<p><strong>ಜೈಪುರ</strong>: ರಾಜಸ್ಥಾನ ಉಪಮುಖ್ಯಮಂತ್ರಿ ಪ್ರೇಮ್ ಚಂದ್ ಬೈರ್ವಾ ಅವರಿಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪದಡಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆರೋಪಿಗಳು ಇಲ್ಲಿನ ಕೇಂದ್ರ ಕಾರಾಗೃಹದಿಂದ ಕರೆ ಮಾಡಿ, ಬೈರ್ವಾ ಅವರಿಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p>.ವೃತ್ತಿ ಬದುಕಿನ ಈ ಹಂತದಲ್ಲೂ ಸುಧಾರಣೆಗೆ ಒತ್ತು ನೀಡುವ ಕೊಹ್ಲಿ: ಡಿಕೆ ಶ್ಲಾಘನೆ.ರಾಜ್ಯದಲ್ಲಿ ಕ್ಯಾಂಪಸ್ ಆರಂಭಿಸಲು ಪೋರ್ಟ್ಸ್ ಮೌತ್ ವಿಶ್ವವಿದ್ಯಾಲಯ ಒಲವು. <p>ಪೊಲೀಸ್ ಕಂಟ್ರೋಲ್ ರೂಮ್ಗೆ ಬೆದರಿಕೆ ಕರೆ ಬಂದಿತ್ತು. ಈ ಸಂಬಂಧ ತನಿಖೆ ನಡೆಸಿದಾಗ ಕರೆ ಬಂದ ಮೊಬೈಲ್ ಸಂಖ್ಯೆಯನ್ನು ಪತ್ತೆಹಚ್ಚಲಾಯಿತು. ಆ ಕರೆ ಬಂದಿದ್ದು ಕಾರಾಗೃಹದಿಂದಲೇ ಎಂದು ಖಚಿತಪಡಿಸಿಕೊಳ್ಳಲಾಯಿತು. ಕಾರಾಗೃಹದಲ್ಲಿ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು. ಬಳಿಕ ಆರೋಪಿಗಳಿಂದ ಮೊಬೈಲ್ ಅನ್ನು ವಶಪಡಿಸಿಕೊಳ್ಳಲಾಯಿತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>ಕೆಳಹಂತದ ವ್ಯವಸ್ಥೆಯಲ್ಲಿ ಲೋಪಗಳಿದ್ದು, ಮೊಬೈಲ್ ಫೋನ್ಗಳು ಮತ್ತು ಸಿಮ್ ಕಾರ್ಡ್ಗಳು ಜೈಲಿಗೆ ತಲುಪುತ್ತವೆ ಎಂದು ಡಿಜಿಪಿ ಉತ್ಕಲ್ ರಂಜನ್ ಸಾಹೂ ಹೇಳಿದ್ದಾರೆ.</p><p>ಜೈಲುಗಳಲ್ಲಿ ಹೈಟೆಕ್ ಜಾಮರ್ ವ್ಯವಸ್ಥೆಯನ್ನು ಅಳವಡಿಸಲಾಗುವುದು, ಇದರಿಂದಾಗಿ ಯಾರಾದರೂ ಜೈಲಿಗೆ ಮೊಬೈಲ್ ಫೋನ್ಗಳು ಮತ್ತು ಸಿಮ್ ಕಾರ್ಡ್ಗಳನ್ನು ಕಳುಹಿಸಿದರೂ ಕರೆಗಳನ್ನು ನಿರ್ಬಂಧಿಸಲಾಗುತ್ತದೆ ಎಂದು ಸಾಹೂ ತಿಳಿಸಿದ್ದಾರೆ.</p> .ಬಿಜೆಪಿ ಅವಧಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ: ಪೊಲೀಸರೊಂದಿಗೆ ಕಾಂಗ್ರೆಸ್ ಘರ್ಷಣೆ.ಡಿಕೆಶಿಯನ್ನು ಹಿಂಬಾಗಿಲ ಮೂಲಕ ಹಣಿಯಲು ಯತ್ನಿಸುತ್ತಿರುವ ಬಿಜೆಪಿ: ರಮೇಶ್ ಬಾಬು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ರಾಜಸ್ಥಾನ ಉಪಮುಖ್ಯಮಂತ್ರಿ ಪ್ರೇಮ್ ಚಂದ್ ಬೈರ್ವಾ ಅವರಿಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪದಡಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆರೋಪಿಗಳು ಇಲ್ಲಿನ ಕೇಂದ್ರ ಕಾರಾಗೃಹದಿಂದ ಕರೆ ಮಾಡಿ, ಬೈರ್ವಾ ಅವರಿಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p>.ವೃತ್ತಿ ಬದುಕಿನ ಈ ಹಂತದಲ್ಲೂ ಸುಧಾರಣೆಗೆ ಒತ್ತು ನೀಡುವ ಕೊಹ್ಲಿ: ಡಿಕೆ ಶ್ಲಾಘನೆ.ರಾಜ್ಯದಲ್ಲಿ ಕ್ಯಾಂಪಸ್ ಆರಂಭಿಸಲು ಪೋರ್ಟ್ಸ್ ಮೌತ್ ವಿಶ್ವವಿದ್ಯಾಲಯ ಒಲವು. <p>ಪೊಲೀಸ್ ಕಂಟ್ರೋಲ್ ರೂಮ್ಗೆ ಬೆದರಿಕೆ ಕರೆ ಬಂದಿತ್ತು. ಈ ಸಂಬಂಧ ತನಿಖೆ ನಡೆಸಿದಾಗ ಕರೆ ಬಂದ ಮೊಬೈಲ್ ಸಂಖ್ಯೆಯನ್ನು ಪತ್ತೆಹಚ್ಚಲಾಯಿತು. ಆ ಕರೆ ಬಂದಿದ್ದು ಕಾರಾಗೃಹದಿಂದಲೇ ಎಂದು ಖಚಿತಪಡಿಸಿಕೊಳ್ಳಲಾಯಿತು. ಕಾರಾಗೃಹದಲ್ಲಿ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು. ಬಳಿಕ ಆರೋಪಿಗಳಿಂದ ಮೊಬೈಲ್ ಅನ್ನು ವಶಪಡಿಸಿಕೊಳ್ಳಲಾಯಿತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>ಕೆಳಹಂತದ ವ್ಯವಸ್ಥೆಯಲ್ಲಿ ಲೋಪಗಳಿದ್ದು, ಮೊಬೈಲ್ ಫೋನ್ಗಳು ಮತ್ತು ಸಿಮ್ ಕಾರ್ಡ್ಗಳು ಜೈಲಿಗೆ ತಲುಪುತ್ತವೆ ಎಂದು ಡಿಜಿಪಿ ಉತ್ಕಲ್ ರಂಜನ್ ಸಾಹೂ ಹೇಳಿದ್ದಾರೆ.</p><p>ಜೈಲುಗಳಲ್ಲಿ ಹೈಟೆಕ್ ಜಾಮರ್ ವ್ಯವಸ್ಥೆಯನ್ನು ಅಳವಡಿಸಲಾಗುವುದು, ಇದರಿಂದಾಗಿ ಯಾರಾದರೂ ಜೈಲಿಗೆ ಮೊಬೈಲ್ ಫೋನ್ಗಳು ಮತ್ತು ಸಿಮ್ ಕಾರ್ಡ್ಗಳನ್ನು ಕಳುಹಿಸಿದರೂ ಕರೆಗಳನ್ನು ನಿರ್ಬಂಧಿಸಲಾಗುತ್ತದೆ ಎಂದು ಸಾಹೂ ತಿಳಿಸಿದ್ದಾರೆ.</p> .ಬಿಜೆಪಿ ಅವಧಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ: ಪೊಲೀಸರೊಂದಿಗೆ ಕಾಂಗ್ರೆಸ್ ಘರ್ಷಣೆ.ಡಿಕೆಶಿಯನ್ನು ಹಿಂಬಾಗಿಲ ಮೂಲಕ ಹಣಿಯಲು ಯತ್ನಿಸುತ್ತಿರುವ ಬಿಜೆಪಿ: ರಮೇಶ್ ಬಾಬು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>