<p><strong>ಲೂಧಿಯಾನ:</strong> ಇಲ್ಲಿನ ಬಾಬಾ ಮುಕಂದ್ ಸಿಂಗ್ ನಗರದಲ್ಲಿ ಸೋಮವಾರ ಕಾರ್ಖಾನೆಯೊಂದರ ಛಾವಣಿ ಕುಸಿದು ಮೂವರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ನಲವತ್ತು ಜನರನ್ನು ಅವರಲ್ಲಿ ಹೆಚ್ಚಾಗಿ ಕಾರ್ಮಿಕರನ್ನು ಅವಘಡದ ಸ್ಥಳದಿಂದ ರಕ್ಷಿಸಲಾಗಿದೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಅವಶೇಷಗಳ ಅಡಿಯಲ್ಲಿ ಹೆಚ್ಚಿನ ಜನರು ಎಲ್ಲಿ ಸಿಲುಕಿದ್ದಾರೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>'ನಗರಸಭೆಯ ಅನುಮತಿಯಿಲ್ಲದೇ ಕಾರ್ಖಾನೆ ಮಾಲೀಕರು ಕಟ್ಟಡವನ್ನು ಲಿಂಟಲ್ ಮಟ್ಟದವರೆಗೆ ಎತ್ತರಿಸಿದ್ದರು.' ಎಂದು ಜಿಲ್ಲಾಧಿಕಾರಿ ವರಿಂದರ್ ಶರ್ಮಾ ಹೇಳಿದ್ದಾರೆ.</p>.<p>ಸ್ಥಳಕ್ಕೆ ಆಗಮಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಸ್ಥಳೀಯ ಸಂಸ್ಥೆಗಳ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿವೆ.</p>.<p>ಘಟನೆ ಬಳಿಕ ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದರು. ಇನ್ನೊಬ್ಬರು ಅವಶೇಷಗಳ ರಾಶಿ ಕೆಳಗೆ ಶವವಾಗಿ ಪತ್ತೆಯಾಗಿದ್ದರೆ, ಮೂರನೇ ವ್ಯಕ್ತಿಯು ಗಾಯಗಳಿಂದಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸದ್ಯ ಕಾರ್ಖಾನೆಯ ಮಾಲೀಕರು ಮತ್ತು ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಲೂಧಿಯಾನ ಪೊಲೀಸ್ ಆಯುಕ್ತ ರಾಕೇಶ್ ಅಗರ್ವಾಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲೂಧಿಯಾನ:</strong> ಇಲ್ಲಿನ ಬಾಬಾ ಮುಕಂದ್ ಸಿಂಗ್ ನಗರದಲ್ಲಿ ಸೋಮವಾರ ಕಾರ್ಖಾನೆಯೊಂದರ ಛಾವಣಿ ಕುಸಿದು ಮೂವರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ನಲವತ್ತು ಜನರನ್ನು ಅವರಲ್ಲಿ ಹೆಚ್ಚಾಗಿ ಕಾರ್ಮಿಕರನ್ನು ಅವಘಡದ ಸ್ಥಳದಿಂದ ರಕ್ಷಿಸಲಾಗಿದೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಅವಶೇಷಗಳ ಅಡಿಯಲ್ಲಿ ಹೆಚ್ಚಿನ ಜನರು ಎಲ್ಲಿ ಸಿಲುಕಿದ್ದಾರೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>'ನಗರಸಭೆಯ ಅನುಮತಿಯಿಲ್ಲದೇ ಕಾರ್ಖಾನೆ ಮಾಲೀಕರು ಕಟ್ಟಡವನ್ನು ಲಿಂಟಲ್ ಮಟ್ಟದವರೆಗೆ ಎತ್ತರಿಸಿದ್ದರು.' ಎಂದು ಜಿಲ್ಲಾಧಿಕಾರಿ ವರಿಂದರ್ ಶರ್ಮಾ ಹೇಳಿದ್ದಾರೆ.</p>.<p>ಸ್ಥಳಕ್ಕೆ ಆಗಮಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಸ್ಥಳೀಯ ಸಂಸ್ಥೆಗಳ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿವೆ.</p>.<p>ಘಟನೆ ಬಳಿಕ ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದರು. ಇನ್ನೊಬ್ಬರು ಅವಶೇಷಗಳ ರಾಶಿ ಕೆಳಗೆ ಶವವಾಗಿ ಪತ್ತೆಯಾಗಿದ್ದರೆ, ಮೂರನೇ ವ್ಯಕ್ತಿಯು ಗಾಯಗಳಿಂದಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸದ್ಯ ಕಾರ್ಖಾನೆಯ ಮಾಲೀಕರು ಮತ್ತು ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಲೂಧಿಯಾನ ಪೊಲೀಸ್ ಆಯುಕ್ತ ರಾಕೇಶ್ ಅಗರ್ವಾಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>