<p><strong>ನವದೆಹಲಿ (ಪಿಟಿಐ):</strong> 2ಜಿ ತರಂಗಾಂತರ ಹಂಚಿಕೆ ಪ್ರಕರಣದಲ್ಲಿ ಗೃಹ ಸಚಿವ ಪಿ.ಚಿದಂಬರಂ ಅವರನ್ನು ವಿಚಾರಣೆಗೆ ಒಳಪಡಿಸುವುದಕ್ಕೆ ಸಿಬಿಐ ಮಂಗಳವಾರ ವಿರೋಧ ವ್ಯಕ್ತಪಡಿಸಿದೆ. <br /> <br /> ಚಿದಂಬರಂ ಅವರನ್ನು ವಿಚಾರಣೆಗೆ ಒಳಪಡಿಸುವುದು ತನ್ನ ಅಧಿಕಾರದ ವ್ಯಾಪ್ತಿ ಮೀರಿದ್ದು ಎಂದು ಅದು ಸುಪ್ರೀಂಕೋರ್ಟ್ಗೆ ತಿಳಿಸಿದೆ.<br /> <br /> ಎ.ರಾಜಾ ಅವರು ದೂರಸಂಪರ್ಕ ಸಚಿವರಾಗಿದ್ದಾಗ ನಡೆದ ಈ ಹಗರಣದ ತನಿಖೆ ಪೂರ್ಣಗೊಂಡಿದೆ ಎಂದು ಹೇಳಿದ ಸಿಬಿಐ, ಚಿದಂಬರಂ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಕೋರಿ ಜನತಾ ಪಕ್ಷದ ಅಧ್ಯಕ್ಷ ಸುಬ್ರಮಣಿಯಂ ಸ್ವಾಮಿ ಅವರು ಸಲ್ಲಿಸಿದ ಮನವಿಯನ್ನು ವಿರೋಧಿಸಿತು.<br /> <br /> ಹಗರಣದಲ್ಲಿ ರಾಜಾ ಜತೆ ಚಿದಂಬರಂ ಕೂಡ ಭಾಗಿಯಾಗಿದ್ದಾರೆ, ಆದ ಕಾರಣ ಅವರನ್ನೂ ವಿಚಾರಣೆಗೆ ಒಳಪಡಿಸಬೇಕೆಂದು ಅವರು ಮನವಿಯಲ್ಲಿ ಕೋರಿದ್ದರು.<br /> <br /> ಈ ಮನವಿಗೆ ಕೇಂದ್ರವೂ ಆಕ್ಷೇಪ ವ್ಯಕ್ತಪಡಿಸಿತು. ಸುಬ್ರಮಣಿಯಂ ಸ್ವಾಮಿ ಅವರು ಇಂಥದ್ದೇ ಮನವಿಯನ್ನು ವಿಚಾರಣಾ ನ್ಯಾಯಾಲಯದಲ್ಲಿಯೂ ಸಲ್ಲಿಸಿದ್ದಾರೆ, ಹಾಗಾಗಿ ಈ ವಿಚಾರವನ್ನು ವಿಶೇಷ ಸಿಬಿಐ ನ್ಯಾಯಾಲಯ ಇತ್ಯರ್ಥಪಡಿಸುತ್ತದೆ ಎಂದು ಅದು ಹೇಳಿತು.<br /> <br /> ಸುಪ್ರೀಂಕೋರ್ಟ್ ಇಂಥ ಆದೇಶವನ್ನು ನೀಡಲಾಗದು, ಇದು ವಿಚಾರಣಾ ನ್ಯಾಯಾಲಯಕ್ಕೆ ಬಿಟ್ಟ ವಿಚಾರ ಎಂದು ಸಿಬಿಐ ತಿಳಿಸಿತು.<br /> <br /> ಹೆಚ್ಚಿನ ವಿಚಾರಣೆ ಅಥವಾ ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳನ್ನು ಸೇರಿಸುವ ವಿಚಾರವನ್ನು ವಿಚಾರಣಾ ನ್ಯಾಯಾಲಯ ನಿರ್ಧರಿಸುತ್ತದೆ ಎಂದು ಸಿಬಿಐ ಪರ ಹಿರಿಯ ವಕೀಲ ಕೆ.ಕೆ.ವೇಣುಗೋಪಾಲ್ ಅವರು, ನ್ಯಾಯಮೂರ್ತಿ ಜಿ.ಎಸ್.ಸಿಂಘ್ವಿ ಹಾಗೂ ಎ.ಕೆ.ಆಂಟನಿ ಅವರನ್ನು ಒಳಗೊಂಡ ಪೀಠಕ್ಕೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> 2ಜಿ ತರಂಗಾಂತರ ಹಂಚಿಕೆ ಪ್ರಕರಣದಲ್ಲಿ ಗೃಹ ಸಚಿವ ಪಿ.