<p><strong>ಸುಕ್ಮಾ</strong> <strong>(ಛತ್ತೀಸಗಢ)</strong>: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಬುಧವಾರ 29 ನಕ್ಸಲರು ಪೊಲೀಸರ ಎದುರು ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಕಾನೂನುಬಾಹಿರ ಸಿಪಿಐ (ಮಾವೋವಾದಿ) ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದ ಈ ನಕ್ಸಲರು, ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯಿಂದ ಪ್ರಭಾವಿತಗೊಂಡು ಹಿರಿಯ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಅಧಿಕಾರಗಳ ಮುಂದೆ ಶರಣಾಗಿದ್ದಾರೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.</p>.<p>ಶರಣಾದವರ ಪೈಕಿ ಮಾವೋವಾದಿಗಳ ಪ್ರಮುಖ ಸಂಘಟನೆಯಾದ ಗೋಗುಂದಾದ ದಂಡಕಾರಣ್ಯ ಆದಿವಾಸಿ ಕಿಸಾನ್ ಮಜ್ದೂರ್ನ ಮುಖ್ಯಸ್ಥ ಪೋಡಿಯಂ ಬುಧ್ರಾ ಕೂಡ ಒಬ್ಬರು. ಇವರ ಸುಳಿವು ನೀಡಿದವರಿಗೆ ₹2 ಲಕ್ಷ ಬಹುಮಾನವನ್ನು ಘೋಷಿಸಲಾಗಿತ್ತು.</p>.<p class="title">‘ಗೋಗುಂದಾದಲ್ಲಿ ಇತ್ತೀಚೆಗೆ ನಿರ್ಮಿಸಿದ ಭದ್ರತಾ ಶಿಬಿರವು ನಕ್ಸಲರ ಶರಣಾಗತಿಯಲ್ಲಿ ಮಹತ್ವದ ಪಾತ್ರವಹಿಸಿದೆ. ಅಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಗಳು ತೀವ್ರಗೊಂಡ ಬಳಿಕ ನಕ್ಸಲರ ಚಟುವಟಿಕೆ ಕಡಿಮೆಯಾಗಿದೆ’ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಕ್ಮಾ</strong> <strong>(ಛತ್ತೀಸಗಢ)</strong>: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಬುಧವಾರ 29 ನಕ್ಸಲರು ಪೊಲೀಸರ ಎದುರು ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಕಾನೂನುಬಾಹಿರ ಸಿಪಿಐ (ಮಾವೋವಾದಿ) ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದ ಈ ನಕ್ಸಲರು, ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯಿಂದ ಪ್ರಭಾವಿತಗೊಂಡು ಹಿರಿಯ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಅಧಿಕಾರಗಳ ಮುಂದೆ ಶರಣಾಗಿದ್ದಾರೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.</p>.<p>ಶರಣಾದವರ ಪೈಕಿ ಮಾವೋವಾದಿಗಳ ಪ್ರಮುಖ ಸಂಘಟನೆಯಾದ ಗೋಗುಂದಾದ ದಂಡಕಾರಣ್ಯ ಆದಿವಾಸಿ ಕಿಸಾನ್ ಮಜ್ದೂರ್ನ ಮುಖ್ಯಸ್ಥ ಪೋಡಿಯಂ ಬುಧ್ರಾ ಕೂಡ ಒಬ್ಬರು. ಇವರ ಸುಳಿವು ನೀಡಿದವರಿಗೆ ₹2 ಲಕ್ಷ ಬಹುಮಾನವನ್ನು ಘೋಷಿಸಲಾಗಿತ್ತು.</p>.<p class="title">‘ಗೋಗುಂದಾದಲ್ಲಿ ಇತ್ತೀಚೆಗೆ ನಿರ್ಮಿಸಿದ ಭದ್ರತಾ ಶಿಬಿರವು ನಕ್ಸಲರ ಶರಣಾಗತಿಯಲ್ಲಿ ಮಹತ್ವದ ಪಾತ್ರವಹಿಸಿದೆ. ಅಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಗಳು ತೀವ್ರಗೊಂಡ ಬಳಿಕ ನಕ್ಸಲರ ಚಟುವಟಿಕೆ ಕಡಿಮೆಯಾಗಿದೆ’ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>