ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ಜಿ ಹಗರಣ: ಮಾಜಿ ಸಚಿವ ರಾಜಾ ಹಾಗೂ ಇತರರ ಖುಲಾಸೆ ಪ್ರಶ್ನಿಸಿ ಸಿಬಿಐ, ಇ.ಡಿ ಅರ್ಜಿ

10ರಂದು ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಿರುವ ದೆಹಲಿ ಹೈಕೋರ್ಟ್‌
Last Updated 31 ಆಗಸ್ಟ್ 2020, 14:38 IST
ಅಕ್ಷರ ಗಾತ್ರ

ನವದೆಹಲಿ:2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ಕೇಂದ್ರದ ಮಾಜಿ ಸಚಿವ ಎ.ರಾಜಾ ಹಾಗೂ ಇತರರನ್ನು ದೋಷಮುಕ್ತಗೊಳಿಸಿದ್ದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇ.ಡಿ), ಅರ್ಜಿ ವಿಚಾರಣೆಯನ್ನು ಶೀಘ್ರವೇ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿವೆ.

ನ್ಯಾಯಮೂರ್ತಿ ಬ್ರಿಜೇಶ್‌ ಸೇಠಿ ಅರ್ಜಿ ವಿಚಾರಣೆ ನಡೆಸುವರು. ವಿಚಾರಣೆಯನ್ನು ಸೆ. 10ಕ್ಕೆ ನಿಗದಿಪಡಿಸಲಾಗಿದೆ.

2ಜಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಮಾಡಿದ ಆರೋಪದಿಂದ ಮುಕ್ತಗೊಂಡಿರುವ ಕಂಪನಿಯೊಂದು, ಇ.ಡಿ ಜಪ್ತಿ ಮಾಡಿರುವ ₹ 22 ಕೋಟಿ ಮೌಲ್ಯದ ತನ್ನ ಆಸ್ತಿಯನ್ನು ತನಗೆ ಮರಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದೆ. ಈ ಅರ್ಜಿ ವಿಚಾರಣೆಯೂ ಸೆ. 10ರಂದು ನಡೆಯಲಿದೆ.

ಹಗರಣಕ್ಕೆ ಸಂಬಂಧಿಸಿ ಕೇಂದ್ರದ ಮಾಜಿ ಸಚಿವ ಎ.ರಾಜಾ, ಡಿಎಂಕೆ ಸಂಸದೆ ಕನಿಮೋಳಿ ಹಾಗೂ ಇತರರ ವಿರುದ್ಧ ಸಿಬಿಐ ಹಾಗೂ ಇ.ಡಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದವು. ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ ಎಲ್ಲರನ್ನು 2017ರ ಡಿಸೆಂಬರ್‌ 21ರಂದು ದೋಷಮುಕ್ತಗೊಳಿಸಿ ತೀರ್ಪು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT