<p><strong>ನವದೆಹಲಿ:</strong> ಮಳೆ ಹಾನಿ, ಪ್ರವಾಹ, ಪ್ರಕೃತಿ ವಿಕೋಪಗಳಿಂದ 2024-25ರಲ್ಲಿ 2,800 ಜನರು ಪ್ರಾಣ ಕಳೆದುಕೊಂಡಿದ್ದು, 3.47 ಲಕ್ಷ ಮನೆಗಳು ಹಾನಿಗೊಳಗಾಗಿವೆ.</p><p>ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದರು.</p><p>ಮಧ್ಯಪ್ರದೇಶದಲ್ಲಿ 373, ಹಿಮಾಚಲ ಪ್ರದೇಶದಲ್ಲಿ 358, ಮತ್ತು ಗುಜರಾತ್ನಲ್ಲಿ 230 ಜನರು ಮಳೆ ಹಾನಿ, ಪ್ರವಾಹ, ಪ್ರಕೃತಿ ವಿಕೋಪಗಳಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದರು.</p><p>ಪ್ರಸಕ್ತ ಸಾಲಿನಲ್ಲಿ 2,803 ಜನರು ಪ್ರಾಣಕಳೆದುಕೊಂಡಿದ್ದು, 3.47 ಲಕ್ಷ ಮನೆಗಳು ಹಾನಿಗೊಳಗಾಗಿವೆ, 58,835 ರಾಸುಗಳು ಸಾವನ್ನಪ್ಪಿವೆ. ಒಟ್ಟು 10.23 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದೆ ಎಂದು ಅವರು ಮಾಹಿತಿ ನೀಡಿದರು.</p><p>ವಿಪತ್ತು ಪರಿಹಾರ ನಿಧಿಯಿಂದ ಮೊದಲ ಕಂತಿನಲ್ಲಿ ₹ 10,728 ಕೋಟಿ ಬಿಡುಗಡೆ ಮಾಡಲಾಗಿತ್ತು, ಎರಡನೇ ಕಂತಿನಲ್ಲಿ ₹ 4,150 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.</p><p>ಕರ್ನಾಟಕದಲ್ಲಿ, ವಿಶೇಷವಾಗಿ ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರವಾಹದಿಂದ ಉಂಟಾದ ಹಾನಿಯ ಮೌಲ್ಯಮಾಪನವನ್ನು ಸರ್ಕಾರ ನಡೆಸಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಹಾಯಕ್ಕಾಗಿ ಯಾವುದೇ ಅಹವಾಲು ಬಂದಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಳೆ ಹಾನಿ, ಪ್ರವಾಹ, ಪ್ರಕೃತಿ ವಿಕೋಪಗಳಿಂದ 2024-25ರಲ್ಲಿ 2,800 ಜನರು ಪ್ರಾಣ ಕಳೆದುಕೊಂಡಿದ್ದು, 3.47 ಲಕ್ಷ ಮನೆಗಳು ಹಾನಿಗೊಳಗಾಗಿವೆ.</p><p>ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದರು.</p><p>ಮಧ್ಯಪ್ರದೇಶದಲ್ಲಿ 373, ಹಿಮಾಚಲ ಪ್ರದೇಶದಲ್ಲಿ 358, ಮತ್ತು ಗುಜರಾತ್ನಲ್ಲಿ 230 ಜನರು ಮಳೆ ಹಾನಿ, ಪ್ರವಾಹ, ಪ್ರಕೃತಿ ವಿಕೋಪಗಳಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದರು.</p><p>ಪ್ರಸಕ್ತ ಸಾಲಿನಲ್ಲಿ 2,803 ಜನರು ಪ್ರಾಣಕಳೆದುಕೊಂಡಿದ್ದು, 3.47 ಲಕ್ಷ ಮನೆಗಳು ಹಾನಿಗೊಳಗಾಗಿವೆ, 58,835 ರಾಸುಗಳು ಸಾವನ್ನಪ್ಪಿವೆ. ಒಟ್ಟು 10.23 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದೆ ಎಂದು ಅವರು ಮಾಹಿತಿ ನೀಡಿದರು.</p><p>ವಿಪತ್ತು ಪರಿಹಾರ ನಿಧಿಯಿಂದ ಮೊದಲ ಕಂತಿನಲ್ಲಿ ₹ 10,728 ಕೋಟಿ ಬಿಡುಗಡೆ ಮಾಡಲಾಗಿತ್ತು, ಎರಡನೇ ಕಂತಿನಲ್ಲಿ ₹ 4,150 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.</p><p>ಕರ್ನಾಟಕದಲ್ಲಿ, ವಿಶೇಷವಾಗಿ ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರವಾಹದಿಂದ ಉಂಟಾದ ಹಾನಿಯ ಮೌಲ್ಯಮಾಪನವನ್ನು ಸರ್ಕಾರ ನಡೆಸಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಹಾಯಕ್ಕಾಗಿ ಯಾವುದೇ ಅಹವಾಲು ಬಂದಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>