿನಲ್ಲಿ ಸೈನಿಕರನ್ನು ಸ್ಥಳಾಂತರ ಮಾಡಲಾಯಿತು ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ನೈಸರ್ಗಿಕ ವಿಕೋಪದಲ್ಲಿ ಸಿಲುಕಿರುವ ಎಲ್ಲರನ್ನೂ ರಕ್ಷಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.ಸಿಕ್ಕಿಂ ಭೂಕುಸಿತ | ಸುಧಾರಿಸಿದ ಹವಾಮಾನ; 59 ಪ್ರವಾಸಿಗರ ಏರ್ಲಿಫ್ಟ್.ಸೇನಾ ಶಿಬಿರದ ಮೇಲೆ ಭೂಕುಸಿತ: 3 ಸೇನಾ ಸಿಬ್ಬಂದಿ ಮೃತ, 6 ಸೈನಿಕರು ನಾಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>