ಚಿದಂಬರಂ ಅವರನ್ನು ವಿಚಾರಣೆಗೆ ಒಳಪಡಿಸುವುದಕ್ಕೆ ಸಿಬಿಐ ಮಂಗಳವಾರ ವಿರೋಧ ವ್ಯಕ್ತಪಡಿಸಿದೆ. <br /> <br /> ಚಿದಂಬರಂ ಅವರನ್ನು ವಿಚಾರಣೆಗೆ ಒಳಪಡಿಸುವುದು ತನ್ನ ಅಧಿಕಾರದ ವ್ಯಾಪ್ತಿ ಮೀರಿದ್ದು ಎಂದು ಅದು ಸುಪ್ರೀಂಕೋರ್ಟ್ಗೆ ತಿಳಿಸಿದೆ.<br /> <br /> ಎ.ರಾಜಾ ಅವರು ದೂರಸಂಪರ್ಕ ಸಚಿವರಾಗಿದ್ದಾಗ ನಡೆದ ಈ ಹಗರಣದ ತನಿಖೆ ಪೂರ್ಣಗೊಂಡಿದೆ ಎಂದು ಹೇಳಿದ ಸಿಬಿಐ, ಚಿದಂಬರಂ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಕೋರಿ ಜನತಾ ಪಕ್ಷದ ಅಧ್ಯಕ್ಷ ಸುಬ್ರಮಣಿಯಂ ಸ್ವಾಮಿ ಅವರು ಸಲ್ಲಿಸಿದ ಮನವಿಯನ್ನು ವಿರೋಧಿಸಿತು.<br /> <br /> ಹಗರಣದಲ್ಲಿ ರಾಜಾ ಜತೆ ಚಿದಂಬರಂ ಕೂಡ ಭಾಗಿಯಾಗಿದ್ದಾರೆ, ಆದ ಕಾರಣ ಅವರನ್ನೂ ವಿಚಾರಣೆಗೆ ಒಳಪಡಿಸಬೇಕೆಂದು ಅವರು ಮನವಿಯಲ್ಲಿ ಕೋರಿದ್ದರು.<br /> <br /> ಈ ಮನವಿಗೆ ಕೇಂದ್ರವೂ ಆಕ್ಷೇಪ ವ್ಯಕ್ತಪಡಿಸಿತು. ಸುಬ್ರಮಣಿಯಂ ಸ್ವಾಮಿ ಅವರು ಇಂಥದ್ದೇ ಮನವಿಯನ್ನು ವಿಚಾರಣಾ ನ್ಯಾಯಾಲಯದಲ್ಲಿಯೂ ಸಲ್ಲಿಸಿದ್ದಾರೆ, ಹಾಗಾಗಿ ಈ ವಿಚಾರವನ್ನು ವಿಶೇಷ ಸಿಬಿಐ ನ್ಯಾಯಾಲಯ ಇತ್ಯರ್ಥಪಡಿಸುತ್ತದೆ ಎಂದು ಅದು ಹೇಳಿತು.<br /> <br /> ಸುಪ್ರೀಂಕೋರ್ಟ್ ಇಂಥ ಆದೇಶವನ್ನು ನೀಡಲಾಗದು, ಇದು ವಿಚಾರಣಾ ನ್ಯಾಯಾಲಯಕ್ಕೆ ಬಿಟ್ಟ ವಿಚಾರ ಎಂದು ಸಿಬಿಐ ತಿಳಿಸಿತು.<br /> <br /> ಹೆಚ್ಚಿನ ವಿಚಾರಣೆ ಅಥವಾ ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳನ್ನು ಸೇರಿಸುವ ವಿಚಾರವನ್ನು ವಿಚಾರಣಾ ನ್ಯಾಯಾಲಯ ನಿರ್ಧರಿಸುತ್ತದೆ ಎಂದು ಸಿಬಿಐ ಪರ ಹಿರಿಯ ವಕೀಲ ಕೆ.ಕೆ.ವೇಣುಗೋಪಾಲ್ ಅವರು, ನ್ಯಾಯಮೂರ್ತಿ ಜಿ.ಎಸ್.ಸಿಂಘ್ವಿ ಹಾಗೂ ಎ.ಕೆ.ಆಂಟನಿ ಅವರನ್ನು ಒಳಗೊಂಡ ಪೀಠಕ್ಕೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>