ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದ್ರಬಾಬು ನಾಯ್ಡು ಕಾರ್ಯಕ್ರಮದಲ್ಲಿ ಮತ್ತೆ ಕಾಲ್ತುಳಿತ: ಮೂರು ಸಾವು

Last Updated 1 ಜನವರಿ 2023, 16:16 IST
ಅಕ್ಷರ ಗಾತ್ರ

ಗುಂಟೂರು(ಆಂಧ್ರ ಪ್ರದೇಶ): ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ಪಕ್ಷದ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರು ಸಂಕ್ರಾಂತಿ ಹಬ್ಬದ ಅಂಗವಾಗಿ ಅಯೋಜಿಸಿದ್ದ ಸೀರೆ ವಿತರಣೆ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಮತ್ತೆ ಮೂವರು ಮೃತಪಟ್ಟಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದಷ್ಟೇ ಟಿಡಿಪಿ ನಡೆಸಿದ ರ್‍ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 8 ಜನರು ಮೃತಪಟ್ಟ ಘಟನೆ ನಡೆದ ಬೆನ್ನಲೇ ಮತ್ತೊಂದು ಕಾಲ್ತುಳಿತ ಸಂಭವಿಸಿದೆ.

ಆಂಧ್ರದ ಗುಂಟೂರಿನ ವಿಕಾಸನಗರದಲ್ಲಿ ಭಾನುವಾರ ಈ ದುರಂತ ಸಂಭವಿಸಿದೆ. ಸಂಕ್ರಾಂತಿ ಹಬ್ಬದ ಅಂಗವಾಗಿ ಸೀರೆ ಹಂಚುತ್ತಿದ್ದ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಹಲವಾರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಚಂದ್ರಬಾಬು ನಾಯ್ಡು ಭಾಷಣದ ಬಳಿಕ ನೂಕುನುಗ್ಗಲು ಉಂಟಾಯಿತು ಎಂದು ಸ್ಥಳೀಯರು ಹೇಳಿದ್ದಾರೆ. ಉಡುಗೊರೆ ವಿತರಣೆಯಲ್ಲಿ ಅವ್ಯವಸ್ಥೆ ಉಂಟಾದ ಕಾರಣ ಕಾಲ್ತುಳಿತ ಸಂಭವಿಸಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಘಟನೆ ಬಗ್ಗೆ ತನಿಖೆ ನಡೆಸುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT